AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಗುರುಗಳನ್ನು ನಿಂದಿಸಿ ಅವಮಾನಿಸಿದ್ದ ಪ್ರಕರಣ; ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿ

ಡಿಸೆಂಬರ್ 3 ರಂದು ಕೆಲ ವಿದ್ಯಾರ್ಥಿಗಳು ಸೇರಿ ತರಗತಿ ಕೊಠಡಿಯಲ್ಲೇ ಶಿಕ್ಷಕ ಪ್ರಕಾಶ್ ಎಂಬುವವರಿಗೆ ಕೀಟಲೆ ಮಾಡಿದ್ದರು. ಗುರುಗಳನ್ನು ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ದಾವಣಗೆರೆಯಲ್ಲಿ ಗುರುಗಳನ್ನು ನಿಂದಿಸಿ ಅವಮಾನಿಸಿದ್ದ ಪ್ರಕರಣ; ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿ
ವಿದ್ಯಾರ್ಥಿ ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದನು
TV9 Web
| Edited By: |

Updated on:Dec 11, 2021 | 11:30 AM

Share

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರೊಬ್ಬರ ಮೇಲೆ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಪುಂಡಾಟ ಮೆರೆದಿದ್ದರು. ವಿದ್ಯಾರ್ಥಿಗಳು ಶಿಕ್ಷಕನ ಮೇಲೆ ಹಲ್ಲೆ ನಡೆಸಿ, ಕಿರಿಕಿರಿ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿ ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾನೆ. ಗ್ರಾಮಸ್ಥರು ಸೇರಿ ವಿದ್ಯಾರ್ಥಿಯಿಂದ ಶಿಕ್ಷಕರಿಗೆ ಕ್ಷಮೆ ಕೇಳಿಸಿದ್ದಾರೆ.

ಡಿಸೆಂಬರ್ 3 ರಂದು ಕೆಲ ವಿದ್ಯಾರ್ಥಿಗಳು ಸೇರಿ ತರಗತಿ ಕೊಠಡಿಯಲ್ಲೇ ಶಿಕ್ಷಕ ಪ್ರಕಾಶ್ ಎಂಬುವವರಿಗೆ ಕೀಟಲೆ ಮಾಡಿದ್ದರು. ಗುರುಗಳನ್ನು ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೂ ಶಿಕ್ಷಕರು ಸಹನೆ, ತಾಳ್ಮೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಿನ್ನೆಲೆ ಯಾರಿಗೂ ವಿಷಯ ತಿಳಿಸಿರಿಲಿಲ್ಲ. ವಿಡಿಯೋ ನೋಡಿದ ಜನರು ಘಟನೆಯನ್ನು ಖಂಡಿಸಿದ್ದರು. ಈ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ವಿದ್ಯಾರ್ಥಿಗಳನ್ನ ಶಾಲೆಯಿಂದ ಅಮಾನತು ಮಾಡಬೇಕೆಂದು ಕೆಲವರು ಆಗ್ರಹಿಸಿದ್ದರು.

ಶಿಕ್ಷಕನಿಗೆ ಎದೆ ನೋವು ಹಲ್ಲೆಗೊಳಗಾದ ಸ್ವಲ್ಪ ಹೊತ್ತಿನಲ್ಲಿ ಶಿಕ್ಷಕನಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಶಾಲೆಗೆ ಬಂದ ಶಿಕ್ಷಕ ಕೆಲ ಹೊತ್ತಿನ ನಂತರ ಆಸ್ಪತ್ರೆಗೆ ತೆರಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡಲು ಸಂಬಂಧಿಕರು ಹಿಂಜರಿದಿದ್ದರು. ಮಕ್ಕಳಿಂದ ಕಿರಿಕಿರಿ ಅನುಭವಿಸಿದ ಶಿಕ್ಷಕನಿಗೆ ನಿವೃತ್ತಿಗೆ ಒಂದು ವರ್ಷ ಮಾತ್ರ ಬಾಕಿ ಇದೆ ಎಂದು ತಿಳಿದು ಬಂದಿದೆ. ಮೇಲಾಗಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ತಿಳಿದುಬಂದಿದೆ.

ಹತ್ತನೇ ತರಗತಿಯ ಸಿ ಕ್ಲಾಸ್​ನ ನಾಲ್ವರು ವಿದ್ಯಾರ್ಥಿಗಳಿಂದ ಕೃತ್ಯ ಎಸಗಿತ್ತು. ಓರ್ವ ವಿದ್ಯಾರ್ಥಿ ಮೊಬೈಲ್​ನಲ್ಲಿ ಈ ವಿಡಿಯೋ ರೆಕಾರ್ಡ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದ. 59 ವರ್ಷದ ಪ್ರಕಾಶ ಬೋಗಿ ಎಂಬ ಹಿಂದಿ ಶಿಕ್ಷಕನ ಮೇಲೆ ಹಲ್ಲೆ ಮಾಡಿ ವಿದ್ಯಾರ್ಥಿಗಳು ಅವಮಾನ ಮಾಡಿದ್ದರು. ನಿವೃತ್ತಿಗೆ ಒಂದು ವರ್ಷ ಬಾಕಿ ಇರುವಾಗಲೇ ಈ ಘಟನೆ ನಡೆದಿದೆ.

ಇದನ್ನೂ ಓದಿ

Mountain Day 2021 :ನಿಮ್ಮ ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯಲು ಈ ಸ್ಥಳಗಳಿಗೆ ಭೇಟಿ ನೀಡಿ

ಕೊರೊನಾ ಸ್ಫೋಟ: ಚಿಕ್ಕಮಗಳೂರು ಶಾಲೆ ಸೀಲ್ ಡೌನ್, ಈ ಕಡೆ ಬೆಂಗಳೂರು ಕಾನ್ವೆಂಟ್​ ಮಕ್ಕಳು 4 ದಿನ ಹೈದರಾಬಾದ್ ಪ್ರವಾಸಕ್ಕೆ!

Published On - 11:29 am, Sat, 11 December 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ