AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಹುಚ್ಚು! ಚೆಕ್ ಡ್ಯಾಂ ರೀಲ್ಸ್ ಮಾಡುವಾಗ ಇಬ್ಬರು ಯುವಕರು ನೀರುಪಾಲು, ರೀಲ್ಸ್ ಮಾಡ್ತಿದ್ದ 6 ಮಹಿಳಾ ಪೊಲೀಸ್​ ಸಿಬ್ಬಂದಿ ಸೀದಾ ಮನೆಗೆ!

Reels Craze: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಗನಹಳ್ಳಿ ಚೆಕ್ ಡ್ಯಾಂ ನಲ್ಲಿ ಮುಳುಗಿ ಇಬ್ಬರು ಯುವಕರು ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಹರಿಹರ ನಗರದ ಆಶ್ರಯ ಬಡಾವಣೆಯ ಪವನ್ (25) ಮತ್ತು ಪ್ರಕಾಶ್ (24) ಎಂಬ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದಾರೆ.

ರೀಲ್ಸ್ ಹುಚ್ಚು! ಚೆಕ್ ಡ್ಯಾಂ ರೀಲ್ಸ್ ಮಾಡುವಾಗ ಇಬ್ಬರು ಯುವಕರು ನೀರುಪಾಲು, ರೀಲ್ಸ್ ಮಾಡ್ತಿದ್ದ 6 ಮಹಿಳಾ ಪೊಲೀಸ್​ ಸಿಬ್ಬಂದಿ ಸೀದಾ ಮನೆಗೆ!
ಚೆಕ್ ಡ್ಯಾಂ ರೀಲ್ಸ್ ಮಾಡುವಾಗ ಇಬ್ಬರು ಯುವಕರು ನೀರುಪಾಲು
TV9 Web
| Edited By: |

Updated on: Oct 01, 2022 | 2:37 PM

Share

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಗನಹಳ್ಳಿ ಚೆಕ್ ಡ್ಯಾಂ ನಲ್ಲಿ ಮುಳುಗಿ ಇಬ್ಬರು ಯುವಕರು ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಹರಿಹರ ನಗರದ ಆಶ್ರಯ ಬಡಾವಣೆಯ ಪವನ್ (25) ಮತ್ತು ಪ್ರಕಾಶ್ (24) ಎಂಬ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದಾರೆ. ಪ್ರಕಾಶ ರೀಲ್ಸ್ ಮಾಡಲು ಹೋಗಿ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಹೋದ ಪವನ್ ಸಹ ನೀರಲ್ಲಿ ಮುಳುಗಿ ಕಣ್ಮರೆಯಾಗಿದ್ದಾನೆ. ಹರಿಹರದ ರಾಘವೇಂದ್ರ ಮಠದ ಬಳಿ ತುಂಗಭದ್ರ ನದಿಯಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನೊಬ್ಬನ ಶವಕ್ಕಾಗಿ ಶೋಧ‌ ನಡೆದಿದೆ.

ಕಳೆದ ಮೂರು ದಿನಗಳ ಹಿಂದೆ ಯುವಕರಿಬ್ಬರೂ ನೀರಲ್ಲಿ ಮುಳುಗಿದ್ದಾರೆ. ಮತ್ತೊಬ್ಬ ಸ್ನೇಹಿತ, ದೃಶ್ಯ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಅಗ್ನಿಶಾಮಕ ದಳ ಹಾಗು ಪೊಲೀಸರಿಂದ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರೀಲ್ಸ್ ಮಾಡ್ತಿದ್ದ 6 ಮಹಿಳಾ ಪೊಲೀಸ್​ ಸಿಬ್ಬಂದಿ ಸೀದಾ ಮನೆಗೆ 

ರೀಲ್ಸ್​ ಎಂಬ ಮಾಯೆಯ ಬೆನ್ನುಹತ್ತಿ ಅನೇಕರು ತಮ್ಮ ಜೀವನಗಳನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿಯೂ ಇಂತಹುದೇ ರೀಲ್ಸ್​ ಹಾವಳಿಗೆ 6 ಮಹಿಳಾ ಪೊಲೀಸ್​ ಸಿಬ್ಬಂದಿ ಸೀದಾ ಮನೆಗೆ ಹೋಗಿದ್ದಾರೆ. ರೀಲ್ಸ್ ಮಾಡುತ್ತಿದ್ದ 6 ಪೊಲೀಸ್​ ಸಿಬ್ಬಂದಿಯನ್ನು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿ & ಐಜಿಪಿ) ಸಸ್ಪೆಂಡ್​ ಮಾಡಿ ಆದೇಶ ನೀಡಿದ್ದಾರೆ. ಉಳಿದ ಅಧಿಕಾರಿಗಳು, ಸಿಬ್ಬಂದಿ ರೀಲ್ಸ್​ ಮಾಡದಂತೆ ಡಿಜಿ & ಐಜಿಪಿ ಖಡಕ್ ಆದೇಶ ಹೊರಡಿಸಿದ್ದಾರೆ.

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಒಳ್ಳೆ ಫ್ರೆಂಡ್ಸ್ ಆಗಿದ್ವಿ.. ನೆಮ್ಮದಿಯಾಗಿ ಇರಿ ಅಂತ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಘಟನೆ ನಡೆದಿದೆ.

ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಾರಿಕಾ, ಸಿಂಧನೂರು ಪಟ್ಟಣದ ಖಾಸಗಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ. ಸಿಂಧನೂರು ಪಟ್ಟಣದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಿಂಧನೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ