ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ
ಶಾಮನೂರ ಶಿವಶಂಕರಪ್ಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 10, 2023 | 5:15 PM

ದಾವಣಗೆರೆ, ಡಿಸೆಂಬರ್​​ 10: ಸರ್ವ ವೀರಶೈವ ಲಿಂಗಾಯತರು ಕೇಂದ್ರದ ಓಬಿಸಿ ಪಟ್ಟಿಗೆ ಸೇರಬೇಕು. ‌ಜೊತೆಗೆ ಜಾತಿ ‌ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೇ 23 ಮತ್ತು 24 ರಂದು ದಾವಣಗೆರೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ 24ನೇ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನ ನಡೆಯಲಿದೆ. ಕನಿಷ್ಟ 3 ರಿಂದ 4 ಲಕ್ಷ ಜನ ಸೇರುತ್ತಾರೆ. ವೀರಶೈವ ಪರಂಪರೆಯ ಎಲ್ಲ ಸ್ವಾಮೀಜಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಮಹಾ ಅಧಿವೇಶನದ ಬಗ್ಗೆ ಜನರಿಗೆ ಮಾಹಿತಿ‌ ನೀಡಲು‌ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಿದ್ದಾರೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ: ಶಾಮನೂರು ಶಿವಶಂಕರಪ್ಪ

ಮುರಘಾ ಶ್ರೀ ವಿಚಾರವಾಗಿ ಮಾತನಾಡಿದ ಅವರು, ಚಿತ್ರದುರ್ಗದ ಮುರಘಾಶ್ರೀ ಅವರು ಆರೋಪ ಮುಕ್ತರಾಗಿ ಹೊರಬರಲಿ. ಆಮೇಲೆ ವೀರಶೈವ ‌ಮಹಾ ಅಧಿವೇಶಕ್ಕೆ ಕೆರಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ವರ್ಷ ಕೊರೊನಾ ಹಾಗೂ ಚುನಾವಣೆ ಹಿನ್ನೆಲೆ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನವನ್ನು ಮುಂದೂಡಲಾಗಿತ್ತು. ಪ್ರತಿ 5 ವರ್ಷಕ್ಕೊಮ್ಮೆ ಮಹಾಸಭೆಯ ಮಹಾ ಅಧಿವೇಶನ ನಡೆಯುತ್ತದೆ. ರೈತರು, ಮಹಿಳಾ ಗೋಷ್ಠಿ ಹಾಗೂ ವೀರಶೈವ ಪರಂಪರೆಯ ಬಗ್ಗೆ ಚರ್ಚೆ ಮಾಡಲಾಗುವುದು.

ಇದನ್ನೂ ಓದಿ: ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ

ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ ಇತ್ತೀಚೆಗೆ ಶಾಮನೂರು ಶಿವಶಂಕರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಮಾಡಲು ಹೇಳಿದ್ದೇನೆ ಎಂದಿದ್ದರು.

ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:11 pm, Sun, 10 December 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು