AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕುರಿ ಬಿಟ್ಟು ಮೆಕ್ಕೆಜೋಳ ಮೇಯಿಸಿದ ದುಷ್ಕರ್ಮಿಗಳು; 20 ಎಕರೆಯಲ್ಲಿದ್ದ ಬೆಳೆ ನಾಶ

ಹಾಲಮ್ಮ, ಚಂದ್ರಶೇಖರ, ಗಂಗಾಧರ್, ಈರಮ್ಮ ಎನ್ನುವವರು ಮೆಕ್ಕೆಜೋಳ ಬೆಳೆದಿದ್ದರು. ಸುಮಾರು ಎಂಟಕ್ಕೂ ಅಧಿಕ ಕುಟುಂಬಗಳು ಇಲ್ಲಿ ಸೇರಿ ಮೆಕ್ಕೆಜೋಳ ಬೆಳೆದಿದ್ದರು.

ದಾವಣಗೆರೆ: ಕುರಿ ಬಿಟ್ಟು ಮೆಕ್ಕೆಜೋಳ ಮೇಯಿಸಿದ ದುಷ್ಕರ್ಮಿಗಳು; 20 ಎಕರೆಯಲ್ಲಿದ್ದ ಬೆಳೆ ನಾಶ
ಬೆಳೆನಾಶ
TV9 Web
| Edited By: |

Updated on: Jul 21, 2021 | 11:12 PM

Share

ದಾವಣಗೆರೆ: ಇಲ್ಲಿನ ಜಗಳೂರು ತಾಲೂಕಿನ ಹೊಸಕೆರೆ ಗ್ರಾಮದ 20 ಎಕರೆ ಬೆಳೆನಾಶವಾದ ದುರಂತ ಘಟನೆ ಇಂದು (ಜುಲೈ 21) ಗಮನಕ್ಕೆ ಬಂದಿದೆ. ಇಲ್ಲಿನ 20 ಎಕರೆ ಹೊಲದಲ್ಲಿ ದುಷ್ಕರ್ಮಿಗಳು ಕುರಿ ಬಿಟ್ಟು ಮೆಕ್ಕೆಜೋಳ ಮೇಯಿಸಿದ ಘಟನೆ ನಡೆದಿದೆ. ಹಾಲಮ್ಮ, ಚಂದ್ರಶೇಖರ, ಗಂಗಾಧರ, ಈರಮ್ಮ ಸೇರಿದಂತೆ 8ಕ್ಕೂ ಹೆಚ್ಚು ರೈತರು ಬೆಳೆದಿದ್ದ ಮೆಕ್ಕೆಜೋಳದ ಬೆಳೆ ನಾಶವಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರೋರಾತ್ರಿ 20 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ದುಷ್ಕರ್ಮಿಗಳು ಕುರಿ ಬಿಟ್ಟು ಮೇಯಿಸಿಕೊಂಡು ಹೋಗಿದ್ದರು. ಹಾಲಮ್ಮ, ಚಂದ್ರಶೇಖರ, ಗಂಗಾಧರ್, ಈರಮ್ಮ ಎನ್ನುವವರು ಮೆಕ್ಕೆಜೋಳ ಬೆಳೆದಿದ್ದರು. ಸುಮಾರು ಎಂಟಕ್ಕೂ ಅಧಿಕ ಕುಟುಂಬಗಳು ಇಲ್ಲಿ ಸೇರಿ ಮೆಕ್ಕೆಜೋಳ ಬೆಳೆದಿದ್ದರು.

ಆದರೆ, ಇಷ್ಟೊಂದು ದೊಡ್ಡ ಸ್ಥಳದಲ್ಲಿ, ಎಕರೆಗಟ್ಟಲೆ ಜಾಗದಲ್ಲಿ ಬೆಳೆದ ಮೆಕ್ಕೆಜೋಳವನ್ನು ದುಷ್ಕರ್ಮಿಗಳು ಕುರಿ ಮೇಯಿಸಿಕೊಂಡು ಹೋಗಿದ್ದಾರೆ. ಈ ಕೃತ್ಯದಿಂದ ರೈತರ ಆಕ್ರಂದನ ಮುಗಿಲು ಮುಟ್ಟಿದೆ. 20 ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಿ ಬೆಳೆದ ಬೆಳೆ ಕೈ ಸೇರದೆ ಇರೋದಕ್ಕೆ ರೈತರು ಕಣ್ಣೀರು ಹಾಕಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಒಂಟಿ ವೃದ್ಧೆ ಕೊಲೆ ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ಡಾಗ್ ತುಂಗಾ; ಶ್ವಾನದ ಯಶೋಗಾಥೆ ಇಲ್ಲಿದೆ

ದಾವಣಗೆರೆಯಲ್ಲಿ ಧಾರಾಕಾರ ಮಳೆಗೆ ಕೆಇಬಿ ಉಪಕೇಂದ್ರದ ಕಚೇರಿ ಜಲಾವೃತ; ಇಬ್ಬರು ಸಿಬ್ಬಂದಿಯ ರಕ್ಷಣೆ

(Sheep eat Corn grown in 20 Acres of Land in Davanagere Farmers registered Complaint)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್