AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಜೋಡಿ ಮದುವೆಯಾಗಿ ಹತ್ತು ವರುಷವಾಗಿತ್ತು, ಆದರೆ ಹರುಷವಿರಲಿಲ್ಲ, ಕೊನೆಗೂ ಪತಿ ನಿಗೂಢ ಸಾವು

ಕೋಟೆನಾಡು ಚಿತ್ರದುರ್ಗ ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿವಕುಮಾರನ ಶವ ಪತ್ತೆ ಆಗಿದೆ. ಆದ್ರೆ, ಕಾಲುಗಳು ಪೂರ್ಣ ನೆಲಕ್ಕೆ ತಾಗಿದ್ದು ಮೃತನ ಕುಟುಂಬಸ್ಥರಲ್ಲಿ ಅನುಮಾನ ಹುಟ್ಟಿಸಿದೆ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ರು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಿದೆ.

ಆ ಜೋಡಿ ಮದುವೆಯಾಗಿ ಹತ್ತು ವರುಷವಾಗಿತ್ತು, ಆದರೆ ಹರುಷವಿರಲಿಲ್ಲ, ಕೊನೆಗೂ ಪತಿ ನಿಗೂಢ ಸಾವು
ಆ ಜೋಡಿ ಮದುವೆಯಾಗಿ ಹತ್ತು ವರುಷವಾಗಿತ್ತು, ಆದರೆ ಪತಿ ನಿಗೂಢ ಸಾವು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 22, 2024 | 10:27 AM

Share

ಆ ಜೋಡಿ ( couple) ಮದುವೆಯಾಗಿ ಒಂದು ಹತ್ತು ವರುಷಗಳೇ ಉರುಳಿವೆ. ಇಬ್ಬರು ಮಕ್ಕಳೂ ಜತೆಯಾಗಿದ್ದರು. ಆದ್ರೆ, ಕೌಟುಂಬಿಕ ಕಲಹ ಮಾತ್ರ ಸ್ತಬ್ಧಗೊಂಡಿರಲಿಲ್ಲ (happiness). ಕೊನೆಗೂ ಪತಿ ನಿಗೂಢ ಸಾವಿಗೀಡಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ವರದಿ ಇಲ್ಲಿದೆ. ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು. ನೆಲಕ್ಕೆ ಅರ್ಧ ಕಾಲು ತಾಗಿದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂಬ ಅನುಮಾನ ಮೂಡಿಸಿದೆ. ಪತ್ನಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಹೌದು, ಚಿತ್ರದುರ್ಗ (Chitradurga) ತಾಲೂಕಿನ ಸಿಂಗಾಪುರ ಗ್ರಾಮದ ಶಿವಕುಮಾರ್ ಸ್ವಗ್ರಾಮದ ಸಂಬಂಧಿ ಲಕ್ಷ್ಮೀಯನ್ನೇ ಮದುವೆ ಆಗಿದ್ದನು. ಆದ್ರೆ, ಕೂಲಿನಾಲಿ ಕೆಲಸ ಮಾಡಿದ್ದೆಲ್ಲವೂ ಕುಡಿತಕ್ಕೆ ಖರ್ಚು ಮಾಡುತ್ತಿದ್ದನು. ಹೀಗಾಗಿ, ಲಕ್ಷ್ಮೀ ಮತ್ತು ಶಿವಕುಮಾರ್ ನಡುವೆ ಆಗಾಗ ಗಲಾಟೆ ನಡೆಯುತ್ತಲೇ ಇತ್ತು. 7 ವರ್ಷದ ಪುತ್ರಿ ಗಗನಾ, 5 ವರ್ಷದ ಪುತ್ರ ಪವನ್ ಜತೆಯಾಗಿದ್ದರಾದ್ರೂ ಗಂಡ ಹೆಂಡತಿ ಗಲಾಟೆ ಮಾತ್ರ ನಿಂತಿರಲಿಲ್ಲ.

ಆದ್ರೆ, ಇಂದು ಬೆಳಗಿನ ಜಾವದ ವೇಳೆಗೆ ಶಿವಕುಮಾರ್ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ ಆಗಿದ್ದಾನೆ. ಕಾಲುಗಳು ನೆಲಕ್ಕೆ ತಾಗಿದ್ದು ಶಿವಕುಮಾರ್ ಕುಟುಂಬಸ್ಥರಲ್ಲಿ ಅನುಮಾನ ಮೂಡಿಸಿದೆ. ಪತ್ನಿ ಲಕ್ಷ್ಮಿಯ ತಂದೆ ಮತ್ತು ಸಹೋದರರು ಸೇರಿ ಹೊಡೆದು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ.

Also Read: ಇಂಜಿನಿಯರ್ ಗಂಡನಿಗೆ ಅಂಟಿಕೊಂಡಿತ್ತು ಐಪಿಎಲ್ ಬೆಟ್ಟಿಂಗ್ ಭೂತ: 54 ಲಕ್ಷ ರೂ ಸಾಲ, ನೊಂದ ಹೆಂಡತಿ ನೇಣಿಗೆ ಶರಣು

ಇನ್ನು ಪತ್ನಿ ಲಕ್ಷ್ಮೀ ಸೇರಿದಂತೆ ಕುಟುಂಬಸ್ಥರೆಲ್ಲರೂ ಸಹ ಶಿವಕುಮಾರ್ ಸಾವಿನ ಸುದ್ದಿ ಸೇರಿ ಮನೆ ಬಳಿ ಜಮಾಯಿಸಿದ್ದರು. ಅಲ್ಲದೆ ಕಂಬನಿ ಮಿಡಿದು ಸಂಕಟ ತೋಡಿಕೊಳ್ಳುತ್ತಿದ್ದರು. ಮೃತ ಶಿವಕುಮಾರ್ ಕುಟುಂಬಸ್ಥರ ಆರೋಪ ನಿರಾಧಾರ ಮತ್ತು ಅಪ್ಪಟ ಸುಳ್ಳು ಎಂದು ಲಕ್ಷ್ಮೀ ತಂದೆ ಈಶ್ವರಪ್ಪ ಹೇಳಿದ್ದಾರೆ. ಅಲ್ಲದೆ ನನ್ನ ಮಗಳೇ ದುಡಿದು ಇಷ್ಟುವರ್ಷ ಬದುಕು ಕಟ್ಟಿಕೊಂಡಿದ್ದಳು.

Also Read: ಸ್ನೇಹಿತನ ಪತ್ನಿಯನ್ನೇ ಪಟಾಯಿಸಿ ಬಾಳು ಕೊಟ್ಟಿದ್ದ! ಇದೀಗ ದೋಖಾ, ಬೀದಿಗೆ ಬಂದ ಮಹಿಳೆಯಿಂದ ತಮಟೆ ಹೊಡೆದು ಧರಣಿ

ಶಿವಕುಮಾರ್ ಕುಡಿದು ಬಂದು ಗಲಾಟೆ ಮಾಡುವುದು, ಹೊಡೆಯುವುದು ಬಡಿಯುವುದು ಮಾಡುವ ಕಾರಣಕ್ಕೆ ನಾವೇ ಮನೆಗೆ ಕರೆದುಕೊಂಡು ಹೋಗುತ್ತಿದ್ದೆವು. ಶಿವಕುಮಾರ್ ಗೆ ಹೊಡೆದು ಸಾಯಿಸುವಂಥ ಕೆಲಸ ನಾವು ಮಾಡಿಲ್ಲ ಎಂದು ಹೇಳಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?