AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಚುನಾವಣೆಯಲ್ಲಿ ಮಧು ಬಂಗಾರಪ್ಪ​ ಶಾಸಕನಾದ್ರೆ ಕಾವಿ ಬಿಚ್ಚುತ್ತೇನೆ: ಪ್ರಣವಾನಂದ ಸ್ವಾಮೀಜಿ ಸವಾಲು

ಪ್ರಣವಾನಂದ ಸ್ವಾಮೀಜಿ ಅವರು ಸಚಿವ ಮಧು ಬಂಗಾರಪ್ಪನವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ತೆಗೆಸಿದ್ದಾರೆ ಎಂದು ಆರೋಪಿಸಿ ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಮಧು ಬಂಗಾರಪ್ಪ​ ಶಾಸಕನಾದ್ರೆ ನಾನು ಕಾವಿ ಬಟ್ಟೆ ಬಿಚ್ಚಿ ಹಾಕುತ್ತೇವೆ ಎಂದು ಸವಾಲು ಸಹ ಹಾಕಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮಧು ಬಂಗಾರಪ್ಪ​ ಶಾಸಕನಾದ್ರೆ ಕಾವಿ ಬಿಚ್ಚುತ್ತೇನೆ: ಪ್ರಣವಾನಂದ ಸ್ವಾಮೀಜಿ ಸವಾಲು
Madhu Bangarappa And Pranavananda Swamiji
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 27, 2026 | 8:27 PM

Share

ದಾವಣಗೆರೆ, (ಆಗಸ್ಟ್ 27): ಸಚಿವ ಮಧು ಬಂಗಾರಪ್ಪನವರ (Madhu bangarappa) ವಿರುದ್ಧ ಪ್ರಣವಾನಂದ ಸ್ವಾಮೀಜಿ (Pranavananda Swamiji) ಮತ್ತೆ ಗುಡುಗಿದ್ದಾರೆ. ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ತೆಗೆದು ಹಾಕಲಾಗಿದೆ‌. ಮೊದಲ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರಿತ್ತು. ಇದೇ ಮಧು ಬಂಗಾರಪ್ಪ ನನ್ನ ಹೆಸರು ತೆಗೆಸಿದ್ದಾರೆ. ಏನಾದರೂ ಮುಂದಿನ ಚುನಾವಣೆಯಲ್ಲಿ ಮಧು ಬಂಗಾರಪ್ಪ ಶಾಸಕನಾದ್ರೆ ನಮ್ಮ ಕಾವಿ ಬಟ್ಟೆ ಬಿಚ್ಚಿ ಹಾಕುತ್ತೇನೆ ಎಂದು ಸವಾಲು ಹಾಕಿದ ಸ್ವಾಮೀಜಿ, ಮುಂದಿನ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ವಿರುದ್ದ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹ

ದಾವಣಗೆರೆಯಲ್ಲಿಂದು ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡ ಶ್ರೀ ನಾರಾಯಣ ಗುರು ಜಯಂತಿ ಸರ್ಕಾರಿ ಕಾರ್ಯಕ್ರಮಕ್ಕೆ ಮೊದಲ ಆಹ್ವಾನ ನೀಡಲಾಗಿತ್ತು‌. ಆದ್ರೆ, ಮಧು ಬಂಗಾರಪ್ಪ ದೆಹಲಿಗೆ ಹೋಗಿ ನನ್ನ ಹೆಸರು ತೆಗೆಸುವಂತೆ ಸಿಎಂ‌ಗೆ ಒತ್ತಡ ಹಾಕಿದ್ದಾರೆ. ನನ್ನ ವಿರುದ್ದ ತಪ್ಪು ಮಾಹಿತಿಯನ್ನು ಕಾಂಗ್ರೆಸ್ ಹೈಕಮಾಂಡ್ ಗೆ ನೀಡಿದ್ದಾನೆ. ಡಿಕೆ ಶಿವಕುಮಾರ್ ಸಿಎಂ ಆಗಲು ನಾವು ಮತ್ತೆ 32 ಸ್ವಾಮೀಜಿಗಳು ಸಿದ್ದರಾಮಯ್ಯನವರನ್ನು ಎದುರು ಹಾಕಿಕೊಂಡು ಹೋರಾಟ‌ ಮಾಡಿದ್ದೇವು. ಮಧು ಬಂಗಾರಪ್ಪ ನಿಮ್ಮ ಸಚಿವ ಸಂಪುಟದಲ್ಲಿ ಇದ್ದರೆ ನಿಮಗೆ ಕೆಟ್ಟ ಹೆಸರು. ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ನೋಡಿ: RSS ನೋಂದಣಿ ವಿವಾದ: ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಆರ್​​. ಅಶೋಕ್​​ ಕೌಂಟರ್​​

ಮಧು ನಾಗರಹಾವಿಗಿಂತ ಹೆಚ್ಚಿನ ವಿಷ

ಮಧು ಬಂಗಾರಪ್ಪ ನಮ್ಮ‌ಹೆಸರನ್ನು ಆಹ್ವಾನ ಪತ್ರಿಕೆಯಿಂದ‌ ನನ್ನ ಹೆಸರು ತೆಗಿಸಿರಬಹುದು. ಆದರೆ ಈಡಿಗ ಸಮುದಾಯದವರು ಹೃದಯದಿಂದ‌ ಕಿತ್ತು ಹಾಕಲು ಆಗೋದಿಲ್ಲ. ಅಧಿಕಾರದ ಅಮಲಿನಿಂದ ಮಧು ಬಂಗಾರಪ್ಪ ಈ ರೀತಿ ಮಾಡುತ್ತಿದ್ದಾರೆ.ಮಂಜುನಾಥ್‌ನ ಮೇಲೆ ಪ್ರಮಾಣ ಮಾಡುತ್ತೇನೆ ಮಧು ಬಂಗಾರಪ್ಪ ಮತ್ತೊಮ್ಮೆ ವಿಧಾನಸೌಧ ಪ್ರವೇಶ ಮಾಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮಧು ಗೆಲ್ಲುವುದಿಲ್ಲ. ಬಂಗಾರಪ್ಪನವರು ಬಂಗಾರದ ಹಾಗೇ ಇದ್ದರು. ಆದರೆ ಈ ಮಧು ನಾಗರಹಾವಿಗಿಂತ ಹೆಚ್ಚಿನ ವಿಷ ಹೊಂದಿರುವ ವ್ಯಕ್ತಿ. ಈ ರೀತಿ ದ್ವೇಷ ಸಾಧಿಸುವ ವ್ಯಕ್ತಿಯನ್ನು ಕಾಂಗ್ರೆಸ್ ಅದ್ಯಕ್ಷರು ಪಕ್ಷದಲ್ಲಿ ಇಟ್ಟುಕೊಳ್ಳಬೇಡಿ ಎಂದು ಕಿಡಿಕಾರಿದರು.

ನಾಳೆ ನಡೆಯುವ ನಾರಾಯಣಗುರು ಜಯಂತಿ ದಿನ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಕೂರುತ್ತೇವೆ. ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಒಂದು ದಿನ ದೆಹಲಿಯಲ್ಲಿ ಜಂತರ್ ಮಂಥರ್‌ನಲ್ಲಿ ಪ್ರತಿಭಟನೆಗೆ ಕೂರುತ್ತೇನೆ. ಮಧು ಬಂಗಾರಪ್ಪ ಅನುಯಾಯಿಗಳು ನಮಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ನೋಂದಣಿ ಶುಲ್ಕ ಕಟ್ಟಲು ಸಿದ್ಧ ಎಂದ ಸಚಿವ ಖರ್ಗೆ
ನೋಂದಣಿ ಶುಲ್ಕ ಕಟ್ಟಲು ಸಿದ್ಧ ಎಂದ ಸಚಿವ ಖರ್ಗೆ