AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮನೆಗಳಿಗೆ ಟಿಪ್ಪು ನಿಲಯವೆಂದಿಟ್ಟುಕೊಳ್ಳಿ: ವಿಮಾನ ನಿಲ್ದಾಣಕ್ಕಿಟ್ಟರೆ ಖಂಡಿಸುತ್ತೇವೆ ಎಂದ ಎಂಪಿ ರೇಣುಕಾಚಾರ್ಯ

ಮೈಸೂರು ವಿಮಾಣ ನಿಲ್ದಾಣಕ್ಕೆ ಟಿಪ್ಪು ಹೆಸರು ನಾಮಕರಣ ವಿಚಾರವಾಗಿ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ನಿಮ್ಮ ಮನೆಗಳಿಗೆ ಟಿಪ್ಪು ನಿಲಯ ಅಥವಾ ಘಜ್ನಿ ಔರಂಗಜೇಬ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ನಿಮ್ಮನೆಗಳಿಗೆ ಟಿಪ್ಪು ನಿಲಯವೆಂದಿಟ್ಟುಕೊಳ್ಳಿ: ವಿಮಾನ ನಿಲ್ದಾಣಕ್ಕಿಟ್ಟರೆ ಖಂಡಿಸುತ್ತೇವೆ ಎಂದ ಎಂಪಿ ರೇಣುಕಾಚಾರ್ಯ
ಮಾಜಿ ಸಚಿವ ಎಂಪಿ ರೇಣುಕಾಚಾರ್ಯ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 17, 2023 | 3:22 PM

Share

ದಾವಣಗೆರೆ, ಡಿಸೆಂಬರ್​ 17: ನಿಮ್ಮ ಮನೆಗಳಿಗೆ ಟಿಪ್ಪು ನಿಲಯ ಅಥವಾ ಘಜ್ನಿ ಔರಂಗಜೇಬ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಿಗೆ ಟಿಪ್ಪು, ಬಾಬರ್, ಔರಂಗಜೇಬು, ಘಜ್ನಿ ಮಹಮ್ಮದ್ ಹೆಸರು ಮಾತ್ರ ನೆನಪು ಬರುತ್ತೆ. ಶಾಸಕರು, ಸಚಿವರು ಟಿಪ್ಪು ಜಪ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಓಟ್ ಬ್ಯಾಂಕ್​ಗಾಗಿ ಮತಾಂದರ ಹೆಸರು ಜಪ 

ಓಟ್ ಬ್ಯಾಂಕ್​ಗಾಗಿ ಅಲ್ಪಸಂಖ್ಯಾತರ ಜಪ ಮಾಡುತ್ತಾರೆ. ಕುಕ್ಕರ್ ಬ್ಲಾಸ್ಟ್ ಆದಾಗ ಡಿಸಿಎಂ ಡಿಕೆ ಶಿವಕುಮಾರ್​ ನಮ್ಮ ಸಹೋದರರು ಅಂತ ಹೇಳುತ್ತಾರೆ. ಮೈಸೂರು ಮಹರಾಜ, ಸುತ್ತುರು ಶ್ರೀಗಳು ಸೇರಿದಂತೆ ದಾರ್ಶನಿಕರ ಹೆಸರು ಇಡೀ. ಆದರೆ ಓಟ್ ಬ್ಯಾಂಕ್​ಗಾಗಿ ಈ ರೀತಿ ಮತಾಂದರ ಹೆಸರು ಜಪ ಮಾಡುತ್ತಾರೆ ಎಂದಿದ್ದಾರೆ.

ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ನಿಮಗೆ ರೈತರ ಬಗ್ಗೆ ಕಾಳಜಿ ಇದ್ದಾರೆ 25 ಸಾವಿರ ರೂಪಾಯಿ ಪರಿಹಾರ ಕೊಡಿ. ನೀವು ಘೋಷಣೆ ಮಾಡಿದ ಭರವಸೆಗಳು ಭರವಸೆಯಾಗಿಯೇ ಉಳಿದಿವೆ. ಈ ಸರ್ಕಾರ ಬಂದಾಗಿನಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬಿಡುಗಡೆಯಾಗಿಲ್ಲ. ರೈತರಿಗೆ ನೌಕರರಿಗೆ ನೀವು ನೀಡಿದ ಭರವಸೆ ಈಡೇರಿಲ್ಲ. ಆದ್ದರಿಂದ ನಾವು ಹೊನ್ನಾಳಿಯಲ್ಲಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಮೈಸೂರು ವಿಮಾನ ನಿಲ್ದಾಣ ನಾಮಕರಣ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ, ಕ್ರೆಡಿಟ್ ವಾರ್ ಆರಂಭ

ಕಾಂಗ್ರೆಸ್ ಔತಣಕೂಟಕ್ಕೆ ಬಿಜೆಪಿ ಶಾಸಕರು ಹೋದ ವಿಚಾರವಾಗಿ ಮಾತನಾಡಿದ ಅವರು, ಡಿಕೆ ಶಿವಕುಮಾರ್​ ಆಹ್ವಾನ ಮಾಡಿದ್ದಕ್ಕೆ ಔತಣಕೂಟಕ್ಕೆ ಮಾತ್ರ ಹೋಗಿದ್ದಾರೆ. ಔತಣ ಕೂಟಕ್ಕೆ ಹೋಗಿದ್ದಾರೆ ಎಂದರೆ ಪಕ್ಷ ವಿರೋಧಿ ಚಟುವಟಿ ಮಾಡುತ್ತಾರೆ ಎಂದರ್ಥನಾ ಎಂದು ಪ್ರಶ್ನಿಸಿದ್ದಾರೆ. ಅವರೇ ಹೇಳಿದ್ದಾರಲ್ಲ ಆಹ್ವಾನವಿತ್ತು ಆದ್ದರಿಂದ ಹೋಗಿ ಬಂದಿದ್ದೇವೆ ಎಂದು ಹೇಳಿದ್ದಾರೆ ಎಂದರು.

ಟಿಪ್ಪು ಸುಲ್ತಾನ್​ ಮೈಸೂರಿನ ಹುಲಿ, ಹೆಸರಿಟ್ಟರೆ ತಪ್ಪೇನು?

ವಿಜಯಪುರದಲ್ಲಿ ವಿಧಾನಪರಿಷತ್​ ಸದಸ್ಯ ವಿಶ್ವನಾಥ್ ಹೇಳಿಕೆ ನೀಡಿದ್ದು, ಟಿಪ್ಪು ಸುಲ್ತಾನ್​ ಮೈಸೂರಿನ ಹುಲಿ, ಹೆಸರಿಟ್ಟರೆ ತಪ್ಪೇನು? ಟಿಪ್ಪು ಸುಲ್ತಾನ್​ ಮೈಸೂರು‌ ಸಂಸ್ಥಾನವನ್ನು ಅಭಿವೃದ್ಧಿ ಮಾಡಿದರು. ಮೈಸೂರು ಏರ್​ಪೋರ್ಟ್​ಗೆ ಟಿಪ್ಪು ಹೆಸರಿಟ್ಟರೆ ಸಂತೋಷಪಡುವೆ. ಮೊದಲು ಜಾತಿ ಧರ್ಮದ ಕೋಲಾಹಲ ಬಿಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ