Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ: ನೂರಕ್ಕೂ ಹೆಚ್ಚು ಜನರಿಗೆ ಪತ್ರ ಬರೆದ ಆರೋಪಿಯ ಸುಳಿವು ಸಿಕ್ಕಿದ್ದು ಎಲ್ಲಿ ಗೊತ್ತಾ?

ಶಿವಾಜಿರಾವ್ ಜಾಧವ್ ದಾವಣಗೆರೆ ಜಿಲ್ಲಾ ಹಿಂದು ಜಾಗರಣ ವೇದಿಕೆಯ ಸಹ ಸಂಚಾಲಕನಾಗಿದ್ದಾನೆ. ಶಿವಾಜಿರಾವ್ ಜಾಧವ್ ಓದಿದ್ದು ಎಂಟನೇ ತರಗತಿ ಮಾತ್ರ. ಆರೋಪಿ ಶಿವಾಜಿರಾವ್ ಜಾಧವ ಈಗಾಗಲೇ ನೂರಕ್ಕೂ ಹೆಚ್ಚು ಬೆದರಿಕೆ ಪತ್ರ ಬರೆದು ಪೋಸ್ಟ್​ ಮಾಡಿರುವುದಾಗಿ ಸಿಸಿಬಿ ಪೊಲೀಸರ ಎದರು ಬಾಯಿಬಿಟ್ಟಿದ್ದಾನೆ.

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ: ನೂರಕ್ಕೂ ಹೆಚ್ಚು ಜನರಿಗೆ ಪತ್ರ ಬರೆದ ಆರೋಪಿಯ ಸುಳಿವು ಸಿಕ್ಕಿದ್ದು ಎಲ್ಲಿ ಗೊತ್ತಾ?
ಆರೋಪಿ ಶಿವಾಜಿರಾವ್​
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on: Oct 01, 2023 | 10:06 AM

ದಾವಣಗೆರೆ ಅ.01: ಸಾಹಿತಿಗಳಿಗೆ (Literature) ‌ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಶಿವಾಜಿರಾವ್ ಜಾಧವ ಅನ್ನು ಸಿಸಿಬಿ (CCB) ಪೊಲೀಸರು ಬಂದಿದ್ದು, ಈತ ದಾವಣಗೆರೆ ನಗರದ ಜಾಲಿ‌ನಗರ ಇಡ್ಲೂಎಸ್​ ಕಾಲೋನಿ ನಿವಾಸಿಯಾಗಿದ್ದಾನೆ. ಶಿವಾಜಿರಾವ್ ಜಾಧವ್ ದಾವಣಗೆರೆ ಜಿಲ್ಲಾ ಹಿಂದು ಜಾಗರಣ ವೇದಿಕೆಯ (Hindu Jagarana Vedike) ಸಹ ಸಂಚಾಲಕನಾಗಿದ್ದಾನೆ. ಶಿವಾಜಿರಾವ್ ಜಾಧವ್ ಓದಿದ್ದು ಎಂಟನೇ ತರಗತಿ ಮಾತ್ರ. ಆರೋಪಿ ಶಿವಾಜಿರಾವ್ ಜಾಧವ ಈಗಾಗಲೇ ನೂರಕ್ಕೂ ಹೆಚ್ಚು ಬೆದರಿಕೆ ಪತ್ರ ಬರೆದು ಪೋಸ್ಟ್​ ಮಾಡಿರುವುದಾಗಿ ಸಿಸಿಬಿ ಪೊಲೀಸರ ಎದರು ಬಾಯಿಬಿಟ್ಟಿದ್ದಾನೆ.

ಅಲ್ಲದೆ ಈತನಿಗೆ ಹಲವರು ಸಾಥ್​​ ನೀಡಿರುವ ಸಾಧ್ಯತೆ ಇದೆ ಎಂದು ಸಿಸಿಬಿ ಪೊಲೀಸರು ಶಂಕಿಸಿದ್ದಾರೆ. ಈತ ಪತ್ರ ಬರೆದು ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹತ್ತಾರು ಜಿಲ್ಲೆಗಳಿಗೆ ತೆರಳಿ ಬೇರೆ ಬೇರೆ ಅಂಚೆ ಕಚೇರಿ ಮೂಲಕ ಪೋಸ್ಟ್​​ ​ಮಾಡುತ್ತಿದ್ದನು. ಆದರೆ ಈತನ ಸುಳಿವು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಅಂಚೆ ಕಚೇರಿಯ ಬಳಿ ಸಿಕ್ಕಿದೆ.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಸಿಸಿಬಿ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ಮಾಹಿತಿ

ಆರೋಪಿ ಶಿವಾಜಿರಾವ್​ ವಿರುದ್ಧ ಬೆಂಗಳೂರಿನ ಸಂಜಯನಗರ, ಬಸವೇಶ್ವರನಗರ, ಹಾರೋಹಳ್ಳಿ, ಚಿತ್ರದುರ್ಗ ಹಾಗೂ ಕೊಟ್ಟೂರಿನಲ್ಲಿ ಬೆದರಿಕೆ ದೂರು ದಾಖಲಾಗಿವೆ. ಇತ್ತೀಚಿಗೆ ಸಾಹಿತಿಗಳು ಸಾಹಿತಿಗಳಾದ ಕುಂ ವೀರಭದ್ರಪ್ಪ, ಬಿ.ಎಲ್. ವೇಣು, ಬಂಜೆಗೆರೆ ಜಯಪ್ರಕಾಶ, ಬಿಟಿ ಲಲಿತಾ ನಾಯ್ಕ, ವಸುಂಧರಾ ಭೂಪತಿ ಸೇರಿದಂತೆ ಹಲವರು ತಮಗೆ ಬಂದ ಬೆದರಿಕೆ ಪತ್ರದ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಆರೋಪಿಗಳ ಪತ್ತೆಗೆ ಮನವಿ ಮಾಡಿದ್ದರು. ಸಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹತ್ತು ದಿನ ಕಸ್ಟಡಿಗೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!