AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಪ್ಪು ಬಣ್ಣಕ್ಕೆ ತಿರುಗಿದ ಸೂಳೆಕೆರೆ ನೀರು?; ಸಂತೇಬೆನ್ನೂರು ಗ್ರಾಮಸ್ಥರ ಆಕ್ರೋಶ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಗ್ರಾಮಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಬಿಡಲಾಗುತ್ತಿದೆ. ಈ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸಂತೆಬೆನ್ನೂರು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ಕಪ್ಪು ಬಣ್ಣಕ್ಕೆ ತಿರುಗಿದ ಸೂಳೆಕೆರೆ ನೀರು?; ಸಂತೇಬೆನ್ನೂರು ಗ್ರಾಮಸ್ಥರ ಆಕ್ರೋಶ
ಕಪ್ಪು ಬಣ್ಣಕ್ಕೆ ತಿರುಗಿದ ನೀರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on: Jan 05, 2024 | 11:13 AM

Share

ದಾವಣಗೆರೆ, ಜನವರಿ 05: ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಸಂತೆಬೆನ್ನೂರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಗ್ರಾಮಕ್ಕೆ ಸೂಳೆಕೆರೆಯಿಂದ (Sulekere) ಕುಡಿಯುವ ನೀರು ಬಿಡಲಾಗುತ್ತಿದೆ. ಈ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸಂತೆಬೆನ್ನೂರು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣಕ್ಕೆ ಕುಡಿಯುವ ನೀರಿನ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿದ್ದಾರೆ.

ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ

ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ, ಗೃಹಬಳಕೆಗೆ ಮಾತ್ರ ಬಳಸಿ ಎಂದು 2023ರ ಅಕ್ಟೋಬರ್​ 23 ರಂದು ಚನ್ನಗಿರಿ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಮನವಿ ಮಾಡಿದ್ದರು.

ಕಲುಷಿತ ನೀರು ಸೇವಿಸಿ ಸಾವು

2023 ಅಗಸ್ಟ್​​ನಲ್ಲಿ ಕೋಟೆನಾಡು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಸಾವಿಗೀಡಾಗಿದ್ದು, 200 ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಈ ದುರಂತ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಅವಘಡಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಏಷ್ಯಾದ ಎರಡನೇ ಅತಿ ದೊಡ್ಡ ಸೂಳೆಕೆರೆ ನೀರು ಕಾರಣವಾಯಿತಾ ಎಂಬ ಅನುಮಾನ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕವಾಡಿಗರಹಟ್ಟಿಯ 5 ಜನರ ಸಾವಿಗೆ ಸೂಳೆಕೆರೆಯ ಪಂಪ್​ ಹೌಸ್​ನ ಕೆಟ್ಟುನಿಂತ ಫಿಲ್ಟರ್​​ಗಳು ಕಾರಣ ?

ಹೀಗಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವೈದ್ಯರು ನೀರನ್ನು ಪರೀಕ್ಷಿಸಿ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಬರಗಾಲ ಆವರಿಸಿದ್ದರಿಂದ ನೀರಿಗೆ ಹಾಹಾಕಾರ ಶರುವಾಗಿದೆ. ಈ ಸಂಬಂಧ ಪುರಸಭೆ ಮತ್ತೆ ನೀರು ಪೂರೈಕೆ ಮಾಡುತ್ತಿದೆ. ಆದರೆ ಈಗ ಈ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?