AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯ: ಹಿರಿಯ ಮುಖಂಡ ಕಾಂಗ್ರೆಸ್​​ಗೆ ಗುಡ್​ಬೈ

ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ಶಾಮನೂರು ಶಿವಶಂಕರಪ್ಪ(Shamanuru Shivashankarappa) ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಹಿಂದ ವರ್ಗದ ಮುಖಂಡರು ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ್ದಾರೆ.

ಶಾಮನೂರು ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯ: ಹಿರಿಯ ಮುಖಂಡ ಕಾಂಗ್ರೆಸ್​​ಗೆ ಗುಡ್​ಬೈ
ಕಾಂಗ್ರೆಸ್​ ಹಿರಿಯ ಮುಖಂಡ ಡಾ.ವೈ.ರಾಮಪ್ಪ, ಶಾಮನೂರು ಶಿವಶಂಕರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 09, 2024 | 5:56 PM

Share

ದಾವಣಗೆರೆ, ಏ.09: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಈ ಮಧ್ಯೆ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ಶಾಮನೂರು ಶಿವಶಂಕರಪ್ಪ(Shamanuru Shivashankarappa) ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಹಿಂದ ವರ್ಗದ ಮುಖಂಡರು ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್​ ಪಕ್ಷಕ್ಕೆ ಹಿರಿಯ ಮುಖಂಡ ಡಾ.ವೈ.ರಾಮಪ್ಪ, ‘ದಾವಣಗೆರೆಯಲ್ಲಿ ಕಾಂಗ್ರೆಸ್ ಅಂದ್ರೆ ಪ್ರೈವೇಟ್ ಲಿಮಿಟೆಡ್ ರೀತಿ ಇದೆ. ಒಂದು ಕುಟುಂಬಕ್ಕೆ ಮಾತ್ರ ಜಿಲ್ಲೆಯಲ್ಲಿ ಕಾಂಗ್ರೆಸ್ ಸೀಮಿತವಾಗಿದೆ ಎಂದು ಕಿಡಿಕಾರಿದರು.

‘ಕನಿಷ್ಠ ಜ್ಞಾನವಿಲ್ಲದ ವ್ಯಕ್ತಿಗೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಚುನಾವಣೆಯಲ್ಲಿ ಬೋವಿ ಸಮುದಾಯವನ್ನು ಕಡೆಗಣಿಸಿದ್ದಾರೆ. ಚುನಾವಣೆಗೆ ದುಡಿಯಲು ಮಾತ್ರ ಅಹಿಂದ ವರ್ಗ ಬೇಕು. ಆದ್ದರಿಂದ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ‌ ರಾಜೀನಾಮೆ ನೀಡುತ್ತೇನೆ. ನಾಳೆ(ಏ.10) ದೆಹಲಿ ಪ್ರವಾಸ ಬಳಿಕ ಯಾವ ಪಕ್ಷಕ್ಕೆ ಬೆಂಬಲ ಎಂದು ತಿಳಿಸುತ್ತೇನೆ ಎಂದರು.

ಇದನ್ನೂ ಓದಿ:ಹವಾನಿಯಂತ್ರಿತ ಕ್ಕಿನಿಕ್ ನಿಂದ ಹೊರಬಂದು ದಾವಣಗೆರೆಯ ಸುಡುಬಿಸಿಲಲ್ಲಿ ಮತಯಾಚಿಸುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ

ಇನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ  ಅವರಿಗೆ ಟಿಕೆಟ್​ ಸಿಕ್ಕ ಬೆನ್ನಲ್ಲೇ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಏಪ್ರಿಲ್​ 05 ರಂದು ಆಧಾರ್​​ ಕಾರ್ಡ್​ ತೋರಿಸಿ ಬಸ್​​​​ನಲ್ಲಿ ಪ್ರಯಾಣ ಮಾಡಿದ್ದರು. ಆ ಮೂಲಕ ದಾವಣಗೆರೆಯಲ್ಲಿ ಸಿಟಿ ಬಸ್​​ನಲ್ಲಿ ಪ್ರಯಾಣಿಸಿ ‘ಶಕ್ತಿ ಯೋಜನೆ’ ಮಾಹಿತಿ ಸಂಗ್ರಹಿಸಿದ್ದರು. ಉಚಿತ ಬಸ್​ ಪ್ರಯಾಣದ ಕುರಿತು ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಸಂಗ್ರಹ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Tue, 9 April 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ