AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ
ಶಾಮನೂರ ಶಿವಶಂಕರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Dec 10, 2023 | 5:15 PM

Share

ದಾವಣಗೆರೆ, ಡಿಸೆಂಬರ್​​ 10: ಸರ್ವ ವೀರಶೈವ ಲಿಂಗಾಯತರು ಕೇಂದ್ರದ ಓಬಿಸಿ ಪಟ್ಟಿಗೆ ಸೇರಬೇಕು. ‌ಜೊತೆಗೆ ಜಾತಿ ‌ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೇ 23 ಮತ್ತು 24 ರಂದು ದಾವಣಗೆರೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ 24ನೇ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನ ನಡೆಯಲಿದೆ. ಕನಿಷ್ಟ 3 ರಿಂದ 4 ಲಕ್ಷ ಜನ ಸೇರುತ್ತಾರೆ. ವೀರಶೈವ ಪರಂಪರೆಯ ಎಲ್ಲ ಸ್ವಾಮೀಜಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಮಹಾ ಅಧಿವೇಶನದ ಬಗ್ಗೆ ಜನರಿಗೆ ಮಾಹಿತಿ‌ ನೀಡಲು‌ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಿದ್ದಾರೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ: ಶಾಮನೂರು ಶಿವಶಂಕರಪ್ಪ

ಮುರಘಾ ಶ್ರೀ ವಿಚಾರವಾಗಿ ಮಾತನಾಡಿದ ಅವರು, ಚಿತ್ರದುರ್ಗದ ಮುರಘಾಶ್ರೀ ಅವರು ಆರೋಪ ಮುಕ್ತರಾಗಿ ಹೊರಬರಲಿ. ಆಮೇಲೆ ವೀರಶೈವ ‌ಮಹಾ ಅಧಿವೇಶಕ್ಕೆ ಕೆರಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ವರ್ಷ ಕೊರೊನಾ ಹಾಗೂ ಚುನಾವಣೆ ಹಿನ್ನೆಲೆ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನವನ್ನು ಮುಂದೂಡಲಾಗಿತ್ತು. ಪ್ರತಿ 5 ವರ್ಷಕ್ಕೊಮ್ಮೆ ಮಹಾಸಭೆಯ ಮಹಾ ಅಧಿವೇಶನ ನಡೆಯುತ್ತದೆ. ರೈತರು, ಮಹಿಳಾ ಗೋಷ್ಠಿ ಹಾಗೂ ವೀರಶೈವ ಪರಂಪರೆಯ ಬಗ್ಗೆ ಚರ್ಚೆ ಮಾಡಲಾಗುವುದು.

ಇದನ್ನೂ ಓದಿ: ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ

ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ ಇತ್ತೀಚೆಗೆ ಶಾಮನೂರು ಶಿವಶಂಕರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಮಾಡಲು ಹೇಳಿದ್ದೇನೆ ಎಂದಿದ್ದರು.

ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:11 pm, Sun, 10 December 23

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ