AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಸಹೋದರಿಯರಿಬ್ಬರ ಶವ; ಕೊಲೆಯಾಗಿರುವ ಅನುಮಾನ

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಸಹೋದರಿಯರಿಬ್ಬರ ಶವ; ಕೊಲೆಯಾಗಿರುವ ಅನುಮಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 30, 2021 | 9:23 AM

Share

ದಾವಣಗೆರೆ: ಮನೆಯೊಂದರಲ್ಲಿ ಸಹೋದರಿಯಬ್ಬರ ಮೃತದೋಹ (Dead Body) ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ನಗರದ ಕಾಟನ್​ ಮಿಲ್ ಪ್ರದೇಶದಲ್ಲಿರುವ ಮನೆಯಲ್ಲಿ ಗೌರಮ್ಮ (34 ವರ್ಷ), ರಾಧಮ್ಮ (32 ವರ್ಷ) ಎಂಬುವವರ ಶವ ಪತ್ತೆಯಾಗಿದ್ದು, ಇಬ್ಬರೂ ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಸಹೋದರಿಯರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾಗಿದ್ದು, ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೌರಮ್ಮ ಹಾಗೂ ರಾಧಮ್ಮ ಕೆಲ ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದುಬಂದಿದೆ. ಮನೆಯೊಳಗೇ ಇಬ್ಬರ ಶವ ಪತ್ತೆಯಾಗಿದ್ದು ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಕಳೆದ ಕೆಲ ದಿನಗಳಿಂದ ಅವರು ಕಾಣಿಸಿಕೊಂಡಿರಲಿಲ್ಲ. ಆದರೆ, ಇದ್ದಕ್ಕಿದ್ದಂತೆ ಮನೆಯಿಂದ ವಾಸನೆ ಬರಲಾರಂಭಿಸಿದಾಗ ಅನುಮಾನಗೊಂಡ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವು ಸಂಭವಿಸಿ ಮೂರ್ನಾಲ್ಕು ದಿನಗಳೇ ಕಳೆದಿರಬಹುದು ಎಂದು ಅಂದಾಜಿಸಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಕೊಲೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾದ ಗೌರಮ್ಮ ಮತ್ತು ರಾಧಮ್ಮ ಅವರ ಹಿನ್ನೆಲೆ ಪರಿಶೀಲಿಸಿ, ಘಟನೆಯ ಬಗ್ಗೆ ಸಹೋದರಿಯರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಸದ್ಯ ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.

(Two sisters found dead in their House in Davanagere) ಇದನ್ನೂ ಓದಿ: Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ 

Murder News: ನಿನ್ನಿಂದ ಮಗು ಹುಟ್ಟಿಸಲು ಸಾಧ್ಯವಿಲ್ಲ ಎಂದ ವೈದ್ಯೆಯ ಬರ್ಬರ ಹತ್ಯೆ!; ಭಾವನಿಂದಲೇ ಕೊಲೆಯಾದ ಮಾಜಿ MLA ಸೊಸೆ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!