ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮೀಯರಿಗೂ ಪ್ರವೇಶ: ಭಾವೈಕ್ಯತೆ ಸಾರಲು ಮಸೀದಿ ದರ್ಶನ

ಮಸೀದಿಯೊಳಗೆ ಹೇಗಿರುತ್ತದೆ ವ್ಯವಸ್ಥೆ? ಅಲ್ಲಿ ಯಾವ ರೀತಿ ಪ್ರಾರ್ಥನೆ ಮಾಡುತ್ತಾರೆ? ಈ ಕುತೂಹಲ ಹಿಂದುಗಳಿಗೆ ಇರಬಹುದು. ಆದರೆ ಹೋಗಿ ನೋಡಿದವರು ಇಲ್ಲ ಅಥವಾ ವಿರಳ ಇರಬಹುದು. ಕೋಮು ಸಾಮರಸ್ಯದ ಸಲುವಾಗಿ ದಾವಣಗೆರೆ ಜಿಲ್ಲೆಯ ಹರಿಹರದ ಪ್ರಶಾಂತ್ ನಗರದಲ್ಲಿರುವ ‘ಆಲಿ' ಮಸೀದಿಗೆ ಹಿಂದುಗಳಿಗೂ ಪ್ರವೇಶಾವಕಾಶ ನೀಡಿ ಕನ್ನಡದಲ್ಲಿ ಧಾರ್ಮಿಕ ಪ್ರವಚನ ಮಾಡಲಾಯಿತು. ವಿವರಗಳಿಗೆ ಮುಂದೆ ಓದಿ.

ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮೀಯರಿಗೂ ಪ್ರವೇಶ: ಭಾವೈಕ್ಯತೆ ಸಾರಲು ಮಸೀದಿ ದರ್ಶನ
ಹರಿಹರದ ಪ್ರಶಾಂತ್ ನಗರದಲ್ಲಿರುವ ‘ಆಲಿ' ಮಸೀದಿಗೆ ಹಿಂದುಗಳಿಗೂ ಪ್ರವೇಶಾವಕಾಶ
Follow us
| Updated By: ಗಣಪತಿ ಶರ್ಮ

Updated on:Jul 27, 2024 | 5:17 PM

ದಾವಣಗೆರೆ, ಜುಲೈ 27: ಕೋಮು ಸೌಹಾರ್ದತೆ ಬಲಪಡಿಸುವ ಪ್ರಯತ್ನಗಳ ಫಲವಾಗಿ ಹರಿಹರದ ಜನ ವಿಶಿಷ್ಟ ಕಾರ್ಯಕ್ರಮವೊಂದನ್ನು ಆಯೋಜಿಸಿ ಗಮನ ಸೆಳೆದಿದ್ದಾರೆ. ಅದುವೇ ‘ನಮ್ಮೂರ ಮಸೀದಿ ನೋಡಬನ್ನಿ’ ಎಂಬ ಮಸೀದಿ ದರ್ಶನ ಕಾರ್ಯಕ್ರಮ. ದಾವಣಗೆರೆ ಜಿಲ್ಲೆಯ ಹರಿಹರದ ಪ್ರಶಾಂತ್ ನಗರದಲ್ಲಿರುವ ‘ಆಲಿ’ ಮಸೀದಿಗೆ ಅನ್ಯ ಧರ್ಮೀಯರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ‘ಜಮಾಯತ್ ಏ ಇಸ್ಲಾಮಿಯಾ ಹಿಂದ್’ ಸಂಸ್ಥೆ ವತಿಯಿಂದ ಮಸೀದಿ ದರ್ಶನ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಹರಿಹರದ ಸಾಕಷ್ಟು ಹಿಂದೂಗಳು, ಕ್ರೈಸ್ತರು, ಮಹಿಳೆಯರು ಮಸೀದಿಗೆ ಸೌಹಾರ್ದಯುತವಾಗಿ ಭೇಟಿ ನೀಡಿದರು. ಮಸೀದಿಯಲ್ಲಿ ಯಾವ ರೀತಿ ಪ್ರಾರ್ಥನೆ ನಡೆಯುತ್ತದೆ ಎಂಬುದನ್ನು ಕಣ್ತುಂಬಿಕೊಂಡರು. ಅಲ್ಲದೆ ಉರ್ದು ಬದಲಿಗೆ ಕನ್ನಡದಲ್ಲೇ ನಡೆದ ಪ್ರವಚನ ಕೇಳಿದರು.

ಮಸೀದಿ ಎಂದರೆ ಏನು? ಅಲ್ಲಿ ಯಾವ ರೀತಿ ಪ್ರಾರ್ಥನೆ ಮಾಡಲಾಗುತ್ತದೆ? ನಮಾಜ್ ಎಂದರೆ ಏನು, ಮಸೀದಿಯಲ್ಲಿ ದಿನ ನಿತ್ಯ ಹೇಗೆ ಐದು ಹೊತ್ತು ನಮಾಜ್ (ಪ್ರಾರ್ಥನೆ)ಮಾಡುತ್ತಾರೆ ಎಂದು ಅನ್ಯಧರ್ಮಿಯರು ತಿಳಿದುಕೊಳ್ಳಲು ಮಸೀದಿ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ವಿನೂತನ ಕಾರ್ಯಕ್ರಮದಡಿ ಹರಿಹರದ ಪ್ರಶಾಂತ್ ನಗರದಲ್ಲಿರುವ ‘ಆಲಿ’ ಮಸೀದಿಗೆ 300ಕ್ಕೂ ಹೆಚ್ಚು ಜನ ಭೇಟಿ ನೀಡಿದರು.

ಉರ್ದು ಬದಲಿಗೆ ಕನ್ನಡದಲ್ಲೇ ವಿಶೇಷ ಪ್ರವಚನ!

ಇತರ ಧರ್ಮೀಯರ ಮಸೀದಿ ಭೇಟಿ ಅಂಗವಾಗಿ ಶುಕ್ರವಾರ ಉರ್ದು ಬದಲಿಗೆ ಕನ್ನಡದಲ್ಲೇ ವಿಶೇಷ ಪ್ರವಚನವನ್ನು ಆಯೋಜನೆ ಮಾಡಲಾಗಿತ್ತು. ಕನ್ನಡದ ಕಂಪು ಮಸೀದಿಯಲ್ಲಿ ಝೇಂಕರಿಸುತ್ತಿತ್ತು.

Unique event in harihar chitradurga, Hindus are allowed to enter mosques, Kannada news

ಪ್ರೀತಿ ಹಂಚುವ, ಸುಖ ಕಷ್ಟಗಳಿಗೆ ಧ್ವನಿ ಆಗುವಂತಹ ಸಮಾಜ ನಿರ್ಮಾಣ ಮಾಡುವ ದೃಷ್ಟಿಯಿಂದ ಈ ಮಸೀದಿ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಎಂದು ಕಾರ್ಯಕ್ರಮದ ಆಯೋಜಕರಾದ ಅಕ್ಬರ್ ಅಲಿ ತಿಳಿಸಿದ್ದಾರೆ.

ಹರಿಹರದ ಅನೇಕ ಹಿಂದುಗಳು ಮಸೀದಿಯ ದರ್ಶನ ಮಾಡಿದರು. ಹಿಂದುಗಳು ಮೊದಲಿಗೆ ಕೈಕಾಲು ತೊಳೆದುಕೊಂಡು ಮಸೀದಿಯ ಒಳಗೆ ಪ್ರವೇಶ ಮಾಡಿದ್ದು ವಿಶೇಷವಾಗಿತ್ತು.‌ ಬಳಿಕ ನಾಲ್ಕು ಗೋಡೆ ಮಧ್ಯೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಕೆ ಮಾಡುವುದನ್ನು ಕಣ್ತುಂಬಿಕೊಂಡರು. ಕನ್ನಡದಲ್ಲೇ ಕೇಳಿಬರುತ್ತಿದ್ದ ಪ್ರವಚನ ಕೇಳಿ ಇಸ್ಲಾಂನ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡರು. ಮುಸ್ಲಿಮರು ಮಸೀದಿ ಪ್ರವೇಶಕ್ಕು ಮುನ್ನ ಕೈಕಾಲು ಯಾವ ರೀತಿ ತೊಳೆದುಕೊಳ್ಳುತ್ತಾರೆ (ವಝು) ಎಂದು ಮಸೀದಿಯವರು ತಿಳಿಸಿಕೊಟ್ಟರು.

Unique event in harihar chitradurga, Hindus are allowed to enter mosques, Kannada news

ಹಿಂದೂ ಮಹಿಳೆಯರಿಗೂ ಮಸೀದಿಗೆ ಪ್ರವೇಶ ಅವಕಾಶ ನೀಡಲಾಗಿತ್ತು. ಮೊದಲ ಬಾರಿಗೆ ಮಸೀದಿಯ ಪ್ರಾಣಂಗಣಕ್ಕೆ ಆಗಮಿಸಿದ್ದ ಹಿಂದು ಮಹಿಳೆಯರ ಸಂತಸಕ್ಕೆ ಪಾರವೇ ಇರಲಿಲ್ಲ.

ಇದನ್ನೂ ಓದಿ: ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು

ನಾವೆಲ್ಲರು ಮಾನವರು, ದೇಶದಲ್ಲಿ ದ್ವೇಷ ಹಂಚುವ ಬದಲು ಈ ರೀತಿಯ ಪ್ರೀತಿ ಹಂಚಬೇಕೆಂದು ಮಸೀದಿಯಿಂದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭೇಟಿ ಕೊಟ್ಟಿದ್ದೇನೆ. ನಾವು ವಿಗ್ರಹದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ.‌ ಇಲ್ಲಿ ನಾಲ್ಕು ಗೋಡೆ ಮಧ್ಯೆ ಪ್ರಾರ್ಥನೆ ಸಲ್ಲಿಸುತ್ತಾರೆ ಎಂದು ವೀರಶೈವ ಸಮಾಜ ಮುಖಂಡ ಮುರಗೇಶಪ್ಪ ಅಭಿಪ್ರಾಯಪಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:05 pm, Sat, 27 July 24

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್