AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಅವಹೇಳನಕಾರಿ ಸ್ಟೇಟಸ್ ವಿಚಾರ; ಯುವಕನಿಗೆ ಮೊಳೆಯಿಂದ ಇರಿದು ಘರ್ಷಣೆ, ಪರಿಸ್ಥಿತಿ ನಿಭಾಯಿಸಲು ನಿಷೇಧಾಜ್ಞೆ ಜಾರಿ

ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್​ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ ಜತೆ ಪೊಲೀಸರು ಸಭೆ ನಡೆಸಿದ್ದಾರೆ.

ದಾವಣಗೆರೆ: ಅವಹೇಳನಕಾರಿ ಸ್ಟೇಟಸ್ ವಿಚಾರ; ಯುವಕನಿಗೆ ಮೊಳೆಯಿಂದ ಇರಿದು ಘರ್ಷಣೆ, ಪರಿಸ್ಥಿತಿ ನಿಭಾಯಿಸಲು ನಿಷೇಧಾಜ್ಞೆ ಜಾರಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 09, 2022 | 11:37 PM

Share

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​ ಹಿನ್ನೆಲೆ ಮಲೇಬೆನ್ನೂರು ವೃತ್ತದಲ್ಲಿ ಯುವಕನಿಗೆ ಮೊಳೆಯಿಂದ ಇರಿಯಲಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಎಂಬಲ್ಲಿ 23 ವರ್ಷದ ಯುವಕನಿಗೆ ಮೊಳೆಯಿಂದ ಇರಿದು ಘಾಸಿಗೊಳಿಸಲಾಗಿದೆ. ಅಲ್ಲದೆ, ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್​ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ ಜತೆ ಪೊಲೀಸರು ಸಭೆ ನಡೆಸಿದ್ದಾರೆ.

ಅವಹೇಳನಕಾರಿ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಒಂದು ಗುಂಪಿನವರಿಂದ ಹಲ್ಲೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹರಿಹರ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ನಿನ್ನೆ ಹರಿಹರ, ದಾವಣಗೆರೆಗೆ ಸೀಮಿತವಾಗಿದ್ದ ನಿಷೇಧಾಜ್ಞೆ ಇಂದು ಹರಿಹರ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮಹಾಂತೇಶ ಬೀಳಗಿ ಆದೇಶ ನೀಡಿದ್ದಾರೆ.

ಕೋಲಾರ ತಾಲೂಕು ಕಚೇರಿಯಲ್ಲಿ ಆರ್​ಐ ಎಸಿಬಿ ಬಲೆಗೆ

ಕೋಲಾರ ತಾಲೂಕು ಕಚೇರಿಯಲ್ಲಿ ಆರ್​ಐ ಎಸಿಬಿ ಬಲೆಗೆ ಬಿದ್ದಿದ್ದಾರೆ. 20,000 ರೂ. ಲಂಚ ಸ್ವೀಕರಿಸುವಾಗ ವಿಜಯದೇವ್​ ಬಲೆಗೆ ಬಿದ್ದಿದ್ದಾರೆ. ತೇರಹಳ್ಳಿಯ ಸೀನಪ್ಪನಿಂದ ಲಂಚ ಸ್ವೀಕರಿಸುವಾಗ RI ಬಲೆಗೆ ಸಿಕ್ಕಿದ್ದಾರೆ. ಖಾತೆ ಮಾಡಿಕೊಡಲು ₹60,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 60,000 ರೂ. ಪೈಕಿ 20,000 ರೂ. ಲಂಚ ಪಡೆವಾಗ ವಶಕ್ಕೆ ಪಡೆಯಲಾಗಿದೆ. ತಾಲೂಕು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಆರ್​ಐಗೆ ಸಿಕ್ಕಿಬಿದ್ದಿದ್ದಾರೆ. ಕೋಲಾರ ಎಸಿಬಿ ಡಿವೈಎಸ್​ಪಿ ಸುಧೀರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬಾಗಲಕೋಟೆ: ಪ್ರಾರ್ಥನಾ ಮಂದಿರದ ಮೇಲೆ ಕಲ್ಲೆಸೆದಿದ್ದಾರೆಂದು ಯುವಕನ ಮೇಲೆ ಹಲ್ಲೆ

ಪ್ರಾರ್ಥನಾ ಮಂದಿರದ ಮೇಲೆ ಕಲ್ಲೆಸೆದಿದ್ದಾರೆಂದು ಆರೋಪದಲ್ಲಿ ಬಾಗಲಕೋಟೆಯ ನವನಗರದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಉರ್ದು ಶಾಲೆ ಬಳಿ ಒಂದು ಗುಂಪಿನ ಯುವಕರಿಂದ ಹಲ್ಲೆ ನಡೆಸಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಹಲ್ಲೆ‌ ಮಾಡ್ತಿದ್ದ ಯುವಕನನ್ನ ಪೊಲೀಸರು ಕರೆದೊಯ್ದಿದ್ದಾರೆ. ಗಾಯಾಳು ಯುವಕನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೋಲಾರ: ಹುಚ್ಚುನಾಯಿ ದಾಳಿ ಹತ್ತಕ್ಕೂ ಜನರಿಗೆ ಗಾಯ

ಹುಚ್ಚುನಾಯಿ ದಾಳಿ ಹತ್ತಕ್ಕೂ ಜನರಿಗೆ ಗಾಯವಾದ ಘಟನೆ ಕೋಲಾರ ನಗರದ ಆರ್.ಜಿ. ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ ಒಂದು ಮಗು ಸೇರಿದಂತೆ ಹತ್ತಕ್ಕೂ ಹೆಚ್ಚುಜನರ ಮೇಲೆ ದಾಳಿ ಮಾಡಿದೆ. ಸಂಜೆ ವಾಕಿಂಗ್ ಹೋಗಿದ್ದವರ ಮೇಲೆಯೂ ನಾಯಿ ದಾಳಿ ಮಾಡಿದೆ. ಗಾಯಾಳುಗಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಜಕುಮಾರ ಪಾಟೀಲ್ ತೇಲ್ಕೂರ್​ಗೆ ಬ್ಲ್ಯಾಕ್​ಮೇಲ್​ ಪ್ರಕರಣದ ಬಗ್ಗೆ ಕಮಲ್ ಪಂತ್ ಮಾಹಿತಿ

ರಾಜಕುಮಾರ ಪಾಟೀಲ್ ತೇಲ್ಕೂರ್​ಗೆ ಬ್ಲ್ಯಾಕ್​ಮೇಲ್​ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯವರು ದೂರು ನೀಡಿದ್ದಾರೆ ಎಂದು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ತೇಲ್ಕೂರ್ ನೀಡಿದ ದೂರಿನ ಬಗ್ಗೆ ಎಫ್​ಐಆರ್​​ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಮಹಿಳೆ ನೀಡಿದ್ದ ದೂರನ್ನು ಯಲಹಂಕ ಎಸಿಪಿಗೆ ವಹಿಸಲಾಗಿದೆ. ಅವರು ನೋಟಿಸ್ ನೀಡಿದ್ದರೂ ಮಹಿಳೆ ವಿಚಾರಣೆಗೆ ಬಂದಿಲ್ಲ. ಅವರು ಬಂದು ಏನಾಗಿದೆ ಎಂದು ಮಾಹಿತಿ ನೀಡಿದ್ರೆ ವಿಚಾರಣೆ ನಡಸಲಾಗುತ್ತದೆ. ಯಲಹಂಕ ಉಪ ವಿಭಾಗದ ಎಸಿಪಿ ವಿಚಾರಣೆ ನಡೆಸುತ್ತಾರೆ ಎಂದು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಇದನ್ನೂ ಓದಿ: Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ

ಇದನ್ನೂ ಓದಿ: Crime News: ಯುವತಿ ವಿಚಾರಕ್ಕೆ ವಿದ್ಯಾರ್ಥಿಗೆ ಚಾಕು ಇರಿತ, ಮೊಬೈಲ್ ಬಳಕೆ ಕಡಿಮೆ ಮಾಡಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ