AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ: ಅಡಿಕೆ ಮರಗಳಿಗೆ ಶುರುವಾದ ವಿಚಿತ್ರ ರೋಗಬಾಧೆ; ಕಂಗಾಲಾದ ರೈತರು

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಅಂದರೆ ಅಡಿಕೆ ನಾಡು ಎಂದೇ ಪ್ರಸಿದ್ಧ. ಈ ಒಂದೇ ತಾಲೂಕಿನಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಬೆಳೆಯುತ್ತಾರೆ. ಚನ್ನಗಿರಿ ಕೆಂಪು ಅಡಿಕೆ ಅಂದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಹ ಉತ್ತಮ ಹೆಸರಿದೆ. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಅಡಿಕೆ ಬೆಳೆಗಾರರ ಮನಸ್ಸಿನಲ್ಲಿ ಭಯ ಆವರಿಸಿದೆ. ಅಡಿಕೆ ಮರಗಳಿಗೆ ವಿವಿಧ ರೋಗಗಳು ಕಾಣಿಸಿಕೊಳ್ಳಲು ಶುರುವಾಗಿದೆ.

ಚನ್ನಗಿರಿ: ಅಡಿಕೆ ಮರಗಳಿಗೆ ಶುರುವಾದ ವಿಚಿತ್ರ ರೋಗಬಾಧೆ; ಕಂಗಾಲಾದ ರೈತರು
ಅಡಿಕೆ ಮರಗಳಿಗೆ ಒಕ್ಕರಿಸಿದ ರೋಗಭಾಧೆ
ಕಿರಣ್ ಹನುಮಂತ್​ ಮಾದಾರ್
|

Updated on:Mar 27, 2023 | 10:28 AM

Share

ದಾವಣಗೆರೆ: ಚನ್ನಗಿರಿಯ ಅಡಿಕೆ ಶ್ರೀಮಂತರಿಗೆ ಇದ್ದಕ್ಕಿದ್ದಂತೆ ಇದೀಗ ಭಯ ಶುರುವಾಗಿದೆ. ಇತ್ತೀಚಿಗೆ ಅಡಿಕೆಗೆ ಅದ್ಭುತ ಬೆಲೆ ಸಿಗುತ್ತಿದೆ. ಇದಕ್ಕಾಗಿ ಪ್ರತಿ ವರ್ಷ ಮೂರು ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಅಡಿಕೆ ಹಾಕಲಾಗುತ್ತಿದೆ. ಮೇಲಾಗಿ ಅಡಿಕೆ ತೋಟ ಅಂದರೆ ಚನ್ನಗಿರಿ, ಚನ್ನಗಿರಿ ಅಂದ್ರೆ ಅಡಿಕೆನಾಡು. ಇಂತಹ ಪ್ರದೇಶದಲ್ಲಿ ಅಡಿಕೆ ಮರಗಳಿಗೆ ಇದ್ದಕ್ಕಿದ್ದಂತೆ ವಿಚಿತ್ರ ರೋಗಗಳು ಕಾಣಿಸಿಕೊಂಡಿವೆ. ಹೌದು ಹತ್ತಾರು ವರ್ಷ ಫಲ ನೀಡಿದ ಅಡಿಕೆಯ ಮರ ಇದ್ದಕ್ಕಿದ್ದಂತೆ ಒಣಗುವುದರ ಜೊತೆಗೆ ಅಡಿಕೆ ಉದುರುತ್ತಿದೆ. ಮೇಲಾಗಿ ಅಡಿಕೆ ಮರದ ಬೇರುಗಳು ಕೊಳೆತು ಹೋಗಲು ಶುರುವಾಗಿದೆ. ಇದರಿಂದ ಚನ್ನಗಿರಿ ಅಡಿಕೆ ತೋಟದ ಮಾಲೀಕರ ಮನೆಯಲ್ಲಿ ಆತಂಕ ಶುರುವಾಗಿದೆ. ಕೋಟಿ ಕೋಟಿ ವಹಿವಾಟಿನ ಈ ಅಡಿಕೆ ತೋಟಗಳಿಗೆ ಇಂತಹ ವಿಚಿತ್ರ ಕಾಯಿಲೆ ಸುರುವಾಗಿದ್ದು. ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗದಂತೆ ರೈತರು ಹೋರಾಟ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ಏಕೈಕ ತಾಲೂಕು ಚನ್ನಗಿರಿ. ಜಿಲ್ಲೆಯಲ್ಲಿ ಬರೋಬರಿ 48,989 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅಂದರೆ ವರ್ಷಕ್ಕೆ 72,668 ಟನ್ ಅಡಿಕೆ ದಾವಣಗೆರೆ ಜಿಲ್ಲೆಯಲ್ಲಿಯೇ ಉತ್ಪಾದನೆ ಆಗುತ್ತದೆ. ಹೀಗೆ ರಾಜ್ಯದಲ್ಲಿ ಅತೀ ಹೆಚ್ಚು ಅಡಿಕೆ ಬೆಳೆಯುವ ಆರು ಜಿಲ್ಲೆಗಳಲ್ಲಿ ದಾವಣಗೆರೆ ಕೂಡ ಒಂದು. ಈ ವರ್ಷ ಪ್ರತಿ ಎಕರೆಗೆ 15 ರಿಂದ 18 ಕ್ವಿಂಟಾಲ್ ಅಡಿಕೆ ಇಳುವರಿ ಬಂದಿದೆ. ಮೇಲಾಗಿ ದರವೂ ಸಹ ಚೆನ್ನಾಗಿದ್ದು 41 ರಿಂದ 45 ಸಾವಿರ ರೂಪಾಯಿ ಪ್ರತಿ ಕ್ವಿಂಟಾಲ್ ಅಡಿಕೆಗೆ ಬೆಲೆ ಇದೆ. ಇನ್ನು ಇಲ್ಲಿನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇರಬಹುದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಇರಬಹುದು. ಇವರೆಲ್ಲ ಅಡಿಕೆ ತೋಟದ ಮಾಲೀಕರೇ. ಇತ್ತೀಚಿಗೆ ಶಾಸಕ ಮಾಡಾಳ್ ಭ್ರಷ್ಟಾಚಾರ ಪ್ರಕರಣದ ವೇಳೆ ಅಡಿಕೆ ತೋಟ ಇದ್ದವರ ಮನೆಯಲ್ಲಿ ಕೋಟಿ ಕೋಟಿ ಹಣ ಇರುತ್ತವೆ ಎಂದಿದ್ದರು.

ಇದನ್ನೂ ಓದಿ:ಯಾದಗಿರಿ: ಬರದ ನಾಡಲ್ಲಿ ಕಲ್ಲಂಗಂಡಿ ಬೆಳೆದು ಸೈ ಎನಿಸಿಕೊಂಡ ರೈತ; ಹೇಗೆ ಅಂತೀರಾ ಈ ಸ್ಟೋರಿ ನೋಡಿ

ಹತ್ತಾರು ಪರಿಹಾರ ನೀಡಿದ ಕೃಷಿ ವಿಜ್ಞಾನಿಗಳು

ಇದೀಗ ಆದಾಯ ಕೊಡುತ್ತಿರುವ ಅಡಿಕೆ ಮರಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿದ್ದಾವೆ. ಇದಕ್ಕೆ ಕೃಷಿ ವಿಜ್ಞಾನಿಗಳು ಹತ್ತಾರು ಪರಿಹಾರಗಳನ್ನ ಹೇಳಿದ್ದು, ಅಗತ್ಯ ಸಿಂಫರಣಾ ಕ್ರಮಗಳಲ್ಲಿ ಕಾಫರ್​ ಆಕ್ಸಿ ಕ್ಲೋರೈಡ್​ಹೇಳುವ ಶೀಲಿಂಧ್ರ ನಾಶಕವನ್ನ 3 ಲೀಟರ್​ ನೀರಿನ ಜೊತೆ ಬ್ಯಾಕ್ಟಿರೀಯಾ ನಾಶಕವನ್ನ ಬೇರೆಸಿ ಎಲೆಗಳ ಮೇಲೆ ಮತ್ತು ಕೆಳಭಾಗಕ್ಕೆ ಸಿಂಪಡನೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಇನ್ನು ಅಡಿಕೆ ಆಹಾರ ಪದಾರ್ಥವಲ್ಲ. ಗುಟಕಾ ಕಂಪನಿಗಳಿಗೆ ಶೇಖಡಾ 90 ರಷ್ಟು ಅಡಿಕೆ ಹೋಗುತ್ತದೆ, ಬಳಿಕ ಅಲ್ಪ ಪ್ರಮಾಣದಲ್ಲಿ ಪೂಜೆ, ತಿನ್ನಲು ಹೋಗುವುದು. ಇಂತಹ ಪರಿಸ್ಥಿತಿಯಲ್ಲಿ ಅಡಿಕೆ ರೋಗ ರೈತನ ನೆಮ್ಮದಿ ಹಾಳು ಮಾಡಿದೆ.

ವರದಿ: ಬಸವರಾಜ್ ದೊಡ್ಮನಿ ಟಿವಿ9 ದಾವಣಗೆರೆ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:42 am, Mon, 27 March 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ