AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಕಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮರು ಅರೆಸ್ಟ್: ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ ಸೂಚಿಸಿದ ಡಿವೈಎಸ್ಪಿ

ಬ್ಯಾಂಕ್ ಕಾಂಪೌಂಡ್ನಲ್ಲಿ ಮಷೀನ್ ಕಟ್ ಮಾಡುವ ಶಬ್ದ ಬಂದಿದೆ. ಇಬ್ಬರು ಕಳ್ಳರು ಆಕ್ಸಿಸ್ ಬ್ಯಾಂಕ್‌ ನ ಕಿಟಕಿ ಸರಳಗಳನ್ನು ಕಟ್ ಮಾಡಿದ್ದಾರೆ. ಇದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ರಘು ಮತ್ತು ರಮೇಶ್ ಎಂಬ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.

ಬ್ಯಾಂಕ್ ಕಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮರು ಅರೆಸ್ಟ್: ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ ಸೂಚಿಸಿದ ಡಿವೈಎಸ್ಪಿ
ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ
TV9 Web
| Updated By: ಆಯೇಷಾ ಬಾನು|

Updated on:Jul 21, 2022 | 6:01 PM

Share

ದಾವಣರೆಗೆ: ಬ್ಯಾಂಕ್ ದರೋಡೆ ಮಾಡಲು ಯತ್ನಸುತ್ತಿದ್ದ ಇಬ್ಬರು ಕಳ್ಳರನ್ನು ದಾವಣಗೆರೆ ಬಡಾವಣೆ ಪೋಲಿಸರು ಬಂಧಿಸಿದ್ದಾರೆ. ದಾವಣಗೆರೆ ಪಿಬಿ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್ನಲ್ಲಿ ದರೋಡೆಗೆ ಯತ್ನಿಸಿದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್ ಕಾಂಪೌಂಡ್ನಲ್ಲಿ ಮಷೀನ್ ಕಟ್ ಮಾಡುವ ಶಬ್ದ ಬಂದಿದೆ. ಇಬ್ಬರು ಕಳ್ಳರು ಆಕ್ಸಿಸ್ ಬ್ಯಾಂಕ್‌ ನ ಕಿಟಕಿ ಸರಳಗಳನ್ನು ಕಟ್ ಮಾಡಿದ್ದಾರೆ. ಇದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ರಘು ಮತ್ತು ರಮೇಶ್ ಎಂಬ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ. ಕಳ್ಳತನಕ್ಕೆ ಬಳಸಿದ ಆಯುಧಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಕಲಂ 457.380.527 ಐಪಿಸಿ ಪ್ರಕಾರ ಪ್ರಕರಣವನ್ನು ಬಡಾವಣೆ ಪೋಲಿಸರು ದಾಖಲಿಸಿಕೊಂಡಿದ್ದಾರೆ.

ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಬಡಾವಣೆ ಠಾಣೆಯ ಸಿಬ್ಬಂದಿಗಳಾದ ಧನಂಜಯ್ ರಾಜ ಅರಸ್ ಮತ್ತು ಸುರೇಶ್ ಎಲ್ ರವರ ಕರ್ತವ್ಯಕ್ಕೆ ನಗರ ಡಿವೈಎಸ್ಪಿ ನರಸಿಂಹ ವಿ ತಾಮ್ರದ್ವಜ ರವರು ಶ್ಲಾಘಿಸಿ ಸನ್ಮಾನಿಸಿದ್ದಾರೆ. ಹಾಗೂ ನಗದು ಬಹುಮಾನ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಡಾವಣೆ ಠಾಣೆಯ ಪಿಐ ಧನಂಜಯ್, ಸಿಪಿಐ ಸಂಚಾರರಾದ ಅನಿಲ್, ಕೆಟಿಜೆ ನಗರ ವೃತ್ತದ ಸಿಪಿಐ ಗುರುಬಸವರಾಜ್, ಜಿಲ್ಲಾ ರಕ್ಷಣಾಧಿಕಾರಗಳಾದ ರಿಷ್ಯಂತ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಹೊಡೆದಾಟ

ಧಾರವಾಡದ ಸ್ಟೇಶನ್ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಹೊಡೆದಾಟವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ನಿಡವಣಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ಹೊಡೆಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 6:01 pm, Thu, 21 July 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?