AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಸಹೋದರಿಯರಿಬ್ಬರ ಶವ; ಕೊಲೆಯಾಗಿರುವ ಅನುಮಾನ

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಸಹೋದರಿಯರಿಬ್ಬರ ಶವ; ಕೊಲೆಯಾಗಿರುವ ಅನುಮಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 30, 2021 | 9:23 AM

Share

ದಾವಣಗೆರೆ: ಮನೆಯೊಂದರಲ್ಲಿ ಸಹೋದರಿಯಬ್ಬರ ಮೃತದೋಹ (Dead Body) ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ನಗರದ ಕಾಟನ್​ ಮಿಲ್ ಪ್ರದೇಶದಲ್ಲಿರುವ ಮನೆಯಲ್ಲಿ ಗೌರಮ್ಮ (34 ವರ್ಷ), ರಾಧಮ್ಮ (32 ವರ್ಷ) ಎಂಬುವವರ ಶವ ಪತ್ತೆಯಾಗಿದ್ದು, ಇಬ್ಬರೂ ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಸಹೋದರಿಯರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾಗಿದ್ದು, ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೌರಮ್ಮ ಹಾಗೂ ರಾಧಮ್ಮ ಕೆಲ ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದುಬಂದಿದೆ. ಮನೆಯೊಳಗೇ ಇಬ್ಬರ ಶವ ಪತ್ತೆಯಾಗಿದ್ದು ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಕಳೆದ ಕೆಲ ದಿನಗಳಿಂದ ಅವರು ಕಾಣಿಸಿಕೊಂಡಿರಲಿಲ್ಲ. ಆದರೆ, ಇದ್ದಕ್ಕಿದ್ದಂತೆ ಮನೆಯಿಂದ ವಾಸನೆ ಬರಲಾರಂಭಿಸಿದಾಗ ಅನುಮಾನಗೊಂಡ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವು ಸಂಭವಿಸಿ ಮೂರ್ನಾಲ್ಕು ದಿನಗಳೇ ಕಳೆದಿರಬಹುದು ಎಂದು ಅಂದಾಜಿಸಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಕೊಲೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾದ ಗೌರಮ್ಮ ಮತ್ತು ರಾಧಮ್ಮ ಅವರ ಹಿನ್ನೆಲೆ ಪರಿಶೀಲಿಸಿ, ಘಟನೆಯ ಬಗ್ಗೆ ಸಹೋದರಿಯರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಸದ್ಯ ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.

(Two sisters found dead in their House in Davanagere) ಇದನ್ನೂ ಓದಿ: Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ 

Murder News: ನಿನ್ನಿಂದ ಮಗು ಹುಟ್ಟಿಸಲು ಸಾಧ್ಯವಿಲ್ಲ ಎಂದ ವೈದ್ಯೆಯ ಬರ್ಬರ ಹತ್ಯೆ!; ಭಾವನಿಂದಲೇ ಕೊಲೆಯಾದ ಮಾಜಿ MLA ಸೊಸೆ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ