Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere News: ವಿವಾಹಿತೆಯೊಂದಿಗೆ ಪತಿ ನಾಪತ್ತೆ ಶಂಕೆ, ದೂರು ನೀಡಿದ ಪತ್ನಿ: ಮೌನಕ್ಕೆ ಶರಣಾದ ಪೋಲಿಸ್​​

ನಾಲ್ಕು ಮಕ್ಕಳು ಹಾಗೂ ಪತ್ನಿಯನ್ನ ಬಿಟ್ಟು ಪತಿ ನಾಪತ್ತೆ ಆಗಿರುವಂತಹ ಘಟನೆ ದಾವಣಗೆರೆಯ ಭಗರತ್ ಸಿಂಗ್ ನಗರದಲ್ಲಿ ನಡೆದಿದೆ. ಈ ಕುರಿತಾಗಿ ಪತ್ನಿ ದೂರು ನೀಡಿದ್ದು, ಆದರೆ ಕೇಸ್ ದಾಖಲಿಸಿಕೊಂಡಿರುವ ಕೆಟಿಜೆ ನಗರ ಪೊಲೀಸರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

Davanagere News: ವಿವಾಹಿತೆಯೊಂದಿಗೆ ಪತಿ ನಾಪತ್ತೆ ಶಂಕೆ, ದೂರು ನೀಡಿದ ಪತ್ನಿ: ಮೌನಕ್ಕೆ ಶರಣಾದ ಪೋಲಿಸ್​​
ನಾಪತ್ತೆಯಾದ ಪತಿ ಶಫೀ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 21, 2023 | 3:08 PM

ದಾವಣಗೆರೆ, ಜುಲೈ 21: ನಾಲ್ಕು ಮಕ್ಕಳು ಹಾಗೂ ಪತ್ನಿಯನ್ನ ಬಿಟ್ಟು ವಿವಾಹಿತೆಯೊಬ್ಬಳ ಜೊತೆ ಪತಿ (husband) ನಾಪತ್ತೆ ಆಗಿರುವಂತಹ ಶಂಕೆ ವ್ಯಕ್ತಪಡಿಸಲಾಗಿದೆ. ಜಿಲ್ಲೆಯ ಭಗರತ್ ಸಿಂಗ್ ನಗರದಲ್ಲಿ ಘಟನೆ ನಡೆದಿದ್ದು, ಶಫೀ (40) ನಾಪತ್ತೆಯಾದ ಪತಿ‌. ಪತ್ನಿ ಫಾತೀಮಾ ಭಾನುಳಿಂದ ಕೆಟಿಜೆ ನಗರ ಪೊಲೀಸ್ ಠಾಣೆಗೆ ಈ ಕುರಿತಾಗಿ ದೂರು ನೀಡಲಾಗಿದೆ.

ಸಣ್ಣ ವಯಸ್ಸಿನ ಮೂರು ಗಂಡು ಹಾಗೂ ಒಂದು ಹೆಣ್ಣು ಮಗುವಿನೊಂದಿಗೆ ಫಾತೀಮಾ ಭಾನು ದಿನ‌ಕಳೆಯುತ್ತಿದ್ದು, ಮನೆ ಬಾಡಿಗೆ ಹಾಗೂ ರೇಷನ್​ಗಾಗಿ ಪರದಾಡುವಂತಾಗಿದೆ. ನಾಪತ್ತೆಯಾದ ಪತಿಯನ್ನ ಹುಡುಕಿಕೊಡಿ ಎಂದು ಪತ್ನಿ ವಿನಂತಿ ಮಾಡಿದ್ದಾಳೆ.

ಇದನ್ನೂ ಓದಿ: ಪ್ರೀತಿಸಿ, ಗರ್ಭಿಣಿಯಾಗಿಸಿ ಕೈಕೊಟ್ಟ ಮಹಾಶಯ: ವರನಿಗೆ ಥಳಿಸಿ ಶಿಡ್ಲಘಟ್ಟದ ಪ್ರವಾಸಿ ಮಂದಿರದಲ್ಲಿ ಸಿನಿಮೀಯ ರೀತಿಯಲ್ಲಿ ಮದುವೆ!

ಚಿನ್ನ ಕಳ್ಳತನ ದಂಧೆ

ನಾಪತ್ತೆಯಾದ ಪತಿ ಶಫೀ ಹಾಗೂ ಅವರ ಸಂಬಂಧಿಕರು ಸೇರಿ ಅಂಗಡಿಗಳಿಗೆ ತೆರಳಿ ಚಿನ್ನ ಕಳ್ಳನ ದಂಧೆ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಇಂತಹ ಕೆಲಸ ತಾನು‌ ನಿರಾಕರಿಸಿದ್ದರಿಂದ ಪತಿಯಿಂದ ಹಿಂಸೆ ಹಾಗೂ ನನ್ನನ್ನು ಬಿಟ್ಟು ಬಿಡುವಂತೆ ಬೇದರಿಕೆ ಹಾಕುತ್ತಿದ್ದ ಎಂದು ಪತಿ ವಿರುದ್ಧ ಪತ್ನಿ ಆರೋಪಿಸಿದ್ದಾಳೆ.

ಇದನ್ನೂ ಓದಿ: 16 ತಿಂಗಳ ಮಗುವಿನೊಂದಿಗೆ ನಾಪತ್ತೆಯಾಗಿದ್ದ ತಂದೆ ಯುಪಿಯಲ್ಲಿ ಪತ್ತೆ; ಕೋರ್ಟ್​ನಲ್ಲಿ ಹೋರಾಟ ಮಾಡಿ ಮಗು ಪಡೆದ ತಾಯಿ

ಇಷ್ಟಾದರೂ ಕಳೆದು ಹೋದ ಪತಿಗಾಗಿ ಪತ್ನಿ ಹಗಲು ರಾತ್ರಿ ಹುಡುಕಾಟ ನಡೆಸುತ್ತಿದ್ದಾಳೆ. ಮನೆಗೆ ಮರಳುವಂತೆ ಪತಿಗೆ ವಿನಂತಿ ಮಾಡಿದ್ದಾಳೆ. ಆದರೆ ಕೇಸ್ ದಾಖಲಿಸಿಕೊಂಡಿರುವ ಕೆಟಿಜೆ ನಗರ ಪೊಲೀಸರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Fri, 21 July 23

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?