AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯ: ಹಿರಿಯ ಮುಖಂಡ ಕಾಂಗ್ರೆಸ್​​ಗೆ ಗುಡ್​ಬೈ

ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ಶಾಮನೂರು ಶಿವಶಂಕರಪ್ಪ(Shamanuru Shivashankarappa) ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಹಿಂದ ವರ್ಗದ ಮುಖಂಡರು ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ್ದಾರೆ.

ಶಾಮನೂರು ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯ: ಹಿರಿಯ ಮುಖಂಡ ಕಾಂಗ್ರೆಸ್​​ಗೆ ಗುಡ್​ಬೈ
ಕಾಂಗ್ರೆಸ್​ ಹಿರಿಯ ಮುಖಂಡ ಡಾ.ವೈ.ರಾಮಪ್ಪ, ಶಾಮನೂರು ಶಿವಶಂಕರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 09, 2024 | 5:56 PM

Share

ದಾವಣಗೆರೆ, ಏ.09: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಈ ಮಧ್ಯೆ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ಶಾಮನೂರು ಶಿವಶಂಕರಪ್ಪ(Shamanuru Shivashankarappa) ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಹಿಂದ ವರ್ಗದ ಮುಖಂಡರು ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್​ ಪಕ್ಷಕ್ಕೆ ಹಿರಿಯ ಮುಖಂಡ ಡಾ.ವೈ.ರಾಮಪ್ಪ, ‘ದಾವಣಗೆರೆಯಲ್ಲಿ ಕಾಂಗ್ರೆಸ್ ಅಂದ್ರೆ ಪ್ರೈವೇಟ್ ಲಿಮಿಟೆಡ್ ರೀತಿ ಇದೆ. ಒಂದು ಕುಟುಂಬಕ್ಕೆ ಮಾತ್ರ ಜಿಲ್ಲೆಯಲ್ಲಿ ಕಾಂಗ್ರೆಸ್ ಸೀಮಿತವಾಗಿದೆ ಎಂದು ಕಿಡಿಕಾರಿದರು.

‘ಕನಿಷ್ಠ ಜ್ಞಾನವಿಲ್ಲದ ವ್ಯಕ್ತಿಗೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಚುನಾವಣೆಯಲ್ಲಿ ಬೋವಿ ಸಮುದಾಯವನ್ನು ಕಡೆಗಣಿಸಿದ್ದಾರೆ. ಚುನಾವಣೆಗೆ ದುಡಿಯಲು ಮಾತ್ರ ಅಹಿಂದ ವರ್ಗ ಬೇಕು. ಆದ್ದರಿಂದ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ‌ ರಾಜೀನಾಮೆ ನೀಡುತ್ತೇನೆ. ನಾಳೆ(ಏ.10) ದೆಹಲಿ ಪ್ರವಾಸ ಬಳಿಕ ಯಾವ ಪಕ್ಷಕ್ಕೆ ಬೆಂಬಲ ಎಂದು ತಿಳಿಸುತ್ತೇನೆ ಎಂದರು.

ಇದನ್ನೂ ಓದಿ:ಹವಾನಿಯಂತ್ರಿತ ಕ್ಕಿನಿಕ್ ನಿಂದ ಹೊರಬಂದು ದಾವಣಗೆರೆಯ ಸುಡುಬಿಸಿಲಲ್ಲಿ ಮತಯಾಚಿಸುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ

ಇನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ  ಅವರಿಗೆ ಟಿಕೆಟ್​ ಸಿಕ್ಕ ಬೆನ್ನಲ್ಲೇ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಏಪ್ರಿಲ್​ 05 ರಂದು ಆಧಾರ್​​ ಕಾರ್ಡ್​ ತೋರಿಸಿ ಬಸ್​​​​ನಲ್ಲಿ ಪ್ರಯಾಣ ಮಾಡಿದ್ದರು. ಆ ಮೂಲಕ ದಾವಣಗೆರೆಯಲ್ಲಿ ಸಿಟಿ ಬಸ್​​ನಲ್ಲಿ ಪ್ರಯಾಣಿಸಿ ‘ಶಕ್ತಿ ಯೋಜನೆ’ ಮಾಹಿತಿ ಸಂಗ್ರಹಿಸಿದ್ದರು. ಉಚಿತ ಬಸ್​ ಪ್ರಯಾಣದ ಕುರಿತು ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಸಂಗ್ರಹ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Tue, 9 April 24

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್