Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿ ತಾಣವಾದ ಹರಿಹರದ ತುಂಗಭದ್ರಾ ಸೇತುವೆ; ನದಿ ನೋಡಲು ನೂರಾರು ಜನ ಆಗಮನ

ಭಾರೀ ಮಳೆಯಿಂದ ತುಂಗಭದ್ರಾ ನದಿಗೆ ಹೆಚ್ಚು ಪ್ರಮಾಣದ ನೀರು ಹರಿದುಬರುತ್ತಿದೆ. ಹರಿಹರದ ಗಂಗಾನಗರದಲ್ಲಿ ಹತ್ತಾರು ಮನೆಗಳು ಜಲಾವೃತವಾಗಿವೆ. ತಾತ್ಕಾಲಿಕವಾಗಿ 20 ಮನೆಗಳ ನಿವಾಸಿಗಳನ್ನ ಹರಿಹರದ ಎಪಿಎಂಸಿಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಪ್ರವಾಸಿ ತಾಣವಾದ ಹರಿಹರದ ತುಂಗಭದ್ರಾ ಸೇತುವೆ; ನದಿ ನೋಡಲು ನೂರಾರು ಜನ ಆಗಮನ
ತುಂಗಭದ್ರಾ ಸೇತುವೆ
Follow us
TV9 Web
| Updated By: sandhya thejappa

Updated on:Jul 25, 2021 | 10:28 AM

ದಾವಣಗೆರೆ: ದಿನದಿಂದ ದಿನಕ್ಕೆ ತುಂಗಭದ್ರಾ ನದಿಗೆ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಹರಿಹರ ನಗರದ ತುಂಗಭದ್ರಾ ಸೇತುವೆ ಪ್ರವಾಸಿ ತಾಣವಾಗಿದೆ. ಮೈ ತುಂಬಿ ಹರಿಯುತ್ತಿರುವ ನದಿಯನ್ನು ನೋಡಲು ನೂರಾರು ಜನ ಆಗಮಿಸುತ್ತಿದ್ದಾರೆ. ನದಿ ದಡದ ಮೇಲಿರುವ ಪುಣ್ಯಕ್ಷೇತ್ರ ಹರಿಹರೇಶ್ವ ಹಾಗೂ ರಾಘವೇಂದ್ರ ಮಠದಲ್ಲಿ ದರ್ಶನ ಪಡೆದು ನದಿ ನೋಡಲು ಜನ ಬರುತ್ತಿದ್ದಾರೆ. ಸೆಲ್ಫಿಗೆ ನಾ ಮುಂದು ತಾ ಮುಂದು ಅಂತ ಜನ ಮುಗಿ ಬೀಳುತ್ತಿದ್ದಾರೆ. ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹರಿಹರ ಸೇತುವೆ ಬಳಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಜಲಾವೃತವಾದ ಹತ್ತಾರು ಮನೆಗಳು ಭಾರೀ ಮಳೆಯಿಂದ ತುಂಗಭದ್ರಾ ನದಿಗೆ ಹೆಚ್ಚು ಪ್ರಮಾಣದ ನೀರು ಹರಿದುಬರುತ್ತಿದೆ. ಹರಿಹರದ ಗಂಗಾನಗರದಲ್ಲಿ ಹತ್ತಾರು ಮನೆಗಳು ಜಲಾವೃತವಾಗಿವೆ. ತಾತ್ಕಾಲಿಕವಾಗಿ 20 ಮನೆಗಳ ನಿವಾಸಿಗಳನ್ನ ಹರಿಹರದ ಎಪಿಎಂಸಿಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಗಂಗಾನಗರದ ನಿವಾಸಿಗಳು ಹತ್ತಾರು ವರ್ಷಗಳಿಂದ ನಿರಂತರವಾಗಿ ಈ ಕಷ್ಟ ಅನುಭವಿಸುತ್ತಿದ್ದಾರೆ. ಮಳೆ ಹಾಗೂ ಪ್ರವಾಹ ಬಂದಾಗ ಮಾತ್ರ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡುತ್ತಾರೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ.

ನಿರಂತರ ಮಳೆಗೆ ಭೂಕುಸಿತ ನಿರಂತರ ಮಳೆಗೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗೌಳೇರಹಟ್ಟಿ ಗ್ರಾಮದಲ್ಲಿ ಭೂಕುಸಿತವಾಗಿದೆ. ಉಮಾ ಎಂಬುವವರ ಮನೆ ಮುಂದೆಯೇ ಭೂಕುಸಿತವಾಗಿದ್ದು, ಮನೆ ಎದುರು ಬೃಹತ್ ಕಂದಕ ಸೃಷ್ಟಿಯಾಗಿತ್ತು. ಗ್ರಾಮ ಪಂಚಾಯತಿ ಸಿಬ್ಬಂದಿ ಜೆಸಿಬಿ ಮೂಲಕ ಕಂದಕವನ್ನು ಮುಚ್ಚಿದ್ದಾರೆ.

ಮಳೆಗೆ ಭೂಕುಸಿತ

ಇದನ್ನೂ ಓದಿ

ಬಸವಸಾಗರ ಜಲಾಶಯದಿಂದ ಕೃಷ್ಣ ನದಿಗೆ 3.5 ಲಕ್ಷ ಕ್ಯುಸೆಕ್ ನೀರು ಬಿಡುಗಡೆ, ಸ್ಥಳಾಂತರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ ನಿವಾಸಿಗಳು

ತ್ಯಾಜ್ಯ ವಿಲೇವಾರಿ ಮಾಡದಿದ್ದಕ್ಕೆ ಆಕ್ರೋಶ; ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಸುರಿದ ಬಿಜೆಪಿ ಶಾಸಕ ಅಭಯ್ ಪಾಟೀಲ್

(Tungabhadra River is receiving heavy water and Hundreds of people are coming to see the river at davanagere)

Published On - 10:27 am, Sun, 25 July 21

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್