AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿ ತಾಣವಾದ ಹರಿಹರದ ತುಂಗಭದ್ರಾ ಸೇತುವೆ; ನದಿ ನೋಡಲು ನೂರಾರು ಜನ ಆಗಮನ

ಭಾರೀ ಮಳೆಯಿಂದ ತುಂಗಭದ್ರಾ ನದಿಗೆ ಹೆಚ್ಚು ಪ್ರಮಾಣದ ನೀರು ಹರಿದುಬರುತ್ತಿದೆ. ಹರಿಹರದ ಗಂಗಾನಗರದಲ್ಲಿ ಹತ್ತಾರು ಮನೆಗಳು ಜಲಾವೃತವಾಗಿವೆ. ತಾತ್ಕಾಲಿಕವಾಗಿ 20 ಮನೆಗಳ ನಿವಾಸಿಗಳನ್ನ ಹರಿಹರದ ಎಪಿಎಂಸಿಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಪ್ರವಾಸಿ ತಾಣವಾದ ಹರಿಹರದ ತುಂಗಭದ್ರಾ ಸೇತುವೆ; ನದಿ ನೋಡಲು ನೂರಾರು ಜನ ಆಗಮನ
ತುಂಗಭದ್ರಾ ಸೇತುವೆ
TV9 Web
| Edited By: |

Updated on:Jul 25, 2021 | 10:28 AM

Share

ದಾವಣಗೆರೆ: ದಿನದಿಂದ ದಿನಕ್ಕೆ ತುಂಗಭದ್ರಾ ನದಿಗೆ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಹರಿಹರ ನಗರದ ತುಂಗಭದ್ರಾ ಸೇತುವೆ ಪ್ರವಾಸಿ ತಾಣವಾಗಿದೆ. ಮೈ ತುಂಬಿ ಹರಿಯುತ್ತಿರುವ ನದಿಯನ್ನು ನೋಡಲು ನೂರಾರು ಜನ ಆಗಮಿಸುತ್ತಿದ್ದಾರೆ. ನದಿ ದಡದ ಮೇಲಿರುವ ಪುಣ್ಯಕ್ಷೇತ್ರ ಹರಿಹರೇಶ್ವ ಹಾಗೂ ರಾಘವೇಂದ್ರ ಮಠದಲ್ಲಿ ದರ್ಶನ ಪಡೆದು ನದಿ ನೋಡಲು ಜನ ಬರುತ್ತಿದ್ದಾರೆ. ಸೆಲ್ಫಿಗೆ ನಾ ಮುಂದು ತಾ ಮುಂದು ಅಂತ ಜನ ಮುಗಿ ಬೀಳುತ್ತಿದ್ದಾರೆ. ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹರಿಹರ ಸೇತುವೆ ಬಳಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಜಲಾವೃತವಾದ ಹತ್ತಾರು ಮನೆಗಳು ಭಾರೀ ಮಳೆಯಿಂದ ತುಂಗಭದ್ರಾ ನದಿಗೆ ಹೆಚ್ಚು ಪ್ರಮಾಣದ ನೀರು ಹರಿದುಬರುತ್ತಿದೆ. ಹರಿಹರದ ಗಂಗಾನಗರದಲ್ಲಿ ಹತ್ತಾರು ಮನೆಗಳು ಜಲಾವೃತವಾಗಿವೆ. ತಾತ್ಕಾಲಿಕವಾಗಿ 20 ಮನೆಗಳ ನಿವಾಸಿಗಳನ್ನ ಹರಿಹರದ ಎಪಿಎಂಸಿಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಗಂಗಾನಗರದ ನಿವಾಸಿಗಳು ಹತ್ತಾರು ವರ್ಷಗಳಿಂದ ನಿರಂತರವಾಗಿ ಈ ಕಷ್ಟ ಅನುಭವಿಸುತ್ತಿದ್ದಾರೆ. ಮಳೆ ಹಾಗೂ ಪ್ರವಾಹ ಬಂದಾಗ ಮಾತ್ರ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡುತ್ತಾರೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ.

ನಿರಂತರ ಮಳೆಗೆ ಭೂಕುಸಿತ ನಿರಂತರ ಮಳೆಗೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗೌಳೇರಹಟ್ಟಿ ಗ್ರಾಮದಲ್ಲಿ ಭೂಕುಸಿತವಾಗಿದೆ. ಉಮಾ ಎಂಬುವವರ ಮನೆ ಮುಂದೆಯೇ ಭೂಕುಸಿತವಾಗಿದ್ದು, ಮನೆ ಎದುರು ಬೃಹತ್ ಕಂದಕ ಸೃಷ್ಟಿಯಾಗಿತ್ತು. ಗ್ರಾಮ ಪಂಚಾಯತಿ ಸಿಬ್ಬಂದಿ ಜೆಸಿಬಿ ಮೂಲಕ ಕಂದಕವನ್ನು ಮುಚ್ಚಿದ್ದಾರೆ.

ಮಳೆಗೆ ಭೂಕುಸಿತ

ಇದನ್ನೂ ಓದಿ

ಬಸವಸಾಗರ ಜಲಾಶಯದಿಂದ ಕೃಷ್ಣ ನದಿಗೆ 3.5 ಲಕ್ಷ ಕ್ಯುಸೆಕ್ ನೀರು ಬಿಡುಗಡೆ, ಸ್ಥಳಾಂತರ ಮಾಡುವುದಿಲ್ಲ ಎಂದು ಪಟ್ಟು ಹಿಡಿದ ನಿವಾಸಿಗಳು

ತ್ಯಾಜ್ಯ ವಿಲೇವಾರಿ ಮಾಡದಿದ್ದಕ್ಕೆ ಆಕ್ರೋಶ; ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಸುರಿದ ಬಿಜೆಪಿ ಶಾಸಕ ಅಭಯ್ ಪಾಟೀಲ್

(Tungabhadra River is receiving heavy water and Hundreds of people are coming to see the river at davanagere)

Published On - 10:27 am, Sun, 25 July 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ