ಉತ್ತರ ಕರ್ನಾಟಕದ ಬಹುತೇಕ ರಾಜಕಾರಣಿಗಳು ಬೆಂಗಳೂರಿನಲ್ಲಿ ವೈಭವದ ಜೀವನ ನಡೆಸ್ತಿದಾರೆ -ಆಮ್ ಆದ್ಮಿ ಮುಖಂಡ ಭಾಸ್ಕರ್ ರಾವ್

| Updated By: ಸಾಧು ಶ್ರೀನಾಥ್​

Updated on: Apr 30, 2022 | 3:20 PM

ಚುನಾವಣೆಯಲ್ಲಿ ಐದು ನೂರು, ಎರಡು ಸಾವಿರ ಕೊಟ್ಟು ಮತ ಹಾಕಿಸಿಕೊಂಡು ಅಧಿಕಾರ ಅನುಭವಿಸುತ್ತಾರೆ. ಇಂತಹ ವ್ಯವಸ್ಥೆಯನ್ನ ಕಿತ್ತು ಹಾಕಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಗ್ರಾಮ ಪಂಚಾಯತ್ ಮಟ್ಟದಿಂದ ಜಾಗೃತಿ ಶುರುವಾಗಬೇಕು ಎಂದು ಭಾಸ್ಕರ್ ರಾವ್ ಪ್ರಚಲಿತ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದ್ದಾರೆ.

ಉತ್ತರ ಕರ್ನಾಟಕದ ಬಹುತೇಕ ರಾಜಕಾರಣಿಗಳು ಬೆಂಗಳೂರಿನಲ್ಲಿ ವೈಭವದ ಜೀವನ ನಡೆಸ್ತಿದಾರೆ -ಆಮ್ ಆದ್ಮಿ ಮುಖಂಡ ಭಾಸ್ಕರ್ ರಾವ್
ಉತ್ತರ ಕರ್ನಾಟಕದ ಬಹುತೇಕ ರಾಜಕಾರಣಿಗಳು ಬೆಂಗಳೂರಿನಲ್ಲಿ ವೈಭವದ ಜೀವನ ನಡೆಸುತ್ತಿದ್ದಾರೆ -ಆಮ್ ಆದ್ಮಿ ಮುಖಂಡ ಭಾಸ್ಕರ್ ರಾವ್
Follow us on

ದಾವರಣಗೆರೆ: ಉತ್ತರ ಕರ್ನಾಟಕದ (North Karnataka) ಬಹುತೇಕ ರಾಜಕಾರಣಿಗಳು ಬೆಂಗಳೂರಿನಲ್ಲಿ ವೈಭವದ ಜೀವನ ನಡೆಸುತ್ತಿದ್ದಾರೆ. ಪ್ರತಿಷ್ಠಿತ ಬಡಾವಣೆಯಲ್ಲಿ ದೊಡ್ಡ ಬಂಗಲೆ ಕಟ್ಟಿಕೊಂಡು ಆಡಿ, ಬೇಂಜ್ ಸೇರಿದಂತೆ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಕಾರುಗಳಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು ಸುತ್ತಾಡುತ್ತಿದ್ದಾರೆ. ಆದ್ರೆ ಅವರ ಕ್ಷೇತ್ರಗಳಲ್ಲಿ ಮತ ಹಾಕಿದ ಜನರು ಫ್ಲೋರೈಡ್ ನೀರು ಕುಡಿಯವ ಸ್ಥಿತಿ ಇದೆ‌. ಇದು ಬದಲಾಗಬೇಕು ಎಂದು ಇತ್ತೀಚೆಗೆ ತಮ್ಮ ಐಪಿಎಸ್​ ಸೇವೆಗೆ ರಾಜೀನಾಮೆ ನೀಡಿ, ಆಮ್ ಆದ್ಮಿ ಪಕ್ಷ ಸೇರ್ಪೆಡೆಯಾಗುವ ಮೂಲಕ ರಾಜಕೀಯಕ್ಕೆ ಧುಮಿಕಿರುವ ಭಾಸ್ಕರ್ ರಾವ್ (AAP leader, Ex IPS Bhaskar Rao) ದಾವಣಗೆರೆಯಲ್ಲಿ (Davanagere) ಹೇಳಿದ್ದಾರೆ.

ದಾವಣಗೆರೆ ನಗರದ ಅರ್ಬನ್ ಕೋ ಆಪರೇಟಿವ್ ಸಭಾಂಗಣದಲ್ಲಿ ನಡೆದ ಸಂವಿಧಾನ ಉಳಿಸಿ ಸಭೆಯಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು ಜನ ಬದಲಾಗುತ್ತಿದ್ದಾರೆ‌. ಆದ್ರೆ ವ್ಯವಸ್ಥೆ ಮಾತ್ರ ಹಾಗೆಯೇ ಇದೆ. ರಾಜ್ಯ ಸರ್ಕಾರಕ್ಕೆ ಬರುವ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಮೇಲೆ 75 ಲಕ್ಷ ಕೋಟಿ ರೂಪಾಯಿ ಸಾಲವಿದೆ. ಚುನಾವಣೆಯಲ್ಲಿ ಐದು ನೂರು, ಎರಡು ಸಾವಿರ ಕೊಟ್ಟು ಮತ ಹಾಕಿಸಿಕೊಂಡು ಅಧಿಕಾರ ಅನುಭವಿಸುತ್ತಾರೆ. ಇಂತಹ ವ್ಯವಸ್ಥೆಯನ್ನ ಕಿತ್ತು ಹಾಕಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಗ್ರಾಮ ಪಂಚಾಯತ್ ಮಟ್ಟದಿಂದ ಜಾಗೃತಿ ಶುರುವಾಗಬೇಕು ಎಂದು ಭಾಸ್ಕರ್ ರಾವ್ ಪ್ರಚಲಿತ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಕರ್ನಾಟಕ ಕುರಿತಾದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ 

ಇದೂ ಓದಿ:
Akshaya Trutheeya: ಅನ್ನಪೂರ್ಣೇಶ್ವರಿ ಜನಿಸಿದ ದಿನ -ಅನಂತ ಶುಭವನ್ನು ತರುವ ಅಕ್ಷಯ ತದಿಗೆ ದಿನದ ನಾನಾ ಮಹತ್ವ, ವಿವರ

ಇದೂ ಓದಿ:
ಸಬ್​​ ಇನ್ಸ್​​​ಪೆಕ್ಟರ್​​​ ಹುದ್ದೆಗಳಿಗೆ ಮರು ಪರೀಕ್ಷೆ ಘೋಷಿಸಿರುವ ಗೃಹ ಸಚಿವರೇ ಈ ಅಭ್ಯರ್ಥಿಯ ಅಳಲನ್ನು ಒಮ್ಮೆ ಆಲಿಸಿ!

Published On - 3:17 pm, Sat, 30 April 22