AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನತಾ ಪರಿವಾರದ ಹಿರಿಯ ಮುಖಂಡ ಬೆಳಲಗೆರೆ ಹಾಲಸಿದ್ದಪ್ಪ ನಿಧನ

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಲಗೆರೆ ಹಾಲಸಿದ್ದಪ್ಪ ಅವರು ವಯೋ ಸಹಜ ಕಾಯಿಲೆಯಿಂದ ದಾವಣಗೆರೆ ತಾಲೂಕಿನ ಮಿಡ್ಲಕಟ್ಟೆ ಗ್ರಾಮದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಮಾಜಿ ಸಿಎಂ ಜೆ.ಹೆಚ್.ಪಟೇಲ್, ಮಾಜಿ ಸಚಿವ ಹೆಚ್.ಶಿವಪ್ಪ ಒಡನಾಡಿಯಾಗಿದ್ದರು.

ಜನತಾ ಪರಿವಾರದ ಹಿರಿಯ ಮುಖಂಡ ಬೆಳಲಗೆರೆ ಹಾಲಸಿದ್ದಪ್ಪ ನಿಧನ
ಬೆಳಲಗೆರೆ ಹಾಲಸಿದ್ದಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು|

Updated on: Jan 13, 2024 | 8:42 AM

Share

ದಾವಣಗೆರೆ, ಜ.13: ಜನತಾ ಪರಿವಾರದ ಹಿರಿಯ ಮುಖಂಡ, ಭದ್ರಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿದ್ದ ಬೆಳಲಗೆರೆ ಹಾಲಸಿದ್ದಪ್ಪ(92) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಲಗೆರೆ ಹಾಲಸಿದ್ದಪ್ಪ ಅವರು ವಯೋ ಸಹಜ ಕಾಯಿಲೆಯಿಂದ ದಾವಣಗೆರೆ ತಾಲೂಕಿನ ಮಿಡ್ಲಕಟ್ಟೆ ಗ್ರಾಮದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಮಾಜಿ ಸಿಎಂ ಜೆ.ಹೆಚ್.ಪಟೇಲ್, ಮಾಜಿ ಸಚಿವ ಹೆಚ್.ಶಿವಪ್ಪ ಒಡನಾಡಿಯಾಗಿದ್ದರು.

ನಾಲ್ವರು ಪುತ್ರರು, ಮೂವರು ಪುತ್ರಿಯರನ್ನು ಸೇರಿ ಅಪಾರ ಬಂಧು ಬಳಗವನ್ನು ಹಾಲಸಿದ್ದಪ್ಪ ಅಗಲಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದ ತೋಟದಲ್ಲಿ ಇಂದು ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಲಿದೆ.

ಚಿತ್ರದುರ್ಗ ದಾವಣಗೆರೆ ಹಾಗೂ ಶಿವಮೊಗ್ಗ ಭಾಗದಲ್ಲಿ ಜನತಾ ಪರಿವಾರದ ನಾಯಕರಲ್ಲಿ ಹಾಲ ಸಿದ್ದಪ್ಪ ಹೆಸರು‌ ಕೇಳಿ ಬರುತ್ತೆ. ವಿಶೇಷವಾಗಿ ಅಂದಿನ‌ ಕಾಲದ ಶ್ರೇಷ್ಠ ನಾಯಕರಾದ ಶಾಂತವೇರಿ ಗೋಪಾಲಗೌಡ ಅವರ ಒಡನಾಟವಿತ್ತು.‌ ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ, ರಾಜಕಾರಣದಲ್ಲಿ ಬೆಳಲಗೆರೆ ಹಾಲಸಿದ್ದಪ್ಪ ಅಂದ್ರೆ ಪ್ರಸಿದ್ದ. ಮಾಜಿ ಸಿಎಂ ದಿವಂಗತ ಜೆಎಚ್ ಪಟೇಲ್ ಅವರ ಸ್ವಗ್ರಾಮ ಕಾರಿಗನೂರು ಹಾಗೂ ಹಾಲ ಸಿದ್ದಪ್ಪ ಅವರ ಬೆಳಲಗೆರೆ ಅಕ್ಕಪಕ್ಕದ ಗ್ರಾಮಗಳು.‌‌‌ ಮೇಲಾಗಿ ಇಬ್ಬರೂ ಸ್ನೇಹಿತರು. ಆಗಿನ ಕಾಲದಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗ ಭಾಗದಲ್ಲಿ ಪ್ರಸಿದ್ದಿ ಪಡೆದಿದ್ದು ಹರಿಹರದ ಬಾತಿ ಬಳಿ ಇರುವ ಭದ್ರ ಸಹಕಾರ ಸಕ್ಕರೆ ಕಾರ್ಖಾನೆ.‌ ಇಂತಹ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ರೈತರಿಗೆ ಸಹಕಾರಿ ಆಗಿದ್ದರು. ಮಕ್ಕಳು ಸಹ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಾನು ಮಾಜಿ ಮುಖ್ಯಮಂತ್ರಿಯಷ್ಟೇ, ತಿರಸ್ಕೃತ ಅಲ್ಲ: ಶಿವರಾಜ್​ ಸಿಂಗ್ ಚೌಹಾಣ್

ಅಪಘಾತಕ್ಕೆ ಹಸು ಬಲಿ, ಮಾಜಿ ಸಚಿವರ ಸಹಾಯ

ಟ್ಯಾಂಕರ್ ಡಿಕ್ಕಿಯಾಗಿ ಒಂದು ಹಸು ಬಲಿಯಾಗಿದ್ದು, 3 ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​ಪೇಟೆ ಸಮೀಪ ಘಟನೆ ನಡೆದಿದೆ. ಘಟನೆ ನಡೆದಾಗ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಮಾಜಿ ಸಚಿವ ಆರಗ ಜ್ಞಾನೇಂದ್ರ ಹಸುಗಳ ರಕ್ಷಣೆಗೆ ಧಾವಿಸಿದ್ರು. ಗಾಯಗೊಂಡ ಹಸುಗಳಿಗೆ ಚಿಕಿತ್ಸೆ ಕೊಡಿಸುವಂತೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗೆ ಸೂಚಿಸಿದ್ರು. ಜೊತೆಗೆ ಹಸು ಮಾಲೀಕರಿಗೆ ವೈಯಕ್ತಿಕ ಧನ ಸಹಾಯ ಮಾಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..