AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಅನೈತಿಕ ಪೊಲೀಸ್ ಗಿರಿ; ಕೆಆರ್​ಎಸ್​ ಪಕ್ಷದ ಮೂರು ಕಾರ್ಯಕರ್ತರ ಬಂಧನ

ಎಚ್‌ಕೆಆರ್ ಸರ್ಕಲ್‌ನ ಮಾಲತೇಶ, ಶಶಿಕುಮಾರ ಹಾಗೂ ನಿಟುವಳ್ಳಿಯ ಅಭಿಷೇಕ್ ಬಂಧಿತರು. ನಿಟುವಳ್ಳಿ ಆರೋಗ್ಯ ಕೇಂದ್ರದ ಬಳಿ ಜುಲೈ 31 ರಂದು ಲಸಿಕೆ ಅಭಿಯಾನ ನಡೆಯುವ ವೇಳೆ ಆಸ್ಪತ್ರೆಯವರು ಭ್ರಷ್ಟರಿದ್ದಾರೆ ಒಳಗೆ ನುಗ್ಗಿ ನಾವು ಫೇಸ್‌ಬುಕ್‌ನಲ್ಲಿ ಲೈವ್ ಮಾಡುತ್ತೇವೆ ಎಂದು ಹೇಳಿ ವಿಡಿಯೋ ಮಾಡಿದ್ದರು.

ದಾವಣಗೆರೆ: ಅನೈತಿಕ ಪೊಲೀಸ್ ಗಿರಿ;  ಕೆಆರ್​ಎಸ್​ ಪಕ್ಷದ ಮೂರು ಕಾರ್ಯಕರ್ತರ ಬಂಧನ
ಅಭಿಷೇಕ್ , ಮಾಲತೇಶ ಹಾಗೂ ಶಶಿಕುಮಾರ
TV9 Web
| Edited By: |

Updated on: Aug 08, 2021 | 2:06 PM

Share

ದಾವಣಗೆರೆ: ಜಿಲ್ಲೆಯ ನಿಟುವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಗಲಭೆಗೆ ಪ್ರಚೋದನೆ ನೀಡಿ ಅದನ್ನು ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟು,ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೆಆರ್‌ಎಸ್‌ (ಕರ್ನಾಟಕ ರಾಷ್ಟ್ರೀಯ ಸಮಿತಿ) ಪಕ್ಷದ ಮೂವರು ಕಾರ್ಯಕರ್ತರನ್ನು ದಾವಣಗೆರೆ ಜಿಲ್ಲೆಯ ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ.

ಎಚ್‌ಕೆಆರ್ ಸರ್ಕಲ್‌ನ ಮಾಲತೇಶ, ಶಶಿಕುಮಾರ ಹಾಗೂ ನಿಟುವಳ್ಳಿಯ ಅಭಿಷೇಕ್ ಬಂಧಿತರು. ನಿಟುವಳ್ಳಿ ಆರೋಗ್ಯ ಕೇಂದ್ರದ ಬಳಿ ಜುಲೈ 31 ರಂದು ಲಸಿಕೆ ಅಭಿಯಾನ ನಡೆಯುವ ವೇಳೆ ಆಸ್ಪತ್ರೆಯವರು ಭ್ರಷ್ಟರಿದ್ದಾರೆ ಒಳಗೆ ನುಗ್ಗಿ ನಾವು ಫೇಸ್‌ಬುಕ್‌ನಲ್ಲಿ ಲೈವ್ ಮಾಡುತ್ತೇವೆ ಎಂದು ಹೇಳಿ ವಿಡಿಯೋ ಮಾಡಿದ್ದರು. ಅಲ್ಲದೆ ಗಲಭೆಗೆ ಪ್ರಚೋದನೆ ನೀಡಿದ್ದರು. ಹೀಗಾಗಿ ಈ ಮೂವರನ್ನು ಠಾಣೆಗೆ ಕರೆತಂದ ಪೊಲೀಸರು ಪ್ರಕರಣ ದಾಖಲಿಸಿ ತಹಶೀಲ್ದಾರ್‌ಗೆ ವರದಿ ನೀಡಿದ್ದು, ವರದಿ ವಿಚಾರಣೆಯ ಹಂತದಲ್ಲಿದೆ.

ಠಾಣೆಗೆ ಕರೆತಂದ ವಿಚಾರವನ್ನೇ ಮನಸ್ಸಿನಲ್ಲಿ ಇಟ್ಟುಕೊಂಡ ಆರೋಪಿಗಳು ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಠಾಣೆಗೆ ಬರುತ್ತಿದ್ದಾಗ ಅವರನ್ನು ತಡೆದು ಆರೋಗ್ಯ ಕೇಂದ್ರದ ಬಳಿ ಮಾಡಿದ ವಿಡಿಯೋವನ್ನು ತೋರಿಸಿ ಇದನ್ನು ಡಿಲಿಟ್ ಮಾಡಬೇಕು ಎಂದರೆ 30 ಸಾವಿರ ನೀಡಬೇಕು. ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ನಿಮ್ಮ ವಿರುದ್ಧ ದೂರು ನೀಡುತ್ತೇವೆ ಎಂದು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಮತ್ತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಈ ಆರೋಪಿಗಳು ಕೆಎಸ್‌ಆರ್‌ಟಿಸಿ ನೌಕರರಿಗೂ ಕೂಡ ಬೆದರಿಕೆ ಒಡ್ಡಿದ್ದರು. ಭ್ರಷ್ಟಾಚಾರ ನಿರ್ಮೂಲನೆ ನೆಪದಲ್ಲಿ ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರಿಗೆ ಬೇದರಿಕೆ ಹಾಕಿ ಹಣ ಮಾಡುತ್ತಿದ್ದ ಆರೋಪದಡಿಯಲ್ಲಿ, ಮೂವರನ್ನು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪಾಕ್​ನಲ್ಲಿ ಹಿಂದೂ ದೇಗುಲ ಧ್ವಂಸ ಪ್ರಕರಣ: ಪೊಲೀಸರಿಗೆ ಛೀಮಾರಿ ಹಾಕಿದ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಾಧೀಶ, 20 ಮಂದಿ ಬಂಧನ

ಬಸವನಗುಡಿ ಬಳಿಯ ಪಿಜ್ಜಾ ಶಾಪ್​ನಲ್ಲಿ ಪ್ರೇಮಿಸಲು ನಿರಾಕರಿಸಿದ ಯುವತಿ ಮೇಲೆ ಹಲ್ಲೆ; ಆರೋಪಿ ಮ್ಯಾನೇಜರ್ ಬಂಧನ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ