AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramotsava: ಬಸವ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ; ರಾಹುಲ್​ ಗಾಂಧಿ ವಾಗ್ದಾಳಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಆಡಳಿತ ನೀಡಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ಸಿದ್ದರಾಮೋತ್ಸವದಲ್ಲಿ ಹೇಳಿದ್ದಾರೆ.

Siddaramotsava: ಬಸವ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ; ರಾಹುಲ್​ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
TV9 Web
| Updated By: ವಿವೇಕ ಬಿರಾದಾರ|

Updated on:Aug 03, 2022 | 4:50 PM

Share

ದಾವಣಗೆರೆ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಆಡಳಿತ ನೀಡಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್​ ಗಾಂಧಿ (Rahul Gandhi) ಅವರು ಸಿದ್ದರಾಮೋತ್ಸವದಲ್ಲಿ (Siddaramotsava) ಹೇಳಿದ್ದಾರೆ. ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ನಿಮಿತ್ತ ದಾವಣಗೆರೆಯಲ್ಲಿ ಇಂದು (ಆಗಸ್ಟ್ 3, ಬುಧವಾರ) ನಡೆಯುತ್ತಿರುವ ಸಿದ್ದರಾಮೋತ್ಸವದಲ್ಲಿ  ಮಾತನಾಡಿದ ಅವರು  ಕರ್ನಾಟಕದ ಬಡವರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ನಾವು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇದನ್ನು ಕಾಣಲು ಆಗಲ್ಲ. ಬಿಜೆಪಿ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಬಿಜೆಪಿ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ. ಬಸವ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಇವತ್ತಿನ ಹಿಂಸಾಚಾರ ಎಂದೂ ಅನುಭವಿಸಿಲ್ಲ. ಅಮೆರಿಕದಲ್ಲೂ ಕರ್ನಾಟಕದಲ್ಲಿನ ಇವತ್ತಿನ ಹಿಂಸಾಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಸರ್ವಧರ್ಮ ಸಾಮರಸ್ಯ ಇವತ್ತು ಕಾಣುತ್ತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಶಾಂತಿ, ಸಮನ್ವಯತೆ ವಾತಾವರಣ ಇತ್ತು ಎಂದು ಹೇಳಿದರು.

ಲೂಟಿ ಮಾಡಿ ಅಂತಾ ಬಸವಣ್ಣನವರು ಎಲ್ಲಿ ಹೇಳಿದ್ದಾರಾ?  ಪ್ರಾಮಾಣಿಕತೆ ಮೂಲ ತತ್ವದ ಬಗ್ಗೆ ವಿಶ್ವಗುರು ಬಸವಣ್ಣನವರು ಹೇಳಿದ್ದಾರೆ. ಆದರೆ ಬಸವಣ್ಣ ಮೂಲತತ್ವಕ್ಕೆ ಬಿಜೆಪಿ ವಿರೋಧವಾಗಿದೆ.  ಬಿಜೆಪಿ ವಸಾಹತು ಆಡಳಿತ ಮಾಡಲು ಯತ್ನಿಸಿಸುತ್ತಿದೆ. ಬಡವರ ಏಳಿಗೆಗೆ ಕೆಲಸ ಮಾಡುವುದೇ ಕಾಂಗ್ರೆಸ್ ಗುರಿಯಾಗಿದೆ. ಅನ್ನಭಾಗ್ಯ, ಕೃಷಿಭಾಗ್ಯ, ವಿದ್ಯಾಸಿರಿ ಯೋಜನೆಗಳನ್ನು ಜನ ಮರೆತಿಲ್ಲ ಎಂದರು.

ಇಂದಿರಾ ಕ್ಯಾಂಟಿನ್ ರೀತಿ ಯೋಜನೆ ನಡೆಸಲು ಕಾಂಗ್ರೆಸ್ ಬದ್ಧವಾಗಿದೆ. ಕಾಂಗ್ರೆಸ್ ಇಂದಿರಾ ಕ್ಯಾಂಟಿನ್ ಮೂಲಕ ರುಚಿಕರ ಊಟ ಕೊಟ್ಟಿದೆ. ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಿದ್ದೆವು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮನ್ರೇಗಾ ಯೋಜನೆ ಜಾರಿ ಮಾಡಿದ್ದೆವು ಎಂದು ತಳಿಸಿದರು.

ನೋಟ್ ಬ್ಯಾನ್‌ ಮಾಡಿದ ಉದ್ದೇಶ ಏನೆಂದು ಕೇಂದ್ರ ಸರ್ಕಾರ ಹೇಳಲಿ. ಸಣ್ಣ ವ್ಯಾಪಾರಿಗಳು, ಬಡ ರೈತರಿಗೆ ಜಿಎಸ್‌ಟಿ ಬರೆ ಎಳೆದಿದೆ. ಜಿಎಸ್‌ಟಿ, ನೋಟ್ ಬ್ಯಾನ್ ಕ್ರಮಗಳು ರಾಷ್ಟ್ರಕ್ಕೇ ದುರಂತವಾಗಿದೆ ಎಂದು ವಾಗ್ದಾಳಿ ನಡೆಸಿದರು.

Published On - 3:41 pm, Wed, 3 August 22

ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ