AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ: ನೂರಕ್ಕೂ ಹೆಚ್ಚು ಜನರಿಗೆ ಪತ್ರ ಬರೆದ ಆರೋಪಿಯ ಸುಳಿವು ಸಿಕ್ಕಿದ್ದು ಎಲ್ಲಿ ಗೊತ್ತಾ?

ಶಿವಾಜಿರಾವ್ ಜಾಧವ್ ದಾವಣಗೆರೆ ಜಿಲ್ಲಾ ಹಿಂದು ಜಾಗರಣ ವೇದಿಕೆಯ ಸಹ ಸಂಚಾಲಕನಾಗಿದ್ದಾನೆ. ಶಿವಾಜಿರಾವ್ ಜಾಧವ್ ಓದಿದ್ದು ಎಂಟನೇ ತರಗತಿ ಮಾತ್ರ. ಆರೋಪಿ ಶಿವಾಜಿರಾವ್ ಜಾಧವ ಈಗಾಗಲೇ ನೂರಕ್ಕೂ ಹೆಚ್ಚು ಬೆದರಿಕೆ ಪತ್ರ ಬರೆದು ಪೋಸ್ಟ್​ ಮಾಡಿರುವುದಾಗಿ ಸಿಸಿಬಿ ಪೊಲೀಸರ ಎದರು ಬಾಯಿಬಿಟ್ಟಿದ್ದಾನೆ.

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ: ನೂರಕ್ಕೂ ಹೆಚ್ಚು ಜನರಿಗೆ ಪತ್ರ ಬರೆದ ಆರೋಪಿಯ ಸುಳಿವು ಸಿಕ್ಕಿದ್ದು ಎಲ್ಲಿ ಗೊತ್ತಾ?
ಆರೋಪಿ ಶಿವಾಜಿರಾವ್​
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 01, 2023 | 10:06 AM

Share

ದಾವಣಗೆರೆ ಅ.01: ಸಾಹಿತಿಗಳಿಗೆ (Literature) ‌ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಶಿವಾಜಿರಾವ್ ಜಾಧವ ಅನ್ನು ಸಿಸಿಬಿ (CCB) ಪೊಲೀಸರು ಬಂದಿದ್ದು, ಈತ ದಾವಣಗೆರೆ ನಗರದ ಜಾಲಿ‌ನಗರ ಇಡ್ಲೂಎಸ್​ ಕಾಲೋನಿ ನಿವಾಸಿಯಾಗಿದ್ದಾನೆ. ಶಿವಾಜಿರಾವ್ ಜಾಧವ್ ದಾವಣಗೆರೆ ಜಿಲ್ಲಾ ಹಿಂದು ಜಾಗರಣ ವೇದಿಕೆಯ (Hindu Jagarana Vedike) ಸಹ ಸಂಚಾಲಕನಾಗಿದ್ದಾನೆ. ಶಿವಾಜಿರಾವ್ ಜಾಧವ್ ಓದಿದ್ದು ಎಂಟನೇ ತರಗತಿ ಮಾತ್ರ. ಆರೋಪಿ ಶಿವಾಜಿರಾವ್ ಜಾಧವ ಈಗಾಗಲೇ ನೂರಕ್ಕೂ ಹೆಚ್ಚು ಬೆದರಿಕೆ ಪತ್ರ ಬರೆದು ಪೋಸ್ಟ್​ ಮಾಡಿರುವುದಾಗಿ ಸಿಸಿಬಿ ಪೊಲೀಸರ ಎದರು ಬಾಯಿಬಿಟ್ಟಿದ್ದಾನೆ.

ಅಲ್ಲದೆ ಈತನಿಗೆ ಹಲವರು ಸಾಥ್​​ ನೀಡಿರುವ ಸಾಧ್ಯತೆ ಇದೆ ಎಂದು ಸಿಸಿಬಿ ಪೊಲೀಸರು ಶಂಕಿಸಿದ್ದಾರೆ. ಈತ ಪತ್ರ ಬರೆದು ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹತ್ತಾರು ಜಿಲ್ಲೆಗಳಿಗೆ ತೆರಳಿ ಬೇರೆ ಬೇರೆ ಅಂಚೆ ಕಚೇರಿ ಮೂಲಕ ಪೋಸ್ಟ್​​ ​ಮಾಡುತ್ತಿದ್ದನು. ಆದರೆ ಈತನ ಸುಳಿವು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಅಂಚೆ ಕಚೇರಿಯ ಬಳಿ ಸಿಕ್ಕಿದೆ.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಸಿಸಿಬಿ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ಮಾಹಿತಿ

ಆರೋಪಿ ಶಿವಾಜಿರಾವ್​ ವಿರುದ್ಧ ಬೆಂಗಳೂರಿನ ಸಂಜಯನಗರ, ಬಸವೇಶ್ವರನಗರ, ಹಾರೋಹಳ್ಳಿ, ಚಿತ್ರದುರ್ಗ ಹಾಗೂ ಕೊಟ್ಟೂರಿನಲ್ಲಿ ಬೆದರಿಕೆ ದೂರು ದಾಖಲಾಗಿವೆ. ಇತ್ತೀಚಿಗೆ ಸಾಹಿತಿಗಳು ಸಾಹಿತಿಗಳಾದ ಕುಂ ವೀರಭದ್ರಪ್ಪ, ಬಿ.ಎಲ್. ವೇಣು, ಬಂಜೆಗೆರೆ ಜಯಪ್ರಕಾಶ, ಬಿಟಿ ಲಲಿತಾ ನಾಯ್ಕ, ವಸುಂಧರಾ ಭೂಪತಿ ಸೇರಿದಂತೆ ಹಲವರು ತಮಗೆ ಬಂದ ಬೆದರಿಕೆ ಪತ್ರದ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಆರೋಪಿಗಳ ಪತ್ತೆಗೆ ಮನವಿ ಮಾಡಿದ್ದರು. ಸಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹತ್ತು ದಿನ ಕಸ್ಟಡಿಗೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ