AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಜನಕ್ಕೆ ತಪ್ಪದ ಸಂಕಷ್ಟ; ಮಳೆಗಾಲದ ಮೂರು ತಿಂಗಳು ಜಲ ದಿಗ್ಬಂಧನ

ಅವರೆಲ್ಲರೂ ವರ್ಷದಲ್ಲಿ ಮೂರು ತಿಂಗಳ ಕಾಲ ಐಲ್ಯಾಂಡ್​ನಲ್ಲಿ ಇರುತ್ತಾರೆ. ಪಕ್ಕದ ಜಮೀನಿಗೆ ಹೋಗಿ ಬರುವುದು ಕೂಡ ಕಷ್ಟ. ಇದೊಂದು ಪುಣ್ಯ ಕ್ಷೇತ್ರದ ಜನರ ಸ್ಥಿತಿ. ಮಳೆಗಾಲ ಬಂದ್ರೆ ಸಾಕು ಈ ಗ್ರಾಮದ ಸುತ್ತಲೂ ನೀರು ತುಂಬಿಕೊಳ್ಳುತ್ತದೆ. ಹೊರಗಡೆ ಹೋಗಲು ಹಾಗೂ ಒಳಗಡೆ ಬರಲು ಆಗುವುದಿಲ್ಲ. ಇಲ್ಲಿದೆ ಉಕ್ಕಡಗಾತ್ರಿ ಎಂಬ ಪುಣ್ಯಕ್ಷೇತ್ರದ ಜನಕ್ಕೆ ವರ್ಷದಲ್ಲಿ ಮೂರು ತಿಂಗಳು ಜಲ ಕಂಟಕ ಸ್ಟೋರಿ.

ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಜನಕ್ಕೆ ತಪ್ಪದ ಸಂಕಷ್ಟ; ಮಳೆಗಾಲದ ಮೂರು ತಿಂಗಳು ಜಲ ದಿಗ್ಬಂಧನ
ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಜನಕ್ಕೆ ತಪ್ಪದ ಸಂಕಷ್ಟ; ಮಳೆಗಾಲದ ಮೂರು ತಿಂಗಳು ಜಲ ದಿಗ್ಬಂಧನ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jul 18, 2024 | 10:05 PM

Share

ದಾವಣಗೆರೆ, ಜು.18: ಜಿಲ್ಲೆಯ ಹರಿಹರ ತಾಲೂಕಿನ ಪುಣ್ಯಕ್ಷೇತ್ರ ಉಕ್ಕಡಗಾತ್ರಿ(Ukkadagatri) ಅಜ್ಜಯ್ಯನ ದರ್ಶನಕ್ಕೆ ಹಲವಾರು ವರ್ಷ ಭಕ್ತರು ತೆಪ್ಪದಲ್ಲಿ ಹೋಗುತ್ತಿದ್ದರು. ಈಗ ಸೇತುವೆ ಆಗಿದೆ. ಆದ್ರೆ, ಮಳೆಗಾಲ ಆರಂಭವಾದರೆ ಸಾಕು ಇಡಿ ಗ್ರಾಮವೇ ದ್ವೀಪ ಆಗುತ್ತದೆ. ಹೊರ ಜಗತ್ತಿನ ಸಂಪರ್ಕ ಕಡಿದುಕೊಳ್ಳುತ್ತದೆ. ಎಲ್ಲಿ ನೋಡಿದರಲ್ಲಿ ನೀರೇ ಕಂಡು ಬರುತ್ತದೆ. ಇದು ದಾವಣಗೆರೆ ಜಿಲ್ಲೆಯ ಕೊನೆಯ ಹಳ್ಳಿಯಾಗಿದ್ದು, ಹೀಗಾಗಿ ವರ್ಷದಲ್ಲಿ ಮೂರು ತಿಂಗಳ ಕಾಲ ದ್ವೀಪವಾಗುತ್ತದೆ.

ಒಂದು ಕಡೆಯಿಂದ ಪತ್ತೇಪುರ ಸೇತುವೆ, ಇನ್ನೊಂದು ಬದಿಯಿಂದ ತುಮ್ಮಿನಕಟ್ಟೆ ಹಳ್ಳದ ನೀರು ಜೊತೆಗೆ ಮತ್ತೊಂದು ಹಳ್ಳದ ನೀರು ಬಂದು ಗ್ರಾಮವನ್ನ ಸುತ್ತುವರೆಯುತ್ತದೆ. ಇದು ಪರಿಹಾರವೇ ಇಲ್ಲದ ಸಮಸ್ಯೆ ಆಗಿ ಬಿಟ್ಟಿದೆ. ತುಂಗಭದ್ರ ನದಿ ಆಚೆಗಿನ ಗ್ರಾಮಗಳು ದಾವಣಗೆರೆ ಜಿಲ್ಲೆಗೆ ಸೇರಿವೆ. ಈ ಕಡೆ ಇರುವ ಗ್ರಾಮಗಳು ಹಾವೇರಿ ಜಿಲ್ಲೆಗೆ ಸೇರಿವೆ. ಆದ್ರೆ, ಉಕ್ಕಡಗಾತ್ರಿ ಒಂದು ಗ್ರಾಮ ಮಾತ್ರ ದಾವಣಗೆರೆ ಜಿಲ್ಲೆಗೆ ಸೇರಿದೆ. ಸುತ್ತಲು ಹಾವೇರಿ ಜಿಲ್ಲೆಯ ಹಳ್ಳಿಗಳೇ ಇರುವುದರಿಂದ ಎನೋ ದಾವಣಗೆರೆ ಜಿಲ್ಲಾಡಳಿತ ಮಾತ್ರ ಇಡಿ ಗ್ರಾಮವನ್ನ ಮರೆತು ಬಿಟ್ಟಿದೆ. ಈ ಹಿಂದೆ ಎರಡು ವಿಧಾನ ಸಭೆ ಚುನಾವಣೆ ವೇಳೆ ಮತದಾನ ಬಹಿಷ್ಕಾರ ಸಹ ಮಾಡಲಾಗಿತ್ತು. ಆದ್ರೆ ಪರಿಹಾರ ಮಾತ್ರ ಸಿಕ್ಕಿಲ್ಲ.

ಇದನ್ನೂ ಓದಿ:ಕೊಡಗು: ಮಳೆ ಆರ್ಭಟಕ್ಕೆ ಜಲ ದಿಗ್ಬಂಧನವಾದ ಕುಟುಂಬ; ಅಸಹಾಯಕರಾಗಿ ನಿಂತಿರೋ ದಂಪತಿ

ಇನ್ನು ಇಲ್ಲಿನ ಜನ ಜಲ ದಿಗ್ಬಂಧನದಿಂದ ತಪ್ಪಿಸಿಕೊಳ್ಳಬೇಕಾದರೆ, ಈಗ ಇರುವ ಎರಡು ಸೇತುವೆಗಳ ಎತ್ತರ ಹೆಚ್ಚಿಸಬೇಕಾಗಿದೆ. ಹೀಗೆ ಸೇತುವೆ ಎತ್ತರ ಹೆಚ್ಚಿಸಿದ್ರೆ ಮಾತ್ರ ಇವರಿಗೆ ವರ್ಷದ ಹನ್ನೇರಡು ತಿಂಗಳು ಸಹ ಯಾವುದೇ ತೊಂದರೆ ಆಗಲ್ಲ. ಆದ್ರೆ, ಈಗ ಮಾತ್ರ ವರ್ಷಕ್ಕೆ ಮೂರು ತಿಂಗಳ ಮಾತ್ರ ಇವರೆಲ್ಲಾ ಜೀವ ಕೈಯಲ್ಲಿ ಹಿಡಿದು ಬದುಕಬೇಕಾಗಿದೆ. ಪುಣ್ಯಕ್ಷೇತ್ರ ದರ್ಶನಕ್ಕೆ ಬರುವ ಜನ ಪ್ರತಿನಿಧಿಗಳು, ಈ ಗ್ರಾಮಸ್ಥರ ಸಂಕಷ್ಟಕ್ಕೆ ಸ್ಪಂಧಿಸುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?