AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ

ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ
ಗಾಯಗೊಂಡ ಬಾಲಕ
TV9 Web
| Edited By: |

Updated on:Oct 17, 2021 | 1:03 PM

Share

ದಾವಣಗೆರೆ: ನಿನ್ನೆ (ಅಕ್ಟೋಬರ್ 16) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ವಾಸ್ತವ್ಯ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಶಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾರೆಟ್ ಕ್ಯಾಪ್​ನಲ್ಲಿನ ಪಿನ್ನೊಂದು ಬಾಲಕ ನಿತೀನ್ ಎಂಬಾತನಿಗೆ ತಾಗಿದ್ದು, ಗಾಯವಾಗಿ ರಕ್ತ ಸುರಿದಿತ್ತು. ಈ ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಬಂದೋಬಸ್ತ ವೇಳೆ ಬಾಲಕನಿಗೆ ಗಾಯವಾಗಿದ್ದು, ಪೊಲೀಸರು ಬಾಲಕನ ಮೇಲೆ ಯಾವುದೇ ಹಲ್ಲೆ ಮಾಡಿರುವುದಿಲ್ಲ. ಆದರೆ ಕೆಲವೊಂದು ಮಾಧ್ಯಮಗಳಲ್ಲಿ ಸದರಿ ಘಟನೆಯನ್ನು ಬೇರೆ ಬೇರೆ ರೀತಿಯಾಗಿ ಬಿಂಬಿಸಿರುತ್ತಾರೆ. ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿಯಲ್ಲಿ ಯಾವುದೇ ಘಟನೆ ಸಂಭಾವಿಸಿರುವುದಿಲ್ಲ. ಸದರಿ ಘಟನೆ ಕೇವಲ ಆಕಸ್ಮಿಕವಾಗಿ ಘಟಿಸಿರುವುದೇ ವಿನಃ ಬೇರೆ ಯಾವುದೇ ದುರುದ್ದೇಶದಿಂದ ಅಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ಲಕ್ಷಣ! ವರದಿಗೆ ಕಾಯುತ್ತಿರುವ ಆರೋಗ್ಯ ಇಲಾಖೆ

ಆಸ್ಪತ್ರೆ ಕಾಂಪೌಂಡ್ ಒತ್ತುವರಿ ತೆರವಿಗೆ ಹೋಗಿದ್ದ ಪಿಡಿಓ ಮೇಲೆ ಹಲ್ಲೆ; ಬಾಲಚಂದ್ರ ಜಾರಕಿಹೊಳಿ ಆಪ್ತನಿಂದ ಧಮ್ಕಿ

Published On - 12:28 pm, Sun, 17 October 21