AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಲುಷಿತ ನೀರು ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಳ, ಜೋಳದಾಳ್​ನಲ್ಲೇ ಬೀಡು ಬಿಟ್ಟ ಆರೋಗ್ಯ ಸಿಬ್ಬಂದಿ

ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜೋಳದಾಳ್​ನಲ್ಲೇ ಬೀಡು ಬಿಟ್ಟಿದ್ದಾರೆ. ವಾಂತಿ ಭೇದಿ ಹಿನ್ನೆಲೆ 52 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 15 ಜನ ಗುಣಮುಖರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.

ದಾವಣಗೆರೆ: ಕಲುಷಿತ ನೀರು ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಳ, ಜೋಳದಾಳ್​ನಲ್ಲೇ ಬೀಡು ಬಿಟ್ಟ ಆರೋಗ್ಯ ಸಿಬ್ಬಂದಿ
ಕಲುಷಿತ ನೀರು ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಳ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 31, 2024 | 10:20 AM

Share

ದಾವಣಗೆರೆ, ಆಗಸ್ಟ್​.31: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ಮತ್ತೆ ವಾಂತಿ ಭೇದಿಯಿಂದ ವಿವಿಧ ಆಸ್ಪತ್ರೆಗಳಿಗೆ ಜನ ದಾಖಲಾಗಿದ್ದಾರೆ. 52 ಮಂದಿ ಚನ್ನಗಿರಿ ಆಸ್ಪತ್ರೆ, ಭದ್ರಾವತಿ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಜೋಳದಾಳ್​ನಲ್ಲೇ ಬೀಡು ಬಿಟ್ಟಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಇಲ್ಲ, ಈಗಾಗಲೇ 15 ಜನ ಗುಣಮುಖರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕಾಲರ ನೆಗೆಟಿವ್ ಬಂದಿದೆ. ಗ್ರಾಮದಲ್ಲಿ ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಸಿಬ್ಬಂದಿ ನೇಮಕ ಮಾಡಿ ಮುಂಜಾಗ್ರತ ಕ್ರಮವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮದ ಪ್ರತಿಯೊಬ್ಬರಿಗೂ ತಪಾಸಣೆ ಮಾಡಲಾಗುತ್ತಿದ್ದಿ ಕಾಯಿಸಿ ಆರಿಸಿದ ನೀರು ಕುಡಿಯುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮಕ್ಕಳ ಜೊತೆ ರೈಲಿನಲ್ಲಿ ಪ್ರಯಾಣ ಮಾಡೋ ಪೋಷಕರೇ ಎಚ್ಚರ! ಒಳ್ಳೆಯವರಂತೆ ಪರಿಚಯವಾಗಿ ಮಗು ಕಿಡ್ನಾಪ್

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮಕ್ಕೆ ಚನ್ನಗಿರಿ ಇಓ ಬಿ.ಕೆ.ಉತ್ತಮ್, ಕುಡಿಯುವ ನೀರು ವಿಭಾಗದ ಎಇಇ ಲೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನ ಮಾದರಿ ಸಂಗ್ರಹ ಮಾಡಲಾಗಿದೆ. ಗ್ರಾಮದಲ್ಲಿ ವೈದ್ಯರ ತಂಡ ಠಿಕಾಣಿ ಹೂಡಿದೆ. ಬುಧವಾರ ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೊದಲು ನಾಲ್ಕು ಜನರರಲ್ಲಿ ವಾಂತಿ ಬೇಧಿ ಕಂಡು ಬಂದಿತ್ತು. ಬಳಿಕ 25 ಜನ, ಇದೀಗ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ