Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಕಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮರು ಅರೆಸ್ಟ್: ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ ಸೂಚಿಸಿದ ಡಿವೈಎಸ್ಪಿ

ಬ್ಯಾಂಕ್ ಕಾಂಪೌಂಡ್ನಲ್ಲಿ ಮಷೀನ್ ಕಟ್ ಮಾಡುವ ಶಬ್ದ ಬಂದಿದೆ. ಇಬ್ಬರು ಕಳ್ಳರು ಆಕ್ಸಿಸ್ ಬ್ಯಾಂಕ್‌ ನ ಕಿಟಕಿ ಸರಳಗಳನ್ನು ಕಟ್ ಮಾಡಿದ್ದಾರೆ. ಇದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ರಘು ಮತ್ತು ರಮೇಶ್ ಎಂಬ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.

ಬ್ಯಾಂಕ್ ಕಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮರು ಅರೆಸ್ಟ್: ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ ಸೂಚಿಸಿದ ಡಿವೈಎಸ್ಪಿ
ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ
Follow us
TV9 Web
| Updated By: ಆಯೇಷಾ ಬಾನು

Updated on:Jul 21, 2022 | 6:01 PM

ದಾವಣರೆಗೆ: ಬ್ಯಾಂಕ್ ದರೋಡೆ ಮಾಡಲು ಯತ್ನಸುತ್ತಿದ್ದ ಇಬ್ಬರು ಕಳ್ಳರನ್ನು ದಾವಣಗೆರೆ ಬಡಾವಣೆ ಪೋಲಿಸರು ಬಂಧಿಸಿದ್ದಾರೆ. ದಾವಣಗೆರೆ ಪಿಬಿ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್ನಲ್ಲಿ ದರೋಡೆಗೆ ಯತ್ನಿಸಿದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್ ಕಾಂಪೌಂಡ್ನಲ್ಲಿ ಮಷೀನ್ ಕಟ್ ಮಾಡುವ ಶಬ್ದ ಬಂದಿದೆ. ಇಬ್ಬರು ಕಳ್ಳರು ಆಕ್ಸಿಸ್ ಬ್ಯಾಂಕ್‌ ನ ಕಿಟಕಿ ಸರಳಗಳನ್ನು ಕಟ್ ಮಾಡಿದ್ದಾರೆ. ಇದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ರಘು ಮತ್ತು ರಮೇಶ್ ಎಂಬ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ. ಕಳ್ಳತನಕ್ಕೆ ಬಳಸಿದ ಆಯುಧಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಕಲಂ 457.380.527 ಐಪಿಸಿ ಪ್ರಕಾರ ಪ್ರಕರಣವನ್ನು ಬಡಾವಣೆ ಪೋಲಿಸರು ದಾಖಲಿಸಿಕೊಂಡಿದ್ದಾರೆ.

ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಬಡಾವಣೆ ಠಾಣೆಯ ಸಿಬ್ಬಂದಿಗಳಾದ ಧನಂಜಯ್ ರಾಜ ಅರಸ್ ಮತ್ತು ಸುರೇಶ್ ಎಲ್ ರವರ ಕರ್ತವ್ಯಕ್ಕೆ ನಗರ ಡಿವೈಎಸ್ಪಿ ನರಸಿಂಹ ವಿ ತಾಮ್ರದ್ವಜ ರವರು ಶ್ಲಾಘಿಸಿ ಸನ್ಮಾನಿಸಿದ್ದಾರೆ. ಹಾಗೂ ನಗದು ಬಹುಮಾನ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಡಾವಣೆ ಠಾಣೆಯ ಪಿಐ ಧನಂಜಯ್, ಸಿಪಿಐ ಸಂಚಾರರಾದ ಅನಿಲ್, ಕೆಟಿಜೆ ನಗರ ವೃತ್ತದ ಸಿಪಿಐ ಗುರುಬಸವರಾಜ್, ಜಿಲ್ಲಾ ರಕ್ಷಣಾಧಿಕಾರಗಳಾದ ರಿಷ್ಯಂತ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಹೊಡೆದಾಟ

ಧಾರವಾಡದ ಸ್ಟೇಶನ್ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಹೊಡೆದಾಟವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ನಿಡವಣಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ಹೊಡೆಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 6:01 pm, Thu, 21 July 22

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ