AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದ ಇಬ್ಬರು ಸವಾರರ ಮೇಲೆ ಹರಿದ ಕಾರು: ಹಿಮಾಲಯನ್ ಬೈಕ್​ನಲ್ಲಿ ಜಾಲಿ ರೈಡ್​ ಬಂದವರು ದುರಂತ ಅಂತ್ಯ

ದಾವಣಗೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಬ್ರಿಡ್ಜ್ ಬಳಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬ್ರಿಡ್ಜ್​​​ ಮೇಲಿಂದ ಬೈಕ್​​ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಾರು ಹರಿದು ಇಬ್ಬರು ಬೈಕ್ ಸವಾರರ ಸಾವಾಗಿದೆ. ಇನ್ನು ರಸ್ತೆಯ ಮಧ್ಯೆ ಬಿದ್ದ ಬೈಕ್​ಗೆ ಕಾರು ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಬೈಕ್​ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದ ಇಬ್ಬರು ಸವಾರರ ಮೇಲೆ ಹರಿದ ಕಾರು: ಹಿಮಾಲಯನ್ ಬೈಕ್​ನಲ್ಲಿ ಜಾಲಿ ರೈಡ್​ ಬಂದವರು ದುರಂತ ಅಂತ್ಯ
ಹಿಮಾಲಯನ್ ಬೈಕ್​ನಲ್ಲಿ ಜಾಲಿ ರೈಡ್​ ಬಂದವರು ದುರಂತ ಅಂತ್ಯ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Sep 07, 2023 | 2:04 PM

Share

ದಾವಣಗೆರೆ, ಸೆ.07: ಜಾಲಿ ರೈಡ್​ ಬಂದಿದ್ದ ಕೇರಳದ ಇಬ್ಬರು ಬೈಕ್ ಸವಾರರು ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ ಅಪಘಾತದಿಂದ ಮೃತಪಟ್ಟಿದ್ದಾರೆ(Accident Death). ಕೇರಳ ಮೂಲದ ಅತುಲ್(25), ಋಷಿಕೇಶ್(24) ಮೃತ ದುರ್ದೈವಿಗಳು. ಎನ್ ಫೀಲ್ಡ್ ಹಿಮಾಲಯನ್ ಬೈಕ್​ನಲ್ಲಿ ಕೇರಳದಿಂದ ಬಂದಿದ್ದ ಯುವಕರು ದಾವಣಗೆರೆಯ ಎಸ್.ಎಸ್. ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಮೃತ ಯುವಕರು ಕೇರಳದಿಂದ ಜಾಲಿ ರೈಡ್​ಗೆ ಬಂದಿದ್ದರು ಎನ್ನುವುದು ಪೊಲೀಸರು ಪ್ರಾಥಮಿಕ ಮಾಹಿತಿ‌ಯಲ್ಲಿ ಬಯಲಾಗಿದೆ.

ಬೈಕ್ ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಬ್ರಿಡ್ಜ್ ಬಳಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬ್ರಿಡ್ಜ್​​​ ಮೇಲಿಂದ ಬೈಕ್​​ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಾರು ಹರಿದು ಇಬ್ಬರು ಬೈಕ್ ಸವಾರರ ಸಾವಾಗಿದೆ. ಇನ್ನು ರಸ್ತೆಯ ಮಧ್ಯೆ ಬಿದ್ದ ಬೈಕ್​ಗೆ ಕಾರು ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಲವ್ ಜಿಹಾದ್, ಅತ್ಯಾಚಾರ; ಪರಿಶೀಲಿಸುತ್ತಿರುವ ಬೆಳ್ಳಂದೂರು ಪೊಲೀಸರು 

ಖಾಸಗಿ ಬಸ್​ ಡಿಕ್ಕಿಯಾಗಿ ಬಾಲಕಿ ಸಾವು

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ಖಾಸಗಿ ಬಸ್​​ ಡಿಕ್ಕಿಯಾಗಿ 14 ವರ್ಷದ ತುಳಸಿ ಎಂಬ ಬಾಲಕಿ ಮೃತಪಟ್ಟಿದ್ದಾಳೆ. 8ನೇ ತರಗತಿ ವಿದ್ಯಾರ್ಥಿನಿ ತುಳಸಿ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

8ನೇ ತರಗತಿ ಓದುತ್ತಿರುವ ನಿವೇದಿತಾ, ತುಳಸಿ ಇಬ್ಬರೂ ಶಾಲೆಗೆ ತೆರಳಲು ಬಸ್​ಗೆ ಕಾಯುತ್ತ ಅಂಗಡಿ ಬಳಿ ನಿಂತಿದ್ದರು. ಈ ವೇಳೆ ಅತಿವೇಗವಾಗಿ ಬಂದ ಬಸ್ ಅಂಗಡಿಗೆ ಗುದ್ದಿತ್ತು. ಈ ಅಪಘಾತದಲ್ಲಿ 5 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಐವರ ಪೈಕಿ ತುಳಸಿ ಮೃತಪಟ್ಟಿದ್ದು ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಆಕ್ರೋಶಗೊಂಡ ಸ್ಥಳೀಯರು ಬಸ್​ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಘಟನೆ ಬಳಿಕ ಖಾಸಗಿ ಬಸ್​​ ಚಾಲಕ ಪರಾರಿಯಾಗುದ್ದು ಘಟನಾ ಸ್ಥಳಕ್ಕೆ ತರೀಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ