AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಶೀಘ್ರದಲ್ಲೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ

ಶಿವಮೊಗ್ಗ ಹಾಲು ಒಕ್ಕೂಟದಿಂದ ದಾವಣಗೆರೆ ಮತ್ತು ಚಿತ್ರದುರ್ಗ ಸೇರಿ ಪ್ರತ್ಯಕ ಹಾಲು ಒಕ್ಕೂಟ ದಾವಣಗೆರೆಯಲ್ಲಿ ಶೀಘ್ರದಲ್ಲೇ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಹೇಳಿದ್ದಾರೆ. ಹಸು ಖರೀದಿಗೆ ತಲಾ 40 ಸಾವಿರ ರೂ. ಸಬ್ಸಿಡಿ ನೀಡಲಾಗುವುದು. 5ರಿಂದ 10 ಸಾವಿರ ಹಸುಗಳನ್ನು ರೈತರಿಗೆ ಕೊಡಿಸುವ ಗುರಿ ಇದೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಶೀಘ್ರದಲ್ಲೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ
ಸಚಿವ S.S.ಮಲ್ಲಿಕಾರ್ಜುನ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 13, 2023 | 6:46 PM

Share

ದಾವಣಗೆರೆ, ಆಗಸ್ಟ್​ 13: ಈಗ ಇರುವ ಶಿವಮೊಗ್ಗ ಹಾಲು ಒಕ್ಕೂಟದಿಂದ ದಾವಣಗೆರೆ ಮತ್ತು ಚಿತ್ರದುರ್ಗ ಸೇರಿ ಪ್ರತ್ಯಕ ಹಾಲು ಒಕ್ಕೂಟ ದಾವಣಗೆರೆಯಲ್ಲಿ ಶೀಘ್ರದಲ್ಲೇ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್​ಎಸ್ ಮಲ್ಲಿಕಾರ್ಜುನ (SS Mallikarjuna) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಯಾವುದೇ ರೀತಿಯ‌ ಪ್ರಯತ್ನಗಳು ನಡೆದಿಲ್ಲ. ಈಗ ಪ್ರತ್ಯೇಕ ಹಾಲು ಒಕ್ಕೂಟ ಮಾಡಲಾಗುವುದು ಎಂದು ಹೇಳಿದರು.

ಹಸು ಖರೀದಿಗೆ ತಲಾ 40 ಸಾವಿರ ರೂ. ಸಬ್ಸಿಡಿ ನೀಡಲಾಗುವುದು. 5ರಿಂದ 10 ಸಾವಿರ ಹಸುಗಳನ್ನು ರೈತರಿಗೆ ಕೊಡಿಸುವ ಗುರಿ ಇದೆ ಎಂದು ತಿಳಿಸಿದರು.

ಭೂತಾನ್​ನಿಂದ 17 ಸಾವಿರ ಟನ್ ಅಡಕೆ ಆಮದು: ಪ್ರತಿ ಕ್ವಿಂಟಾಲ್​ ಅಡಕೆ ದರ ಎರಡು ಸಾವಿರ ರೂ.ಗೆ ಕುಸಿತ

ಭೂತಾನ್​ನಿಂದ 17 ಸಾವಿರ ಟನ್ ಅಡಕೆ ಆಮದು ಹಿನ್ನೆಲೆ ಪ್ರತಿ ಕ್ವಿಂಟಾಲ್​ ಅಡಕೆ ದರ ಎರಡು ಸಾವಿರ ರೂ.ಗೆ ಕುಸಿತವಾಗಿದೆ. ಹಾಗಾಗಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅಡಕೆ ಬೆಳೆಗಾರರಿಗೆ ಆತಂಕ ಶುರುವಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಅಡಕೆ ಬೆಳೆಯುವ ತಾಲೂಕು ಚನ್ನಗಿರಿ. ಆದರೆ ಅಡಕೆ ದರ ಮತ್ತಷ್ಟು ಕುಸಿಯುವ ಆತಂಕ ಹಿನ್ನೆಲೆ ಕೊಯ್ಲು ಆರಂಭಿಸಲಾಗಿದೆ.

ಇದನ್ನೂ ಓದಿ: ಬಸ್ ಹತ್ತಿಲ್ಲ, ರೈಲು ಏರಿಲ್ಲ: ಲಿಫ್ಟ್ ಕೇಳಿಕೊಂಡೆ 14 ದೇಶ ಸುತ್ತಿದ ವಿದೇಶಿ ಪ್ರಜೆ

ಪ್ರತಿ ಕ್ವಿಂಟಾಲ್ ರಾಶಿ ಅಡಿಕೆ ದರ ಸರಾಸರಿ 50 ರಿಂದ 55 ಸಾವಿರ ಬದಲು, ಅಡಿಕೆ ಕನಿಷ್ಟ 42,810 ರಿಂದ ಗರುಷ್ಠ 52,012ಕ್ಕೆ ಸರಾಸರಿ 49627ಕ್ಕೆ ಕುಸಿತವಾಗಿದೆ.

ಹಾಲಿನ ದರ ಏರಿಕೆಗೆ ವಿಜಯಪುರ ಜಿಲ್ಲೆಯ ಜನರು ತೀವ್ರ ಬೇಸರ

ವಿಜಯಪುರ: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಲಿನ ದರ ಏರಿಕೆ ಬಿಸಿ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಜನರಿಗೂ ತಟ್ಟಿದೆ. ಹಾಲಿನ ದರ ಏರಿಕೆಗೆ ವಿಜಯಪುರ ಜಿಲ್ಲೆಯ ಜನರು ತೀವ್ರ ಬೇಸರವನ್ನು ಹೊರ ಹಾಕಿದ್ದಾರೆ. ಜನರಿಗೆ ದರ ಏರಿಕೆ ಬಿಸಿ ತಟ್ಟುತ್ತಿದೆ ಅದಕ್ಕೆ ಹಾಕಿನ ದರ ಏರಿಕೆಯೂ ಜೊತೆಗೂಡಿದೆ ಎಂದು ಅಸಮಾಧಾನವನ್ನು ಹೊರ ಹಾಕಿದ್ದರು.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ನಂದಿಯ ಸಮೃದ್ದಿ ಹಾಲು ಲೀಟರ್​ಗೆ 50 ರೂಪಾಯಿ ಇದ್ದದ್ದು ಈಗಾ 54 ರೂಪಾಯಿಗೆ ಏರಿಕೆಯಾಗಿದೆ. ಅದರಂತೆ ಲೀಟರ್ ಗೆ 46 ರೂಪಾಯಿ ಇದ್ದ ಶುಭಂ ಹಾಲು‌ 50 ರೂಪಾಯಿಗೆ ಏರಿಕೆಯಾಗಿದೆ. ನಂದಿನಿ ಬಫೊಲೋ ಹಾಲು ಈ ಮೊದಲು ಲೀಟರ್ ಗೆ 54 ರೂಪಾಯಿ ಇದ್ದು 58 ರೂಪಾಯಿಗೆ ಏರಿಕೆ ಕಂಡಿದೆ. ಜೊತೆಗೆ ಲೀಟರ್ ಗೆ 48 ರೂಪಾಯಿ ಇದ್ದ ಮೊಸಲು ಇದೀಗ 52 ಕ್ಕೆ ರೂಪಾಯಿಗೆ ಜಿಗಿತವಾಗಿದೆ. ಇದರಿಂದ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಎಲ್ಲಾ ದರ ಏರಿಕೆ ಮಾಡಿದ್ದಾರೆ, ಎಲ್ಲ ದರ ಏರಿಕೆ ಮಾಡಿದರೆ ಹೇಗೆ ಎಂದು ನಗರದ ವಾಸಿ ಶಾಂತಾ ಪ್ರಶ್ನೆ ಮಾಡಿದ್ದಾರೆ. ಲೀಟರ್​ಗೆ ಮೂರು ರೂಪಾಯಿ ಏರಿಕೆ ಎಂದವರು ಇಂದು ನಾಲ್ಕು ರೂಪಾಯಿ ಏರಿಕೆ ಮಾಡಿದ್ದಾರೆ. ಮೇಲಿಂದ ಮೇಲೆ ದರ ಏರಿಕೆ ಸರಿಯಲ್ಲಾ ಎಂದಿದ್ದು, ಹಾಲಿದ ದರ ಏರಿಕೆ ಕಡಿಮೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ. ಹಾಲಿನ ದರ ಏರಿಕೆ ಸರಿಯಲ್ಲಾ, ಜನ ಪರ ಸರ್ಕಾರ ಎಂದು ಕಾಂಗ್ರೆಸ್ ಗೆ ಜನರು ಮತ ಹಾಕಿದ್ದಾರೆಂದು ನಗರದ ವಾಸಿ ಜಾವೀದ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ