AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

Ramesh Jarkiholi CD Controversy: ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ರಮೇಶ್​ ಜಾರಕಿಹೊಳಿ
Skanda
| Edited By: |

Updated on:Mar 04, 2021 | 4:11 PM

Share

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Valmiki Prasannananda Swamiji letter

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಂಬಲಿಗರು ಮಾನಸಿಕ ಹಿಂಸೆ ನೀಡ್ತಿದ್ದಾರೆ, ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗ್ತೀನಿ: ದಿನೇಶ್ ಕಲ್ಲಹಳ್ಳಿ

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

Published On - 3:40 pm, Thu, 4 March 21

ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
ಡಿಜಿಪಿ ರಾಮಚಂದ್ರ ರಾವ್ ಅಮಾನತು
ಡಿಜಿಪಿ ರಾಮಚಂದ್ರ ರಾವ್ ಅಮಾನತು
VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಧ್ರುವಂತ್
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಧ್ರುವಂತ್
ಕುಡಿದ ಮತ್ತಿನಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಮೇಲೆ ಕಾರು ಹತ್ತಿಸಿದ ವೈದ್ಯ
ಕುಡಿದ ಮತ್ತಿನಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಮೇಲೆ ಕಾರು ಹತ್ತಿಸಿದ ವೈದ್ಯ