AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ 5 ವರ್ಷಗಳಲ್ಲಿ ಸ್ಮಶಾನ ಸೇರಿದ ಗೃಹಿಣಿ, ಗಂಡನ ವಿವಾಹೇತರ ಸಂಬಂಧ ಕಾರಣವಾಯಿತಾ?

ಅವರಿಬ್ಬರದ್ದೂ ಸುಂದರವಾದ ಸಂಸಾರ, ಅ ಸಂಸಾರಕ್ಕೆ ಮುದ್ದಾದ ಇಬ್ಬರು ಮಕ್ಕಳು, ಆದರೆ ಏನಾಯಿತು ಏನೋ ಗೊತ್ತಿಲ್ಲ.. ಅ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ತವರು ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬರುತ್ತಿದ್ದು, ಮುದ್ದಾದ ಮಕ್ಕಳು ಮಾತ್ರ ಅನಾಥವಾಗಿವೆ.

ಮದುವೆಯಾಗಿ 5 ವರ್ಷಗಳಲ್ಲಿ ಸ್ಮಶಾನ ಸೇರಿದ ಗೃಹಿಣಿ, ಗಂಡನ ವಿವಾಹೇತರ ಸಂಬಂಧ ಕಾರಣವಾಯಿತಾ?
ಸ್ಮಶಾನ ಸೇರಿದ ಗೃಹಿಣಿ, ಗಂಡನ ವಿವಾಹೇತರ ಸಂಬಂಧ ಕಾರಣವಾ ?
TV9 Web
| Edited By: |

Updated on: May 19, 2023 | 4:57 PM

Share

ಅವರಿಬ್ಬರದ್ದೂ ಸುಂದರವಾದ ಸಂಸಾರ, ಅ ಸಂಸಾರಕ್ಕೆ ಮುದ್ದಾದ ಇಬ್ಬರು ಮಕ್ಕಳು, ಆದರೆ ಏನಾಯಿತು ಏನೋ ಗೊತ್ತಿಲ್ಲ.. ಅ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ತವರು ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬರುತ್ತಿದ್ದು, ಮುದ್ದಾದ ಮಕ್ಕಳು ಮಾತ್ರ ಅನಾಥವಾಗಿವೆ.. ಹಾಗಾದ್ರೆ ಅದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ

ಫೋಟೋದಲ್ಲಿ ಕಾಣುವ ಮುದ್ದಾದ ಕುಟುಂಬವನ್ನು ನೋಡಿದ್ರೆ ಯಾರಿಗಾದ್ರು ಅನ್ನಿಸಬಹುದು ಅದು ನಿಜಕ್ಕೂ ಸುಖೀ ಕುಟುಂಬವೆಂದು. ಆದರೆ ದೂರದ ಬೆಟ್ಟ ನುಣ್ಣಗೆ ಎನ್ನುವಂತೆ.. ಈ ಕುಟುಂಬದಲ್ಲಿ ಬಿರುಕು ಕಂಡಿದ್ದು, ಅದು ಗೃಹಿಣಿಯ ಸಾವಿನಲ್ಲಿ ಅಂತ್ಯವಾಗಿದೆ. ಹೌದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಅಶೋಕ್ ಕಳೆದ 5 ವರ್ಷಗಳ ಹಿಂದೆ ದಾವಣಗೆರೆ ನಗರದ ಅನಿತಾ ಎನ್ನುವರನ್ನು ಮದುವೆ ಯಾಗಿದ್ದರು.

ಆಲ್ಲದೆ ಒಳ್ಳೆಯ ಯುವಕ. ರೂಪವಂತ, ಶೋ ರೂಂ ಒಂದರಲ್ಲಿ ಕೆಲಸ ಮಾಡಿಕೊಂಡ ಜೀವನ ನಡೆಸುತ್ತಾನೆ. ತನ್ನ ಮಗಳನ್ನು ಸುಖವಾಗಿ ನೋಡಿಕೊಳ್ಳುತ್ತಾನೆ ಎನ್ನುವ ನಂಬಿಕೆಯಲ್ಲಿ ಅನಿತಾಳನ್ನು ಮದುವೆ ಮಾಡಿಕೊಟ್ಟಿದ್ದರು.‌ ಮದುವೆಯಾಗಿ ಐದು ವರ್ಷಾಗಿದ್ದು, ಇಬ್ಬರು ಮುದ್ದಾದ ಮಕ್ಕಳನ್ನು ಕೂಡ ಹೊಂದಿದ್ದಳು. ಆದರೆ ಗುರುವಾರ ಏಕಾಏಕಿ ಅತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ತವರು ಮನೆಯವರಿಗೆ ನಾನಾ ಅನುಮಾನಗಳಿಗೆ ಎಡೆ ಮಾಡಿಕೊಟ್ಡಿದೆ.

ಇನ್ನು ಅನಿತಾ ವಿಷ ಕುಡಿದು ಅತ್ಮಹತ್ಯೆ ಮಾಡಿಕೊಂಡಿದ್ದರೂ ಕೂಡ ತವರು ಮನೆಗೆ ತಿಳಿಸದೆ ಮುಚ್ಚಿಟ್ಟಿದ್ದರು. ಬೇರೆಯವರಿಂದ ವಿಷಯ ತಿಳಿದ ತವರು ಮನೆಯವರು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿ ಗೋಳಾಡಿ, ಗಂಡನ ಮನೆಯವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.. ಅಲ್ಲದೆ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದು, ಅನಿತಾ ಕೂಡ ಅವರ ಅಕ್ಕಂದಿರ ಜೊತೆ ಹೇಳಿಕೊಂಡಿದ್ದಳಂತೆ.‌ ಅಲ್ಲದೆ ಅಶೋಕ್‌ ಗೆ ಬೇರೆ ಯುವತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದರು. ಅದ್ದರಿಂದ ನನ್ನ ತಂಗಿಗೆ ಕಿರುಕುಳ ನೀಡಿ, ಸಾಯಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಒಟ್ಟಾರೆಯಾಗಿ ಅನಿತಾಳ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಸವಪಟ್ಟಣ ಪೊಲೀಸರು ತನಿಖೆ ಕೈಗೊಂಡಿದ್ದು, ತಮ್ಮ ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ವರದಿ: ಬಸವರಾಜ್ ದೊಡ್ಡಮ್ಮನಿ, ಟಿವಿ9, ದಾವಣಗೆರೆ

ಮತ್ತಷ್ಟು ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್