ಬೈಕ್​ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದ ಇಬ್ಬರು ಸವಾರರ ಮೇಲೆ ಹರಿದ ಕಾರು: ಹಿಮಾಲಯನ್ ಬೈಕ್​ನಲ್ಲಿ ಜಾಲಿ ರೈಡ್​ ಬಂದವರು ದುರಂತ ಅಂತ್ಯ

ದಾವಣಗೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಬ್ರಿಡ್ಜ್ ಬಳಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬ್ರಿಡ್ಜ್​​​ ಮೇಲಿಂದ ಬೈಕ್​​ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಾರು ಹರಿದು ಇಬ್ಬರು ಬೈಕ್ ಸವಾರರ ಸಾವಾಗಿದೆ. ಇನ್ನು ರಸ್ತೆಯ ಮಧ್ಯೆ ಬಿದ್ದ ಬೈಕ್​ಗೆ ಕಾರು ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಬೈಕ್​ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದ ಇಬ್ಬರು ಸವಾರರ ಮೇಲೆ ಹರಿದ ಕಾರು: ಹಿಮಾಲಯನ್ ಬೈಕ್​ನಲ್ಲಿ ಜಾಲಿ ರೈಡ್​ ಬಂದವರು ದುರಂತ ಅಂತ್ಯ
ಹಿಮಾಲಯನ್ ಬೈಕ್​ನಲ್ಲಿ ಜಾಲಿ ರೈಡ್​ ಬಂದವರು ದುರಂತ ಅಂತ್ಯ
Edited By: ಆಯೇಷಾ ಬಾನು

Updated on: Sep 07, 2023 | 2:04 PM

ದಾವಣಗೆರೆ, ಸೆ.07: ಜಾಲಿ ರೈಡ್​ ಬಂದಿದ್ದ ಕೇರಳದ ಇಬ್ಬರು ಬೈಕ್ ಸವಾರರು ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ ಅಪಘಾತದಿಂದ ಮೃತಪಟ್ಟಿದ್ದಾರೆ(Accident Death). ಕೇರಳ ಮೂಲದ ಅತುಲ್(25), ಋಷಿಕೇಶ್(24) ಮೃತ ದುರ್ದೈವಿಗಳು. ಎನ್ ಫೀಲ್ಡ್ ಹಿಮಾಲಯನ್ ಬೈಕ್​ನಲ್ಲಿ ಕೇರಳದಿಂದ ಬಂದಿದ್ದ ಯುವಕರು ದಾವಣಗೆರೆಯ ಎಸ್.ಎಸ್. ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಮೃತ ಯುವಕರು ಕೇರಳದಿಂದ ಜಾಲಿ ರೈಡ್​ಗೆ ಬಂದಿದ್ದರು ಎನ್ನುವುದು ಪೊಲೀಸರು ಪ್ರಾಥಮಿಕ ಮಾಹಿತಿ‌ಯಲ್ಲಿ ಬಯಲಾಗಿದೆ.

ಬೈಕ್ ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಬ್ರಿಡ್ಜ್ ಬಳಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬ್ರಿಡ್ಜ್​​​ ಮೇಲಿಂದ ಬೈಕ್​​ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಾರು ಹರಿದು ಇಬ್ಬರು ಬೈಕ್ ಸವಾರರ ಸಾವಾಗಿದೆ. ಇನ್ನು ರಸ್ತೆಯ ಮಧ್ಯೆ ಬಿದ್ದ ಬೈಕ್​ಗೆ ಕಾರು ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಲವ್ ಜಿಹಾದ್, ಅತ್ಯಾಚಾರ; ಪರಿಶೀಲಿಸುತ್ತಿರುವ ಬೆಳ್ಳಂದೂರು ಪೊಲೀಸರು 

ಖಾಸಗಿ ಬಸ್​ ಡಿಕ್ಕಿಯಾಗಿ ಬಾಲಕಿ ಸಾವು

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ಖಾಸಗಿ ಬಸ್​​ ಡಿಕ್ಕಿಯಾಗಿ 14 ವರ್ಷದ ತುಳಸಿ ಎಂಬ ಬಾಲಕಿ ಮೃತಪಟ್ಟಿದ್ದಾಳೆ. 8ನೇ ತರಗತಿ ವಿದ್ಯಾರ್ಥಿನಿ ತುಳಸಿ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

8ನೇ ತರಗತಿ ಓದುತ್ತಿರುವ ನಿವೇದಿತಾ, ತುಳಸಿ ಇಬ್ಬರೂ ಶಾಲೆಗೆ ತೆರಳಲು ಬಸ್​ಗೆ ಕಾಯುತ್ತ ಅಂಗಡಿ ಬಳಿ ನಿಂತಿದ್ದರು. ಈ ವೇಳೆ ಅತಿವೇಗವಾಗಿ ಬಂದ ಬಸ್ ಅಂಗಡಿಗೆ ಗುದ್ದಿತ್ತು. ಈ ಅಪಘಾತದಲ್ಲಿ 5 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಐವರ ಪೈಕಿ ತುಳಸಿ ಮೃತಪಟ್ಟಿದ್ದು ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಆಕ್ರೋಶಗೊಂಡ ಸ್ಥಳೀಯರು ಬಸ್​ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಘಟನೆ ಬಳಿಕ ಖಾಸಗಿ ಬಸ್​​ ಚಾಲಕ ಪರಾರಿಯಾಗುದ್ದು ಘಟನಾ ಸ್ಥಳಕ್ಕೆ ತರೀಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us