AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ
ಶಾಮನೂರ ಶಿವಶಂಕರಪ್ಪ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 10, 2023 | 5:15 PM

ದಾವಣಗೆರೆ, ಡಿಸೆಂಬರ್​​ 10: ಸರ್ವ ವೀರಶೈವ ಲಿಂಗಾಯತರು ಕೇಂದ್ರದ ಓಬಿಸಿ ಪಟ್ಟಿಗೆ ಸೇರಬೇಕು. ‌ಜೊತೆಗೆ ಜಾತಿ ‌ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೇ 23 ಮತ್ತು 24 ರಂದು ದಾವಣಗೆರೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ 24ನೇ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನ ನಡೆಯಲಿದೆ. ಕನಿಷ್ಟ 3 ರಿಂದ 4 ಲಕ್ಷ ಜನ ಸೇರುತ್ತಾರೆ. ವೀರಶೈವ ಪರಂಪರೆಯ ಎಲ್ಲ ಸ್ವಾಮೀಜಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಮಹಾ ಅಧಿವೇಶನದ ಬಗ್ಗೆ ಜನರಿಗೆ ಮಾಹಿತಿ‌ ನೀಡಲು‌ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಿದ್ದಾರೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ: ಶಾಮನೂರು ಶಿವಶಂಕರಪ್ಪ

ಮುರಘಾ ಶ್ರೀ ವಿಚಾರವಾಗಿ ಮಾತನಾಡಿದ ಅವರು, ಚಿತ್ರದುರ್ಗದ ಮುರಘಾಶ್ರೀ ಅವರು ಆರೋಪ ಮುಕ್ತರಾಗಿ ಹೊರಬರಲಿ. ಆಮೇಲೆ ವೀರಶೈವ ‌ಮಹಾ ಅಧಿವೇಶಕ್ಕೆ ಕೆರಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ವರ್ಷ ಕೊರೊನಾ ಹಾಗೂ ಚುನಾವಣೆ ಹಿನ್ನೆಲೆ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನವನ್ನು ಮುಂದೂಡಲಾಗಿತ್ತು. ಪ್ರತಿ 5 ವರ್ಷಕ್ಕೊಮ್ಮೆ ಮಹಾಸಭೆಯ ಮಹಾ ಅಧಿವೇಶನ ನಡೆಯುತ್ತದೆ. ರೈತರು, ಮಹಿಳಾ ಗೋಷ್ಠಿ ಹಾಗೂ ವೀರಶೈವ ಪರಂಪರೆಯ ಬಗ್ಗೆ ಚರ್ಚೆ ಮಾಡಲಾಗುವುದು.

ಇದನ್ನೂ ಓದಿ: ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ

ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ ಇತ್ತೀಚೆಗೆ ಶಾಮನೂರು ಶಿವಶಂಕರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಮಾಡಲು ಹೇಳಿದ್ದೇನೆ ಎಂದಿದ್ದರು.

ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:11 pm, Sun, 10 December 23

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ