AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಪುತ್ರಿ ಹಾಗೂ ಸಹೋದರರ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳ ಮೇಲೆ ಕೈಗೊಂಡಿರುವ ಕ್ರಮದ ಕುರಿತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ವರದಿ ಕೇಳಿದ್ದಾರೆ.

ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ
ರೇಣುಕಾಚಾರ್ಯ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 02, 2023 | 9:22 AM

Share

ದಾವಣಗೆರೆ, (ಅಕ್ಟೋಬರ್ 02): ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (MP renukacharya) ಪುತ್ರಿ ಹಾಗೂ ಸಹೋದರರ ಜಾತಿ ಪ್ರಮಾಣ ಪತ್ರ (SC caste certificate) ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಇದೀಗ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳ ಮೇಲೆ ಕೈಗೊಂಡಿರುವ ಕ್ರಮದ ಕುರಿತು ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರೇಣುಕಾಚಾರ್ಯ ಪುತ್ರಿ ಹಾಗೂ ಸಹೋದರ ಜಾತಿ ಪ್ರಮಾಣ ಪತ್ರ ರದ್ದು ಮಾಡಿ 2023 ಏಪ್ರಿಲ್​ 19 ಮತ್ತು ಜೂನ್ 27 ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ರೇಣುಕಾಚಾರ್ಯ ಪುತ್ರಿ ಹಾಗೂ ಸಹೋದರರು ಪಡೆದ ಸುಳ್ಳು ಜಾತಿ ಪತ್ರ ಪಡೆದಿದ್ದು ಸ್ಪಷ್ಟವಾಗಿದ್ದು, ಈ ಬಗ್ಗೆ ಸ್ಪಷ್ಷ ಮಾಹಿತಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಗೆ ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಜಂಟಿ ಉಪ ನಿರ್ದೇಶಕರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?

ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ ಹಾಗೂ ರೇಣುಕಾಚಾರ್ಯ ಸಹೋದರರಾದ ಎಂಪಿ ದ್ವಾರಕೇಶ್ವರಯ್ಯ, ಎಂಪಿ ವಾಗೀಶ್ ಅವರು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಎಂಪಿ ದ್ವಾರಕೇಶ್ವರಯ್ಯ ಅವರು ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದು ಈ ಹಿಂದೆ ಕಲಬುರಗಿ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಒಮ್ಮೆ ಸ್ಪರ್ಧೆ ಮಾಡಿದ್ದರು.

ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌. ಚೇತನಾ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದರು. ಆ ಜಾತಿ ಪ್ರಮಾಣಪತ್ರವನ್ನು ಚೇತನಾ ಬಳಸಿ ಸರಕಾರದ ಸವಲತ್ತು ಪಡೆದಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಎಂ.ಪಿ.ರೇಣುಕಾಚಾರ್ಯ ಹೇಳುವಂತೆ ”ನನ್ನ ಪುತ್ರಿಗೆ ಸಹೋದರ ಎಸ್‌ಸಿ ಜಾತಿ ಪ್ರಮಾಣಪತ್ರ ಕೊಡಿಸಿದ್ದು ನಿಜ. ಆ ವಿಷಯ ನನ್ನ ಗಮನಕ್ಕೆ ಬಂದ ಕೂಡಲೇ ಅದನ್ನು ರದ್ದು ಮಾಡಲು ಅಂದೇ ಪತ್ರ ನೀಡುವಂತೆ ಸೂಚಿಸಿದ್ದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ