AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಉತ್ಸವ ವಿಚಾರದಲ್ಲಿ 2 ಗ್ರಾಮಗಳ ನಡುವೆ ಮಾರಾಮಾರಿ; 10 ಜನರು ಆಸ್ಪತ್ರೆಗೆ ದಾಖಲು, ಬಸವನಹಳ್ಳಿ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ ಮತ್ತು ಮಾದನಬಾವಿ ಎಂಬ ಎರಡು ಗ್ರಾಮಗಳ ಗ್ರಾಮಸ್ಥರ ನಡುವೆ ಮಾರಾಮಾರಿಯಾಗಿದೆ. ಯುಗಾದಿ ಹಬ್ಬದ ನಡೆಯುವ ಪೂಜೆ ಕಾರ್ಯಕ್ರಮದ ವೇಳೆ ಗಲಾಟೆ ನಡೆದಿದೆ.

ದೇವರ ಉತ್ಸವ ವಿಚಾರದಲ್ಲಿ 2 ಗ್ರಾಮಗಳ ನಡುವೆ ಮಾರಾಮಾರಿ; 10 ಜನರು ಆಸ್ಪತ್ರೆಗೆ ದಾಖಲು, ಬಸವನಹಳ್ಳಿ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ
ದೇವರ ಉತ್ಸವ ವಿಚಾರದಲ್ಲಿ 2 ಗ್ರಾಮಗಳ ನಡುವೆ ಮಾರಾಮಾರಿ; 10 ಜನರು ಆಸ್ಪತ್ರೆಗೆ ದಾಖಲು, ಬಸವನಾಳು ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ
TV9 Web
| Edited By: |

Updated on:Apr 04, 2022 | 3:03 PM

Share

ದಾವಣಗೆರೆ: ದೇವರ ಉತ್ಸವ ವಿಚಾರದಲ್ಲಿ 2 ಗ್ರಾಮಗಳ ನಡುವೆ ಮಾರಾಮಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು ಗಲಾಟೆಯಲ್ಲಿ 10 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ ಮತ್ತು ಮಾದನಬಾವಿ ಎಂಬ ಎರಡು ಗ್ರಾಮಗಳ ಗ್ರಾಮಸ್ಥರ ನಡುವೆ ಮಾರಾಮಾರಿಯಾಗಿದೆ. ಯುಗಾದಿ ಹಬ್ಬದ ನಡೆಯುವ ಪೂಜೆ ಕಾರ್ಯಕ್ರಮದ ವೇಳೆ ಗಲಾಟೆ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿ ಹಾಗೂ ಮಾದನಬಾವಿ ಗ್ರಾಮಗಳ ನಡುವೆ ತಿಕ್ಕಾಟವಾಗಿದೆ.ಪ್ರತಿ ಯುಗಾದಿಗೆ ಮಾದನಬಾವಿಯ ಬೀರದೇವರು ಬಸವನಹಳ್ಳಿ ಮಾರ್ಗವಾಗಿ ತೆರಳಿ ಗಡ್ಡೆರಾಮೇಶ್ವರದ ತುಂಗಭದ್ರ ನದಿಗೆ ಪೂಜೆ ಮಾಡಿ ಬರಬೇಕು. ಆದ್ರೆ ಬೀರದೇವರ ಪಲ್ಲಕ್ಕಿ ವಿಚಾರವಾಗಿ ಎರಡು ಗ್ರಾಮಗಳ ನಡುವೆ 20 ವರ್ಷಗಳ ಜಗಳವಿದೆ.ವಿಷ್ಯ ಏನಂದ್ರೆ, ಮಾದನಬಾವಿಯ ಬೀರದೇವರು ನಮ್ಮ ಗ್ರಾಮದ ಮಾರ್ಗವಾಗಿ ಹೋಗಬಾರದು ಅಂತಾ ಬಸವನಹಳ್ಳಿ ಗ್ರಾಮಸ್ಥರು ಕೋರ್ಟ್​ನಲ್ಲಿ ದಾವೆ ಹೂಡಿದ್ರು. ಆದ್ರೆ, ಕೋರ್ಟ್​ ಮಾದನಬಾವಿ ಬೀರದೇವರು ತೆರಳಲು ಗ್ರೀನ್​ ಸಿಗ್ನಲ್​ ನೀಡಿತ್ತು. ಅದರಂತೆ ಪ್ರತಿವರ್ಷ ಬೀರದೇವರು ಬಸವನಹಳ್ಳಿ ಗ್ರಾಮದ ಮೂಲಕ ಪೊಲೀಸ್​ ಬಂದೋಬಸ್ತ್​ನಲ್ಲಿ ತೆರಳುತ್ತಾನೆ. ಆದ್ರೆ ಹೀಗೆ ತೆರಳುವಾಗ ನಿನ್ನೆ ನಡೆದಿದ್ದೇ ಬೇರೆ.

ಬೀರದೇವರ ಪಲ್ಲಕ್ಕಿ ಬಸನಹಳ್ಳಿಗೆ ಬಂದಾಗ ಅದಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬುದು ಮಾದನಬಾವಿ ಗ್ರಾಮಸ್ಥರ ಆರೋಪ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಎರಡು ಗ್ರಾಮಸ್ಥರು ಕಲ್ಲು ತೂರಾಡಿಕೊಂಡಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರಿಗೂ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಮಾದನಬಾವಿ ಗ್ರಾಮಸ್ಥರು ಬಸವನಹಳ್ಳಿ ಹಾಗೂ ಗೋವಿನಕೊವಿ ಗ್ರಾಮದ ರಸ್ತೆ ಬಂದ್ ಮಾಡಿ ಧರಣಿ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಸುಖ-ದುಃಖದ ಸಂಕೇತವಾದ ಯುಗಾದಿಯಂದೇ ಗ್ರಾಮಸ್ಥರು ಹೀಗೆ ಕಚ್ಚಾಡಿಕೊಂಡಿದ್ದು ಮಾತ್ರ ವಿಪರ್ಯಾಸ

ವರದಿ: ಬಸವರಾಜ್ ದೊಡ್ಮನಿ, ಟಿವಿ9 ದಾವಣಗೆರೆ ಇದನ್ನೂ ಓದಿ: ಮಹಾರಾಷ್ಟ್ರದ ನಾಸಿಕ್ ಬಳಿ ಹಳಿತಪ್ಪಿದ ಲೋಕಮಾನ್ಯ ತಿಲಕ್-ಜಯನಗರ ಎಕ್ಸ್‌ಪ್ರೆಸ್ ರೈಲು; ಇಬ್ಬರಿಗೆ ಗಾಯ

ಭಾವಿ ಮಾವನ ಜತೆ ಆಗಾಗ ವಾದ ಮಾಡುವ ಕೆಎಲ್​ ರಾಹುಲ್; ಕಾರಣವೇನು? ಎಲ್ಲವನ್ನೂ ಹೇಳಿಕೊಂಡ ಕ್ರಿಕೆಟ್ ತಾರೆ

Published On - 8:17 pm, Sun, 3 April 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು