ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು

ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ.

ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು
ಈರುಳ್ಳಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 11, 2022 | 6:58 PM

ದಾವಣಗೆರೆ: ಈರುಳ್ಳಿ (Onion) ದರ ದಿಢೀರ್ ಕುಸಿದಿದ್ದರಿಂದ ರೈತರು ಆತಂಕಗೊಂಡಿದ್ದಾರೆ. ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು  ರೈತರು ಹೋಗುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಈರುಳ್ಳಿಗೆ ಒಂದು ಕೆಜಿಗೆ 17 ರಿಂದ 20 ರೂಪಾಯಿ ದರವಿತ್ತು. ಈಗ ದಿಢೀರ್ ಕುಸಿತಗೊಂಡಿದ್ದು, ಒಂದು ಕೆಜಿಗೆ 13 ರೂಪಾಯಿ ಗರಿಷ್ಠ ದರ ನಿಗದಿ ಮಾಡಲಾಗಿದೆ. ದಾವಣಗೆರೆ ಎಪಿಎಂಸಿ ಮಾರುಕಟ್ಟೆಗೆ ತಂದ ಈರುಳ್ಳಿ ಬಿಟ್ಟು ರೈತರು ಹೋಗುತ್ತಿದ್ದಾರೆ. ವಿಜಯಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರೈತರು 23 ಸಾವಿರ ರೂಪಾಯಿಗೆ ಲಾರಿ ಬಾಡಿಗೆ ಮಾಡಿಕೊಂಡು ದಾವಣಗೆರೆಗೆ ಈರುಳ್ಳಿ ತಂದಿದ್ದಾರೆ. ನಿತ್ಯ ಮೂರು ಸಾವಿರದಿಂದ ಮೂರು ಸಾವಿರದಾ ಐದು ನೂರು ಟನ್ ಈರುಳ್ಳಿ ದಾವಣಗೆರೆ ಮಾರುಕಟ್ಟೆಗೆ ಬರುತ್ತದೆ. ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ. ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಬಾಯಾರಿ, ಹಸಿದು ಕಾಡಿಂದ ನಾಡಿಗೆ ಬಂದು ಕಂಗಾಲಾಗಿದ್ದ ನವಿಲನ್ನು ಜನ ಆರೈಕೆ ಮಾಡಿ ಚೇತರಿಕೊಳ್ಳುವಂತೆ ಮಾಡಿದರು!

Jupiter Transit 2022: ಏಪ್ರಿಲ್ 13ರಂದು ಮೀನ ರಾಶಿಗೆ ಗುರು ಗ್ರಹದ ಪ್ರವೇಶ; ಯಾವ್ಯಾವ ರಾಶಿಗೆ ಏನೇನು ಫಲ?

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ