AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಶಿಕ್ಷಕ ಪ್ರಕಾಶ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳ ವಿರುದ್ಧ ಪೊಲೀಸರಿಗೆ ದೂರು ನಿಡಲು ಶಿಕ್ಷಕ ಪ್ರಕಾಶ್ ಒಪ್ಪಿರಲಿಲ್ಲ. ತಮ್ಮನ್ನು ಅವಮಾನಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸಿ, ಪ್ರತಿದಿನ ತರಗತಿಗೆ ಹಾಜರಾಗುವಂತೆ ಸೂಚಿಸಿದ್ದರು

ದಾವಣಗೆರೆ: ಶಿಕ್ಷಕ ಪ್ರಕಾಶ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳನ್ನು ಕ್ಷಮಿಸಿದ ನಲ್ಲೂರು ಶಾಲೆಯ ಹಿಂದಿ ಶಿಕ್ಷಕ
TV9 Web
| Edited By: |

Updated on: Dec 15, 2021 | 5:18 PM

Share

ದಾವಣಗೆರೆ: ಗುರುಗಳನ್ನು ನಿಂದಿಸಿ, ಕೆಟ್ಟ ನಡವಳಿಕೆಯಿಂದ ಅವಮಾನಿಸಿದ್ದ ವಿದ್ಯಾರ್ಥಿಗಳು ಅದೇ ಗುರುಗಳ ಕರುಣೆಯ ಮಮತೆಯನ್ನು ಅನುಭವಿಸಿ ಶಾಲೆಗೆ ಹಿಂದಿರುಗಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ. ತಾವು ನಿಂದಿಸಿ ಅವಮಾನಿಸಿದ್ದ ಶಿಕ್ಷಕ ಪ್ರಕಾಶ್ ಅವರ​​​ ಕಾಲಿಗೆ ಬಿದ್ದು ವಿದ್ಯಾರ್ಥಿಗಳು ಕ್ಷಮೆ ಕೇಳಿದ್ದಾರೆ. ನಲ್ಲೂರು ಸರ್ಕಾರಿ ಫ್ರೌಡಶಾಲೆಯಲ್ಲಿ ಡಿ.3ರಂದು ಈ ಪ್ರಕರಣ ನಡೆದಿತ್ತು. ತರಗತಿಯಲ್ಲಿ ಗುಟ್ಕಾ ಜಗಿಯಬೇಡಿ ಎಂದು ಬುದ್ಧಿ ಹೇಳಿದ್ದ ಶಿಕ್ಷಕ ಪ್ರಕಾಶ್ ಅವರ​​ ತಲೆಯ ಮೇಲೆ ಕಸದ ಬುಟ್ಟಿ ಬೋರಲು ಹಾಕಿ ಅವಮಾನಿಸಿದ್ದರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ವಿದ್ಯಾರ್ಥಿಗಳ ವಿರುದ್ಧ ಪೊಲೀಸರಿಗೆ ದೂರು ನಿಡಲು ಶಿಕ್ಷಕ ಪ್ರಕಾಶ್ ಒಪ್ಪಿರಲಿಲ್ಲ. ತಮ್ಮನ್ನು ಅವಮಾನಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸಿ, ಪ್ರತಿದಿನ ತರಗತಿಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ವಿದ್ಯಾರ್ಥಿಗಳ ವರ್ತನೆಯಿಂದ ಸಿಟ್ಟಿಗೆದ್ದಿದ್ದ ಗ್ರಾಮಸ್ಥರು ಮತ್ತು ಪೋಷಕರು ಮಕ್ಕಳನ್ನು ಕರೆತಂದು ಕ್ಷಮೆ ಕೇಳಿಸಿದ್ದರು. ಶಿಕ್ಷಕರ ಕಾಲಿಗೆ ನಮಸ್ಕರಿಸಿ, ತಮ್ಮನ್ನು ಕ್ಷಮಿಸುವಂತೆ ಈ ವಿದ್ಯಾರ್ಥಿಗಳು ಕೇಳಿದ್ದರು.

ಶಿಕ್ಷಕರು ದೂರು ನೀಡದಿದ್ದರೂ ಘಟನೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಮಕ್ಕಳು ಮಾಡಿರುವ ತಪ್ಪನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು ತಕ್ಕ ಪಾಠ ಕಲಿಸಬೇಕು. ಅದರೆ ಅವರ ವಿದ್ಯಾಭ್ಯಾಸಕ್ಕೆ, ಭವಿಷ್ಯಕ್ಕೆ ತೊಂದರೆಯಾಗಬಾರದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲಹೆ ನೀಡಿದ್ದರು. ಆದರೆ ಸ್ವತಃ ಈ ಮಕ್ಕಳ ಪೋಷಕರೇ ತಮ್ಮ ಮಕ್ಕಳ ಕಿವಿಹಿಂಡಿ, ಶಾಲೆಗೆ ಕರೆತಂದು ಶಿಕ್ಷಕರ ಕಾಲಿನ ಮೇಲೆ ಕೆಡವಿದ್ದರು.

ಹಾವೇರಿ ಜಿಲ್ಲೆಯಿಂದ ವರ್ಗಾವಣೆಗೊಂಡು ನಲ್ಲೂರು ಶಾಲೆಗೆ ಬಂದಿದ್ದ ಶಿಕ್ಷಕ ಪ್ರಕಾಶ್​ ಅವರು ಗುಟ್ಕಾ ಜಗಿಯುವ ವಿದ್ಯಾರ್ಥಿಗಳಿಗೆ ಛೀಮಾರಿ ಹಾಕಿದ್ದರು. ಶಿಕ್ಷಕರ ಮಾತನ್ನು ಲೇವಡಿ ಮಾಡಿದ್ದ ವಿದ್ಯಾರ್ಥಿಗಳು, ಅವರನ್ನು ಡಸ್ಟ್​ಬಿನ್​ನಿಂದ ಹೊಡೆಯಲು ಯತ್ನಿಸಿ, ತಲೆಯ ಮೇಲೆ ಡಸ್ಟ್​ಬಿನ್ ಬಾರಲು ಹಾಕಿ ಅನುಚಿತವಾಗಿ ವರ್ತಿಸಿದ್ದರು.

ಇದನ್ನೂ ಓದಿ: ದಾವಣಗೆರೆಯ ನವೋದಯ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು, 4 ಕೊಠಡಿಗಳು ಸೀಲ್‌ಡೌನ್ ಇದನ್ನೂ ಓದಿ: ದಾವಣಗೆರೆಯಲ್ಲಿ ಗುರುಗಳನ್ನು ನಿಂದಿಸಿ ಅವಮಾನಿಸಿದ್ದ ಪ್ರಕರಣ; ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ