AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

Ramesh Jarkiholi CD Controversy: ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ರಮೇಶ್​ ಜಾರಕಿಹೊಳಿ
Skanda
| Edited By: |

Updated on:Mar 04, 2021 | 4:11 PM

Share

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Valmiki Prasannananda Swamiji letter

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಂಬಲಿಗರು ಮಾನಸಿಕ ಹಿಂಸೆ ನೀಡ್ತಿದ್ದಾರೆ, ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗ್ತೀನಿ: ದಿನೇಶ್ ಕಲ್ಲಹಳ್ಳಿ

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

Published On - 3:40 pm, Thu, 4 March 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!