AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್‌ ಆಸ್ತಿಯಾದ ದಾವಣಗೆರೆ ಪಿಜೆ ಬಡಾವಣೆಯ ಈಗಿನ ಮಾರುಕಟ್ಟೆ ದರ ಕೇಳಿದ್ರೆ ಶಾಕ್ ಆಗುತ್ತೆ!

ಕರ್ನಾಟಕದಲ್ಲಿ ಈಗ ಎಲ್ಲಿ ನೋಡಿದರಲ್ಲಿ ವಕ್ಫ್ ಆಸ್ತಿ ವಿಚಾರ ಚರ್ಚೆ ಆಗುತ್ತಿದೆ. ಇತ್ತೀಚಿಗೆ ರಾಜ್ಯದಲ್ಲಿ ವಕ್ಫ ಆಸ್ತಿ ಶೇಖಡಾ 32 ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ. ಇದರ ಮಧ್ಯ ದಾವಣಗೆರೆ ಜಿಲ್ಲಾ ಕೇಂದ್ರದ ಹೃದಯ ಭಾಗದ ಪ್ರತಿಷ್ಟಿತ ಬಡಾವಣೆ, ಪ್ರಮುಖ ವಾಣಿಜ್ಯ ಪ್ರದೇಶದ ಸಾವಿರಾರು ಆಸ್ತಿ ವಕ್ಫ್ ಆಸ್ತಿಯಾದ ಸಂಗತಿ ಬೆಳಕಿಗೆ ಬಂದಿದೆ. ಇನ್ನು ಇದರ ಮಾರುಕಟ್ಟೆ ಮೌಲ್ಯ ಕೇಳಿದ್ರೆ ಒಂದು ಕ್ಷಣ ಶಾಕ್ ಆಗುವುದಂತೂ ಗ್ಯಾರಂಟಿ.

ವಕ್ಫ್‌ ಆಸ್ತಿಯಾದ ದಾವಣಗೆರೆ ಪಿಜೆ ಬಡಾವಣೆಯ ಈಗಿನ ಮಾರುಕಟ್ಟೆ ದರ ಕೇಳಿದ್ರೆ ಶಾಕ್ ಆಗುತ್ತೆ!
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Nov 12, 2024 | 10:17 PM

Share

ದಾವಣಗೆರೆ, (ನವೆಂಬರ್ 12): ಬೆಣ್ಣೆ ನಗರಿ ದಾವಣಗೆರೆಗೂ ಸಹ ವಕ್ಫ್​ ವಿವಾದ ಕಾಲಿಟ್ಡಿದೆ. ಹೌದು.. ನಗರದ ಪ್ರತಿಷ್ಠಿತ ಪಿಜೆ ಬಡಾವಣೆಯ ಒಂದು ಏರಿಯಾ ಸಂಪೂರ್ಣ ವಕ್ಪ್ ಹೆಸರಿಗೆ ಆಗಿದೆ. ಹೌದು.. ಪಿಜೆ ಬಡಾವಣೆಯ ಸರ್ವೇ ನಂಬರ್ 53 ರಲ್ಲಿ ಬರುವ 4 ಎಕರೆ 13 ಗುಂಟೆ ಜಾಗದ ಪಹಣಿಯಲ್ಲಿ ವಕ್ಫ್​ ಎಂದು ಬಂದಿದೆ. 1992-93ರಲ್ಲಿ ಈ ಪಿಜೆ ಬಡಾವಣೆ ಬೀರದೇವರ ಪೂಜಾರಿ ಎಂದು ಕೈ ಬರಹದ ಪಹಣಿಯಲ್ಲಿ ಕಾಣಿಸಿಕೊಂಡಿದೆ. ಆದ್ರೆ, ಈ ವಕ್ಫ್​ ಎಂದು ನಮೂದಾಗಿದೆ. ಒಟ್ಟು ನಾಲ್ಕು ಎಕರೆ 13 ಗುಂಟೆ ಜಮೀನು. ಒಂದು ಲಕ್ಷ 88 ಸಾವಿರದ 397 ಚದರ್ ಅಡಿ ಇದ್ದು, ಒಂದು ಚದರ್ ಅಡಿಗೆ 15 ಸಾವಿರ ರೂಪಾಯಿ ಇದೆ. ಹೀಗಾಗಿ ಇದರ ಒಟ್ಟು ಮೌಲ್ಯ 565 ಕೋಟಿ ರೂಪಾಯಿ.

565 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿ

ಪಿಜೆ ಬಡಾವಣೆಯ ಸರ್ವೇ ನಂಬರ್ 53 ರಲ್ಲಿ ಬರುವ 4 ಎಕರೆ 13 ಗುಂಟೆ ಜಾಗದ ಪಹಣಿಯಲ್ಲಿ ವಕ್ಫ್​ ಎಂದು ಬಂದಿದೆ. 1992-93ರಲ್ಲಿ ಈ ಪಿಜೆ ಬಡಾವಣೆ ಬೀರದೇವರ ಪೂಜಾರಿ ಎಂದು ಕೈ ಬರಹದ ಪಹಣಿಯಲ್ಲಿ ಕಾಣಿಸಿಕೊಂಡಿದೆ. ಆದ್ರೆ, ಈ ವಕ್ಫ್​ ಎಂದು ನಮೂದಾಗಿದೆ. ಒಟ್ಟು ನಾಲ್ಕು ಎಕರೆ 13 ಗುಂಟೆ ಜಮೀನು. ಒಂದು ಲಕ್ಷ 88 ಸಾವಿರದ 397 ಚದರ್ ಅಡಿ ಇದ್ದು, ಒಂದು ಚದರ್ ಅಡಿಗೆ 15 ಸಾವಿರ ರೂಪಾಯಿ ಇದೆ. ಹೀಗಾಗಿ ಇದರ ಒಟ್ಟು ಮೌಲ್ಯ 565 ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಇಷ್ಟೊಂದು ಬೆಲೆ ಬಾಳುವ ಈ ಪ್ರದೇಶದ ವಿಚಾರ ಬಿರುಗಾಳಿ ಎಬ್ಬಿಸಿರುವುದು ಸುಳ್ಳಲ್ಲ.

9 ವರ್ಷಗಳ ಹಿಂದೆ ಪಹಣಿಯಲ್ಲಿ ವಕ್ಫ್ ಮಂಡಳಿ ಆಸ್ತಿಯೆಂದು ಹೆಸರು ಸೇರ್ಪಡೆಯಾಗಿದೆ. ಪಿಜೆ ಬಡಾವಣೆಯ ರಿ.ಸ.ನಂ.53ರ ಪಹಣಿಯಲ್ಲಿ ವಕ್ಫ್ ಹೆಸರು ಬಂದಿದೆ. ಖಬರಸ್ಥಾನ ಸುನ್ನಿ ವಕ್ಫ್ ಸಂಸ್ಥೆ ಹೆಸರಲ್ಲಿ ನೋಂದಣಿಯಾಗಿದ್ದು, ದಾಖಲೆಗಳಲ್ಲಿ ಕಂಡುಬರುತ್ತಿದೆ. 2015ರಲ್ಲಿ ಮ್ಯೂಟೇಷನ್ ರಿಜಿಸ್ಟರ್‌, ಕೋರ್ಟ್ ಆದೇಶದಂತೆ ಮ್ಯೂಟೇಷನ್ ಅಂತಾ ದಾಖಲೆಗಳಲ್ಲಿ ಉಲ್ಲೇಖ ಮಾಡಲಾಗಿದೆ.

1985-86ರಲ್ಲಿ ಎಂಆರ್ ನಂಬರ್ 54/85-86ರಡಿ 4.13 ಎಕರೆಯನ್ನು ಖಬರಸ್ಥಾನ ಸುನ್ನಿ ವಕ್ಫ್ ಸಂಸ್ಥೆಯೆಂದು ಪಹಣಿಯಲ್ಲಿ ಇರುತ್ತದೆ. ಪಿ.ಜೆ. ಬಡಾವಣೆಯ ಒಂದು ಇಡೀ ಭಾಗವೇ ವಕ್ಫ್ ಹೆಸರಿಗೆ ಹೋಗಿದ್ದು ಹೇಗೆ ಎನ್ನುವುದದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ