AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಪಾಸಿಟ್​​ ವೇಳೆ ಎಡವಟ್ಟು, 52 ಸಾವಿರ ರೂ. ಹಣ ದೋಚಿದ ಅನಾಮಿಕ ವ್ಯಕ್ತಿ

ಡಿಪಾಸಿಟ್ ಮಿಷನ್​ನಲ್ಲಿ ಮಾಹಿತಿ ಭರ್ತಿ ಮಾಡಿ ಡಿಪಾಸಿಟ್​ ಬಟನ್​ ಒತ್ತುವುದನ್ನು ಮರೆತ ಹಿನ್ನೆಲೆ 52 ಸಾವಿರ ರೂ. ಮಿಷನ್​ನಲ್ಲೇ ಉಳಿದಿದೆ. ಯಾರೂ ಇಲ್ಲದ್ದನ್ನ ನೋಡಿದ ಅನಾಮಿಕ ವ್ಯಕ್ತಿ ಹಣ ದೋಚಿ ಪರಾರಿಯಾಗಿದ್ದಾನೆ.

ಡಿಪಾಸಿಟ್​​ ವೇಳೆ ಎಡವಟ್ಟು, 52 ಸಾವಿರ ರೂ. ಹಣ ದೋಚಿದ ಅನಾಮಿಕ ವ್ಯಕ್ತಿ
ನಗದು ದೋಚಿದ ವ್ಯಕ್ತಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jul 13, 2023 | 8:56 PM

Share

ದಾವಣಗೆರೆ: ಹಣ ಡಿಪಾಸಿಟ್ ಮಿಷನ್​​ನಿಂದ ಅನಾಮಿಕ ವ್ಯಕ್ತಿ ನಗದು (money) ದೋಚಿರುವಂತಹ ಘಟನೆ ನಗರದ ಪಿ.ಬಿ.ರೋಡ್ ರಿಲಯನ್ಸ್ ಮಾರ್ಟ್ ಎದುರಿಗಿರುವ ಐಸಿಐಸಿಐ ಬ್ಯಾಂಕ್​​ನಲ್ಲಿ ನಡೆದಿದೆ. ವಿಜಯ್ ಎಂಬುವರು 52 ಸಾವಿರ ರೂ. ಹಣ ಡಿಪಾಸಿಟ್ ಮಾಡಲು ಬ್ಯಾಂಕ್​ಗೆ ಬಂದಿದ್ದರು. ಈ ವೇಳೆ ಡಿಪಾಸಿಟ್ ಮಿಷನ್ ಮೂಲಕ ಹಣ ಹಾಕಲು ಸಹಾಯಕ ರಾಘವೇಂದ್ರನಿಗೆ ಹೇಳಿದ್ದಾರೆ.

ಅಂಗಡಿ ಸಿಬ್ಬಂದಿ ರಾಂಘವೇಂದ್ರ ಡಿಪಾಸಿಟ್ ಮಿಷನ್​ನಲ್ಲಿ ಮಾಹಿತಿ ಭರ್ತಿ ಮಾಡಿ ಡಿಪಾಸಿಟ್​ ಬಟನ್​ ಒತ್ತುವುದನ್ನು ಮರೆತ್ತಿದ್ದಾರೆ. ಹಾಗಾಗಿ 52 ಸಾವಿರ ರೂ. ಮಿಷನ್​ನಲ್ಲೇ ಉಳಿದಿದೆ. ಹಣ ಡಿಪಾಸಿಟ್ ಆಗಿದೆ ಎಂದು ವಿಜಯ್, ರಾಘವೇಂದ್ರ ಹೊರಗೆ ಬಂದಿದ್ದಾರೆ. ಅದೇ ವೇಳೆಗೆ ಹಣ ಡ್ರಾ ಮಾಡಲು ಹೋದ ವ್ಯಕ್ತಿ ಕಣ್ಣಿಗೆ 52 ಸಾವಿರ ಹಣ ಇರುವುದು ಕಂಡಿದೆ.

ಇದನ್ನೂ ಓದಿ: ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ

ಯಾರೂ ಇಲ್ಲದ್ದನ್ನ ನೋಡಿದ ವ್ಯಕ್ತಿ 52 ಸಾವಿರ ರೂ. ದೋಚಿ ಪರಾರಿಯಾಗಿದ್ದಾನೆ. ಅನಾಮಿಕ ವ್ಯಕ್ತಿ ಹಣ ದೋಚುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕೆಟಿಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ 15 ದಿನ ಕಳೆದರೂ ಪೊಲೀಸರು ಹಾಗೂ ಬ್ಯಾಂಕ್ ಸಿಬ್ಬಂದಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ವಿಜಯ್​ ಹೇಳಿದ್ದಾರೆ.

ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ: ಪರಾರಿ

ಕೋಲಾರ: ನಗರದ ಪಿ.ಸಿ. ಬಡಾವಣೆಯ ಎಸ್​ಬಿಐ ಎಟಿಎಂನಲ್ಲಿ ದರೋಡೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಶೆಟ್ಡರ್ ಮುರಿದು ಒಳನುಗ್ಗಿದ ಕಳ್ಳರು ಎಟಿಎಂ ಹಣ ಕಳ್ಳತನದ‌ ವಿಫಲ ಯತ್ನದಿಂದಾಗಿ ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಕೋಲಾರ ಪೊಲೀಸರಿಗೆ ಕೊಲೆಗಾರನ ಬಗ್ಗೆ ಟಿಪ್ಸ್ ಕೊಟ್ಟಿದ್ದು ಚಿಪ್ಸ್ ಪ್ಯಾಕೆಟ್, ಆದರೆ ಅದನ್ನು ಮೂವರು ಖರೀದಿಸಿದ್ದರು! ಕೊನೆಗೆ ಹಂತಕನ ಹಿಡಿದ್ದಿದ್ದು ಹೇಗೆ?

ಸ್ಥಳಕ್ಕೆ ನಗರಠಾಣೆ ಸರ್ಕಲ್‌ ಇನ್ಸ್ಪೆಕ್ಟರ್, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಕಳೆದ ರಾತ್ರಿ ಎರಡು ಎಟಿಎಂನಲ್ಲಿ 30 ಲಕ್ಷ ರೂ. ದೋಚಲಾಗಿದೆ. ಕಳ್ಳರ ಬೇಟೆಗೆ ಕೋಲಾರ ನಗರದಲ್ಲಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಸಭೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 pm, Thu, 13 July 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!