AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ RSS​ ಗಂಧಗಾಳಿ ಗೊತ್ತಿಲ್ಲ; ಯಾವುದೋ ಒಂದು ಪುಸ್ತಕ ಓದಿ ಅದೇ ಸತ್ಯ ಅಂತಾರೆ: ಆರ್ ಅಶೋಕ್

ಕಳೆದ ಕೆಲವು ದಿನಗಳಿಂದ ಕುಮಾರಸ್ವಾಮಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದರು. ಹಾಗೂ ತಾವು ಪುಸ್ತಕವನ್ನು ಓದಿರುವುದಾಗಿ ಉಲ್ಲೇಖಿಸಿದ್ದರು. ಈ ವಿಚಾರವಾಗಿ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಕುಮಾರಸ್ವಾಮಿಗೆ RSS​ ಗಂಧಗಾಳಿ ಗೊತ್ತಿಲ್ಲ; ಯಾವುದೋ ಒಂದು ಪುಸ್ತಕ ಓದಿ ಅದೇ ಸತ್ಯ ಅಂತಾರೆ: ಆರ್ ಅಶೋಕ್
ಆರ್ ಅಶೋಕ್ ಮತ್ತು ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on:Oct 16, 2021 | 3:55 PM

Share

ದಾವಣಗೆರೆ: ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿಗೆ ಆರ್​ಎಸ್​ಎಸ್​ ಗಂಧಗಾಳಿ ಗೊತ್ತಿಲ್ಲ. ಯಾವುದೋ ಒಂದು ಪುಸ್ತಕ ಓದಿ ಅದೇ ಸತ್ಯವೆಂದು ಹೇಳ್ತಾರೆ ಎಂದು ಬಿಜೆಪಿ ನಾಯಕ ಹಾಗೂ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಕಂದಾಯ ಸಚಿವ ಅಶೋಕ್​ ಇಂದು (ಅಕ್ಟೋಬರ್ 16) ಮಾತನಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕುಮಾರಸ್ವಾಮಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದರು. ಹಾಗೂ ತಾವು ಪುಸ್ತಕವನ್ನು ಓದಿರುವುದಾಗಿ ಉಲ್ಲೇಖಿಸಿದ್ದರು. ಈ ವಿಚಾರವಾಗಿ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್​ ನಡುವೆ ಅಲ್ಪಸಂಖ್ಯಾತರ ಓಲೆಕೆಗೆ ಪೈಪೋಟಿ ಇದೆ. ಕೇಂದ್ರ ಕಾಂಗ್ರೆಸ್, ರಾಜ್ಯ ಕಾಂಗ್ರೆಸ್​ನಲ್ಲಿ ಕಿತ್ತಾಟ ಶುರುವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ. ಬಸವರಾಜ ಬೊಮ್ಮಾಯಿಯವರೇ ಒಂದೂವರೆ ವರ್ಷ ಸಿಎಂ ಆಗಿರ್ತಾರೆ. ಬಿಜೆಪಿ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದೆ ಎಂದು ಸಚಿವ ಅಶೋಕ್​ ಹೇಳಿಕೆ ನೀಡಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಆರ್​ಎಸ್​​ಎಸ್ ಬಗ್ಗೆ ಹೆಚ್ಚು ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಡುವೆ ಅಲ್ಪಸಂಖ್ಯಾತ ಮತಗಳನ್ನು ಸೆಳೆಯಲು ಸ್ಪರ್ಧೆ ನಡೆಯುತ್ತಿದೆ. ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಹಲ್ಲು ಗಿಂಜುತ್ತಿದ್ದಾರೆ. ಆರ್​ಎಸ್​ಎಸ್ ಅನ್ನು ತೆಗಳುವುದರಿಂದ ಅಲ್ಪಸಂಖ್ಯಾತ ಮತಗಳನ್ನು ಯಾರು ಎಷ್ಟು ಪಡೆಯುತ್ತಾರೆ ಅಂತ ಸ್ಪರ್ಧೆ ಇದೆ ಎಂದು ಹೇಳಿದ್ದಾರೆ.

ಆರ್​ಎಸ್​ಎಸ್​ ಇಲ್ದಿದ್ರೆ ಭಾರತ್ ಮಾತಾ ಕೀ ಜೈ ಅನ್ನೋಕೆ ಯಾರು ಇರ್ತಾ ಇದ್ರು?: ಸಿ.ಟಿ. ರವಿ ಎಲ್ಲಾ ವಿವಿಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ. ಆರ್​ಎಸ್​ಎಸ್​ ಏನು ಅನ್ನೋದನ್ನ ಕುಮಾರಸ್ವಾಮಿಯವರು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಸ್ವಯಂ ಸೇವಕರು ಆದಾಗ ಮಾತ್ರ ಆರ್​ಎಸ್​ಎಸ್​ ಏನು ಅನ್ನೋದು ಅರ್ಥವಾಗುತ್ತೆ. ಅಲ್ಲಿ ಇರುವವರು ಸ್ವಯಂಸೇವಕರು, ಸದಸ್ಯತ್ವ ಕೊಡೋದಿಲ್ಲ. ಸದಸ್ಯತ್ವ ಇಲ್ಲ ಅಂದ್ಮೇಲೆ ಆರ್​ಎಸ್​ಎಸ್​​ ಸದಸ್ಯರು ವಿವಿಯ ಸಿಂಡಿಕೇಟ್ ಸದಸ್ಯರಾಗಲು ಹೇಗೆ ಸಾಧ್ಯ. ಈ ಹೇಳಿಕೆಯಲ್ಲೇ ಕುಮಾರಸ್ವಾಮಿಯವರ ಅಜ್ಞಾನ ತಿಳಿಯುತ್ತೆ. ಅಜ್ಞಾನದಿಂದ ಮಾತಾಡಿ ನಗೆಪಾಟಲಿಗೀಡಾಗಬೇಡಿ ಎಂದು ಸಿ.ಟಿ ರವಿ ಹೇಳಿದ್ದಾರೆ.

ಆರ್​ಎಸ್​ಎಸ್​ ಇಲ್ದಿದ್ರೆ ಭಾರತ್ ಮಾತಾ ಕೀ ಜೈ ಅನ್ನೋಕೆ ಯಾರು ಇರ್ತಾ ಇದ್ರು? ಜೆಡಿಎಸ್​ನಲ್ಲಿ ದೇವೇಗೌಡ್ರಿಗೆ ಜೈ, ಕುಮಾರಣ್ಣನಿಗೆ ಜೈ, ನಿಖಿಲ್ ಅಣ್ಣನಿಗೆ ಜೈ. ಕಾಂಗ್ರೆಸ್​ನಲ್ಲಿ ಸೋನಿಯಾ ಗಾಂಧಿಗೆ ಜೈ, ರಾಹುಲ್ ಗಾಂಧಿಗೆ ಜೈ, ಪ್ರಿಯಾಂಕ ಗಾಂಧಿಗೆ ಜೈ. ಭಾರತ ಮಾತಾ ಕಿ ಜೈ ಅನ್ನೋದು ಅವರ ದೃಷ್ಟಿಯಲ್ಲಿ ಅಪರಾಧ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್ ಆರ್​ಎಸ್​ಎಸ್ ವಿರುದ್ಧ ಇತ್ತೀಚೆಗೆ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿರುವ ಜೆಡಿಎಸ್ ನಾಯಕ, ​ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಹೊಸ ಬಾಂಬ್ ಸಿಡಿಸಿದ್ದರು. ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದರು.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಆರ್​ಎಸ್​ಎಸ್​ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದರು. ಇವತ್ತು ಈ ಸರ್ಕಾರದಲ್ಲಿ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಆರ್​ಎಸ್​ಎಸ್​ನ ಕಾರ್ಯಕರ್ತರನ್ನ ಸಿಂಡಿಕೇಟ್ ಮೆಂಬರ್ ಮಾಡಿಕೊಂಡಿದ್ದಾರೆ. ಕೆಲಸ ಆಗಲು ಒಂದು ಎರಡು ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದಾರೆ. 40 ವರ್ಷದ ಹಿಂದಿನ ಆರ್​ಎಸ್​ಎಸ್​ ಬೇರೆ, ಈಗಿನ ಆರ್​ಎಸ್​ಎಸ್​ ಬೇರೆ ಎಂದು ಅವರು ವ್ಯಾಖ್ಯಾನಿಸಿದ್ದರು.

ಇದನ್ನೂ ಓದಿ: ಮಹಾತ್ಮ ಗಾಂಧಿ ಕಂಡ ರಾಮರಾಜ್ಯ ಮಾಡಬೇಕು; ಗ್ರಾಮಸ್ವರಾಜ್ಯ ನಮ್ಮ ಸರ್ಕಾರದ ಸಂಕಲ್ಪ: ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: RSS ವಿರುದ್ಧ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ: ಎಲ್ಲ ವಿವಿಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ!

Published On - 2:59 pm, Sat, 16 October 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?