AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ

ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪೂರ್ವಭಾವಿ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಮಹಾಸಭಾ ಪ್ರಧಾನ‌ ಕಾರ್ಯದರ್ಶಿ ಈಶ್ವರ ಖಂಡ್ರೆ ಡಿಸೆಂಬರ್ 23, 24ರಂದು 24ನೇ ವೀರಶೈವ ಮಹಾಸಭೆಯ ಮಹಾಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪೂರ್ವಭಾವಿ ಸಭೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Oct 06, 2023 | 4:28 PM

Share

ದಾವಣಗೆರೆ, ಅಕ್ಟೋಬರ್​​ 06: ಡಿಸೆಂಬರ್ 23, 24ರಂದು 24ನೇ ವೀರಶೈವ ಮಹಾಸಭೆಯ ಮಹಾಅಧಿವೇಶನ ನಡೆಯಲಿದೆ ಎಂದು ವೀರಶೈವ ಮಹಾಸಭಾ ಪ್ರಧಾನ‌ ಕಾರ್ಯದರ್ಶಿ ಈಶ್ವರ ಖಂಡ್ರೆ (eshwar Khandre) ಹೇಳಿದ್ದಾರೆ. ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಅಧಿವೇಶನ ಎಲ್ಲ ಗುರು-ವಿರಕ್ತರನ್ನು ಒಗ್ಗೂಡಿಸಲು ವೇದಿಕೆ ಆಗಲಿದೆ. ಇದಕ್ಕಾಗಿ‌ ಕೆಲ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಕೊರೊನಾ ಹಾಗೂ ಚುನಾವಣೆ ಹಿನ್ನೆಲೆ ಮುಂದೂಡಲಾಗಿತ್ತು. ಪ್ರತಿ 5 ವರ್ಷಕ್ಕೊಮ್ಮೆ ಮಹಾಸಭೆಯ ಮಹಾಅಧಿವೇಶನ ನಡೆಯುತ್ತದೆ. ರೈತರು, ಮಹಿಳಾ ಗೋಷ್ಠಿ ಹಾಗೂ ವೀರಶೈವ ಪರಂಪರೆಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ: ಈ ಸಂಬಂಧ ನಾನು ನೀಡಿರುವ ಹೇಳಿಕೆಗೆ ಬದ್ಧ: ಶಾಸಕ ಶಾಮನೂರು

ಜಗತ್ತಿನಲ್ಲಿ ಎಲ್ಲಿಯೇ ಇರುವ ವೀರಶೈವರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಸತ್ತೂರು ಹಾಗೂ ತುಮಕೂರ ಶ್ರೀಗಳು ನೂರಾರು ಜನ‌ ಮಹಾ ಅಧಿವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಹೇಳಿಕೆ ನೀಡಲು ನಿರಾಕರಿಸಿ ಶಾಸಕ ಶಾಮನೂರು ಶಿವಶಂಕರಪ್ಪ

ಸುದ್ದಿಗೋಷ್ಠಿಯಲ್ಲಿ ಕೇವಲ ಸಚಿವ ಈಶ್ವರ ಖಂಡ್ರೆ ಮಾತ್ರ ಮಾತನಾಡಿದ್ದು, ಶಾಸಕ ಶಾಮನೂರ ಶಿವಶಂಕರಪ್ಪ ಮೌನಕ್ಕೆ ಶರಣಾಗಿದ್ದರು. ನಂತರ ಶಾಮನೂರ ಅವರ ಹೇಳಿಕೆಗೆ ಮಾಧ್ಯಮ ಪ್ರತಿನಿಧಿಗಳು ಮುಂದಾಗಿದ್ದು, ಆದರೆ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲೇ ತುಂಬಿ ತುಳುಕುತ್ತಿದ್ದಾರೆ ಲಿಂಗಾಯತ ಅಧಿಕಾರಿಗಳು: ಪಟ್ಟಿ ವೈರಲ್

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕುರಿತು‌ ಬೆಂಗಳೂರಿನಲ್ಲಿ‌ ನಡೆದ ಹಾನಗಲ್ ಕುಮಾರಸ್ವಾಮೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿದ್ದೆ. ಆ ಹೇಳಿಕೆಗೆ ನಾನು ಬದ್ದ ಎಂದು ಕಾಂಗ್ರೆಸ್ ಶಾಸಕ ಹಾಗೂ‌ ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೊಂದು ಸರ್ಕಾರ ಬಂದಾಗ ಒಂದೊಂದು‌ ರೀತಿ ಇರುತ್ತದೆ. ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಅನ್ಯಾಯ ಆಗುತ್ತಿರುವುದು ನಿಜ. ಅದೇ ಕಾರಣಕ್ಕೆ ಈ ವಿಚಾರ ಹೊರಗೆ ಬಂದಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:56 pm, Fri, 6 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ