AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಮಾರ್ಚ್​ 12 ರಂದು ಅಮಿತ್​ ಶಾ ಮಧ್ಯ ಕರ್ನಾಟಕ ದಾವಣಗೆರೆಗೆ ಭೇಟಿ

ಮಾರ್ಚ್​ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಈ ವೇಳೆ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

Amit Shah: ಮಾರ್ಚ್​ 12 ರಂದು ಅಮಿತ್​ ಶಾ ಮಧ್ಯ ಕರ್ನಾಟಕ ದಾವಣಗೆರೆಗೆ ಭೇಟಿ
ಕೇಂದ್ರ ಗೃಹಸಚಿವ ಅಮಿತ್ ಶಾ
ವಿವೇಕ ಬಿರಾದಾರ
|

Updated on:Mar 04, 2023 | 10:32 AM

Share

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದ್ದು, ರಾಜಕೀಯ ನಾಯಕರು ಪ್ರಚಾರವನ್ನು ಜೋರಾಗಿ ನಡೆಸಿದ್ದಾರೆ. ಮತದಾರರನ್ನು ತಮ್ಮತ್ತ ಸೆಳೆಯಲು ವಿವಿಧ ಗಿಫ್ಟ್​​ಗಳು, ಭಾಗ್ಯಗಳನ್ನು ಘೋಷಿಸುತ್ತಿದ್ದಾರೆ. ರಾಜ್ಯ ಬಿಜೆಪಿ (Karnataka BJP) ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ರಥಯಾತ್ರೆ (Vijay Sankalpa Rathyatra) ಪ್ರಾರಂಭಿಸಿದೆ. ಈ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲು ಕೇಂದ್ರ ನಾಯಕರು ರಾಜ್ಯಕ್ಕೆ ಬಂದು ಹೋಗಿದ್ದಾರೆ. ಬಿಜೆಪಿ ಹೈ ಕಮಾಂಡ್​​ ರಾಜ್ಯ ಪ್ರವಾಸ ಮಾಡುತ್ತಿದ್ದು, ಮತಗಳ ಕ್ರೋಢೀಕರಣಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ. ಶತಾಯಗತಾಯ ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯ ಸುತ್ತುತ್ತಿದ್ದಾರೆ. ಅದರಂತೆ ಈಗ ಮತ್ತೆ ಮಾರ್ಚ್​ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ವಸತಿ ಶಾಲೆ ಮೈದಾನದಲ್ಲಿ ನಡೆಯುವ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ದಾವಣಗೆರೆ, ವಿಜಯನಗರ, ಗದಗ, ಧಾರವಾಡ ಸೇರಿದಂತೆ 12 ಜಿಲ್ಲೆಗಳ 53 ಸಾವಿರ ಫಲಾನುಭವಿಗಳು ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರು ಸಾಥ್ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 4 March 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?