AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ವಿರುದ್ಧ ಬಿಜೆಪಿ ವರಿಷ್ಠರಿಗೆ ದೂರು ಕೊಟ್ಟಿದ್ದಾರೆ, ಅರುಣ್ ಸಿಂಗ್ ಫೋನ್ ಮಾಡಿದ್ದರು: ರೇಣುಕಾಚಾರ್ಯ

Renukacharya: ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದರು. ನನ್ನನ್ನು ದೆಹಲಿಗೆ ಕರೆದಿದ್ದಾರೆ. ಹೀಗಾಗಿ ಫೆ 8ರಂದು ದೆಹಲಿಗೆ ತೆರಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

ನನ್ನ ವಿರುದ್ಧ ಬಿಜೆಪಿ ವರಿಷ್ಠರಿಗೆ ದೂರು ಕೊಟ್ಟಿದ್ದಾರೆ, ಅರುಣ್ ಸಿಂಗ್ ಫೋನ್ ಮಾಡಿದ್ದರು: ರೇಣುಕಾಚಾರ್ಯ
ಎಂ.ಪಿ ರೇಣುಕಾಚಾರ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 02, 2022 | 4:59 PM

Share

ದಾವಣಗೆರೆ: ನನ್ನ ವಿರುದ್ಧ ಕೆಲವರು ಪಕ್ಷದ ವರಿಷ್ಠರಿಗೆ ದೂರು ಕೊಟ್ಟಿದ್ದಾರೆ‌ ಎಂದು ಹೊನ್ನಾಳಿ ಕ್ಷೇತ್ರದ ಬಿಜೆಪಿ (BJP) ಶಾಸಕ ರೇಣುಕಾಚಾರ್ಯ (Renukacharya) ಹೇಳಿದರು. ಇತ್ತೀಚೆಗಷ್ಟೇ ಬಿಜೆಪಿ ಕರ್ನಾಟಕದ ಉಸ್ತುವಾರಿ ಅರುಣ್‌ ಸಿಂಗ್‌ (Arun Singh) ಫೋನ್‌ ಮಾಡಿದ್ದರು. ಬಹಿರಂಗವಾಗಿ ಹೇಳಿಕೆ ನೀಡುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ, ಹೀಗಾಗಿ ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದರು. ನನ್ನನ್ನು ದೆಹಲಿಗೆ ಕರೆದಿದ್ದಾರೆ. ಹೀಗಾಗಿ ಫೆ 8ರಂದು ದೆಹಲಿಗೆ ತೆರಳುತ್ತೇನೆ. ಫೆ 8, 9 ಹಾಗೂ 10ರಂದು ದೆಹಲಿಯಲ್ಲೇ ಇರುತ್ತೇನೆ. ನಾನು ದೆಹಲಿಗೆ ಹೋಗುವ ಬಗ್ಗೆ ಯತ್ನಾಳ್ ಜೊತೆ ಚರ್ಚಿಸಿಲ್ಲ. ಈ ಬಗ್ಗೆ ನಂತರ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ನನ್ನ ಅಭಿಪ್ರಾಯವನ್ನು ಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಗಮನ ಸೆಳೆದಿದ್ದೇನೆ. ನನ್ನ ಮನವಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ವಿರುದ್ಧ ದೂರು ನೀಡಿದವರಂತೆ ನಾನು ರೆಡಿಮೇಡ್ ಫುಡ್ ರೀತಿ ದಿಢೀರ್ ಮೇಲೆ ಬಂದವನಲ್ಲ. ಹಾದಿಬೀದಿಯಲ್ಲಿ ಹೋರಾಟ ಮಾಡಿಯೇ ಶಾಸಕನಾದವನು ಎಂದು ತಮ್ಮ ವಿರುದ್ಧ ದೂರು ನೀಡಿದ ಸ್ವಪಕ್ಷದ ಶಾಸಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ಸಚಿವರ ವಿರುದ್ಧ ರೇಣುಕಾಚಾರ್ಯ ದೂರು ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರು ಕೊಟ್ಟಿರುವುದು ನಿಜ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಇತ್ತೀಚೆಗೆ ಹೇಳಿದ್ದರು. ನಾನು ಲಿಖಿತ ರೂಪದಲ್ಲಿ ಯಾರಿಗೂ ದೂರು ನೀಡಿಲ್ಲ. ಜ.27ರಂದು ಒಬ್ಬ ಸಚಿವರಿಗೆ ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೊನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿ‌ನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಪಕ್ಷನಿಷ್ಠರಿಗೆ ಅವಕಾಶ ಕೊಡಬೇಕು. 15ಕ್ಕೂ ಹೆಚ್ಚು ಸಚಿವರು ನಮ್ಮ ದೂರವಾಣಿ ಕರೆಗಳನ್ನು ಸ್ವೀಕರಿಸುವುದಿಲ್ಲ. ಕಡೆಪಕ್ಷ ನಮ್ಮನ್ನು ಗೌರವದಿಂದಲೂ ಕಾಣುವುದಿಲ್ಲ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಿದ್ದೇನೆ. ನಾಲ್ಕು ದಿನದೊಳಗೆ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥಪಡಿಸುವ ಭರವಸೆ ಇದೆ ಎಂದರು.

ನಮಗೆ ಸಿಎಂ ಬೊಮ್ಮಾಯಿ ಹಾಗೂ ಕಟೀಲ್ ಬಗ್ಗೆ ಅಪಾರ ಗೌರವವಿದೆ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಗಮನಕ್ಕೂ ಇದನ್ನು ತರಲಿದ್ದೇವೆ. ನಾನು ಸರ್ಕಾರ ಅಥವಾ ಸಂಘಟನೆ ವಿರುದ್ಧವಾಗಿ ಮಾತನಾಡುತ್ತಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಐದು ನಿಮಿಷದಲ್ಲೇ ಭೇಟಿಯಾಗಿ ನಮ್ಮ ಕ್ಷೇತ್ರಗಳ ಕೆಲಸ ಕಾರ್ಯಗಳು, ಅನುದಾನ ಬಿಡುಗಡೆ ಸೇರಿದಂತೆ ಯಾವುದೇ ಕೆಲಸಕಾರ್ಯಗಳನ್ನು ಮಾಡಿಸಿಕೊಳ್ಳಬಹುದಿತ್ತು. ಈಗಲೂ ಕೂಡ ಬೊಮ್ಮಾಯಿ ಅವರು ನಮ್ಮನ್ನು ಅಷ್ಟೇ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಆದರೆ ಕೆಲವು ದುರಹಂಕಾರಿ ಸಚಿವರಿಂದ ಮುಜುಗರ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಹೇಳಲಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಪಟ್ಟಿಯನ್ನು ಬಿಡುಗಡೆ ಮಾಡಲಿ -ರೇಣುಕಾಚಾರ್ಯ ಇದನ್ನೂ ಓದಿ: ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ; ರೇಣುಕಾಚಾರ್ಯ ಗರಂ

Published On - 4:57 pm, Wed, 2 February 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು