ದಾವಣಗೆರೆ: ಕಪ್ಪು ಬಣ್ಣಕ್ಕೆ ತಿರುಗಿದ ಸೂಳೆಕೆರೆ ನೀರು?; ಸಂತೇಬೆನ್ನೂರು ಗ್ರಾಮಸ್ಥರ ಆಕ್ರೋಶ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಗ್ರಾಮಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಬಿಡಲಾಗುತ್ತಿದೆ. ಈ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸಂತೆಬೆನ್ನೂರು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ಕಪ್ಪು ಬಣ್ಣಕ್ಕೆ ತಿರುಗಿದ ಸೂಳೆಕೆರೆ ನೀರು?; ಸಂತೇಬೆನ್ನೂರು ಗ್ರಾಮಸ್ಥರ ಆಕ್ರೋಶ
ಕಪ್ಪು ಬಣ್ಣಕ್ಕೆ ತಿರುಗಿದ ನೀರು
Follow us
| Updated By: ವಿವೇಕ ಬಿರಾದಾರ

Updated on: Jan 05, 2024 | 11:13 AM

ದಾವಣಗೆರೆ, ಜನವರಿ 05: ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಸಂತೆಬೆನ್ನೂರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಗ್ರಾಮಕ್ಕೆ ಸೂಳೆಕೆರೆಯಿಂದ (Sulekere) ಕುಡಿಯುವ ನೀರು ಬಿಡಲಾಗುತ್ತಿದೆ. ಈ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸಂತೆಬೆನ್ನೂರು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣಕ್ಕೆ ಕುಡಿಯುವ ನೀರಿನ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿದ್ದಾರೆ.

ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ

ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ, ಗೃಹಬಳಕೆಗೆ ಮಾತ್ರ ಬಳಸಿ ಎಂದು 2023ರ ಅಕ್ಟೋಬರ್​ 23 ರಂದು ಚನ್ನಗಿರಿ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಮನವಿ ಮಾಡಿದ್ದರು.

ಕಲುಷಿತ ನೀರು ಸೇವಿಸಿ ಸಾವು

2023 ಅಗಸ್ಟ್​​ನಲ್ಲಿ ಕೋಟೆನಾಡು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಸಾವಿಗೀಡಾಗಿದ್ದು, 200 ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಈ ದುರಂತ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಅವಘಡಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಏಷ್ಯಾದ ಎರಡನೇ ಅತಿ ದೊಡ್ಡ ಸೂಳೆಕೆರೆ ನೀರು ಕಾರಣವಾಯಿತಾ ಎಂಬ ಅನುಮಾನ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕವಾಡಿಗರಹಟ್ಟಿಯ 5 ಜನರ ಸಾವಿಗೆ ಸೂಳೆಕೆರೆಯ ಪಂಪ್​ ಹೌಸ್​ನ ಕೆಟ್ಟುನಿಂತ ಫಿಲ್ಟರ್​​ಗಳು ಕಾರಣ ?

ಹೀಗಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವೈದ್ಯರು ನೀರನ್ನು ಪರೀಕ್ಷಿಸಿ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಬರಗಾಲ ಆವರಿಸಿದ್ದರಿಂದ ನೀರಿಗೆ ಹಾಹಾಕಾರ ಶರುವಾಗಿದೆ. ಈ ಸಂಬಂಧ ಪುರಸಭೆ ಮತ್ತೆ ನೀರು ಪೂರೈಕೆ ಮಾಡುತ್ತಿದೆ. ಆದರೆ ಈಗ ಈ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ