AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ!

ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿ ಸುರೇಶ್ ಸಗರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಕ್ಕಳ ಮೇಲಿನ ದೌರ್ಜನ್ಯದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಲಾಗಿದ್ದು, ಮೇ 29 ರಂದು ದಾವಣಗೆರೆ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನು ರದ್ದಾದರೆ ಸ್ವಾಮೀಜಿ ಬಂಧನ ಸಾಧ್ಯತೆ ಇದೆ.

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ!
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ:
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: May 22, 2026 | 12:24 PM

Share

ದಾವಣಗೆರೆ, ಮೇ 22: ಪೋಕ್ಸೊ (POCSO) ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ (Vachanananda Swamiji) ಸ್ವಾಮೀಜಿ ಅವರ ವಿರುದ್ಧದ ಕಾನೂನು ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಶ್ರೀಗಳ ಜಾಮೀನನ್ನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಮುಖ್ಯಾಂಶಗಳು

  • ವಚನಾನಂದ ಶ್ರೀಗಳ ಪೋಕ್ಸೋ ಕೇಸ್ ಜಾಮೀನು ರದ್ದತಿಗೆ ಪೊಲೀಸರ ಅರ್ಜಿ.
  • ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಮಹತ್ವದ ವರದಿ ಸಲ್ಲಿಕೆ ಮಾಡಿದ ತನಿಖಾಧಿಕಾರಿ.
  • ಮೇ 29ರಂದು ವಿಶೇಷ ನ್ಯಾಯಾಲಯದಲ್ಲಿ ಜಾಮೀನು ರದ್ದತಿ ಅರ್ಜಿ ವಿಚಾರಣೆ.

ಶ್ರೀಗಳ ಜಾಮೀನು ರದ್ದು ಮಾಡುವಂತೆ ಮನವಿ

ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ವಿಚಾರವಾಗಿ ಕಳೆದ ವಾರವಷ್ಟೇ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿತ್ತು. ಆದರೆ, ಕೇಸ್ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ರಕರಣದ ತನಿಖಾಧಿಕಾರಿ ಸುರೇಶ್ ಸಗರಿ ಅವರು ಶ್ರೀಗಳ ಜಾಮೀನನ್ನು ರದ್ದು ಮಾಡುವಂತೆ ಕೋರಿ ಕೋರ್ಟ್‌ಗೆ ಮಹತ್ವದ ಮನವಿ ಸಲ್ಲಿಸಿದ್ದಾರೆ.

ಇನ್ನೊಂದು ವಾರದಲ್ಲಿ ವಿಚಾರಣೆ

ಹರಿಹರ ಪೊಲೀಸರು ಮಕ್ಕಳ ಮೇಲೆ ಸ್ವಾಮೀಜಿ ನಡೆಸಿದ್ದಾರೆ ಎನ್ನಲಾದ ದೌರ್ಜನ್ಯ ಮತ್ತು ಹಲ್ಲೆ ಕುರಿತು ಸಂಪೂರ್ಣ ಮಾಹಿತಿಯನ್ನೊಳಗೊಂಡ ಪ್ರಮುಖ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ (ಸೀಲ್ಡ್ ಕವರ್) ಬಾಗಲಕೋಟೆ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಪೊಲೀಸರು ಸಲ್ಲಿಸಿರುವ ಈ ಜಾಮೀನು ರದ್ದತಿ ಅರ್ಜಿಯ ಪ್ರಮುಖ ವಿಚಾರಣೆಯನ್ನು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಇದೇ ಮೇ 29 ರಂದು ಕೈಗೆತ್ತಿಕೊಳ್ಳಲಿದೆ. ಒಂದು ವೇಳೆ ನ್ಯಾಯಾಲಯವು ಪೊಲೀಸರ ವಾದವನ್ನು ಪುರಸ್ಕರಿಸಿ ಜಾಮೀನು ರದ್ದುಗೊಳಿಸಿದರೆ, ವಚನಾನಂದ ಸ್ವಾಮೀಜಿ ಅವರಿಗೆ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು?

ಕೇಸ್ ಹಿನ್ನೆಲೆ

ಹರಿಹರ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ವಿರುದ್ಧ 16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹರಿಹರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮಠದ ಟ್ರಸ್ಟಿಗಳೊಂದಿಗಿನ ಭಿನ್ನಾಭಿಪ್ರಾಯದಿಂದ ಸ್ವಾಮೀಜಿಯವರನ್ನು ಪೀಠದಿಂದ ಪದಚ್ಯುತಗೊಳಿಸಿದ ಬೆನ್ನಲ್ಲೇ ಈ ದೂರು ದಾಖಲಾಗಿತ್ತು. ಸಂತ್ರಸ್ತ ಬಾಲಕನ ತಾಯಿ ಮೇ 7ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಘಟನಾ ಸ್ಥಳ ಹರಿಹರ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಿ, ಮೇ 8ರಂದು ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More