ಮದುವೆಯಾಗಿ 5 ವರ್ಷಗಳಲ್ಲಿ ಸ್ಮಶಾನ ಸೇರಿದ ಗೃಹಿಣಿ, ಗಂಡನ ವಿವಾಹೇತರ ಸಂಬಂಧ ಕಾರಣವಾಯಿತಾ?

ಅವರಿಬ್ಬರದ್ದೂ ಸುಂದರವಾದ ಸಂಸಾರ, ಅ ಸಂಸಾರಕ್ಕೆ ಮುದ್ದಾದ ಇಬ್ಬರು ಮಕ್ಕಳು, ಆದರೆ ಏನಾಯಿತು ಏನೋ ಗೊತ್ತಿಲ್ಲ.. ಅ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ತವರು ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬರುತ್ತಿದ್ದು, ಮುದ್ದಾದ ಮಕ್ಕಳು ಮಾತ್ರ ಅನಾಥವಾಗಿವೆ.

ಮದುವೆಯಾಗಿ 5 ವರ್ಷಗಳಲ್ಲಿ ಸ್ಮಶಾನ ಸೇರಿದ ಗೃಹಿಣಿ, ಗಂಡನ ವಿವಾಹೇತರ ಸಂಬಂಧ ಕಾರಣವಾಯಿತಾ?
ಸ್ಮಶಾನ ಸೇರಿದ ಗೃಹಿಣಿ, ಗಂಡನ ವಿವಾಹೇತರ ಸಂಬಂಧ ಕಾರಣವಾ ?
Follow us
| Updated By: ಸಾಧು ಶ್ರೀನಾಥ್​

Updated on: May 19, 2023 | 4:57 PM

ಅವರಿಬ್ಬರದ್ದೂ ಸುಂದರವಾದ ಸಂಸಾರ, ಅ ಸಂಸಾರಕ್ಕೆ ಮುದ್ದಾದ ಇಬ್ಬರು ಮಕ್ಕಳು, ಆದರೆ ಏನಾಯಿತು ಏನೋ ಗೊತ್ತಿಲ್ಲ.. ಅ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ತವರು ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬರುತ್ತಿದ್ದು, ಮುದ್ದಾದ ಮಕ್ಕಳು ಮಾತ್ರ ಅನಾಥವಾಗಿವೆ.. ಹಾಗಾದ್ರೆ ಅದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ

ಫೋಟೋದಲ್ಲಿ ಕಾಣುವ ಮುದ್ದಾದ ಕುಟುಂಬವನ್ನು ನೋಡಿದ್ರೆ ಯಾರಿಗಾದ್ರು ಅನ್ನಿಸಬಹುದು ಅದು ನಿಜಕ್ಕೂ ಸುಖೀ ಕುಟುಂಬವೆಂದು. ಆದರೆ ದೂರದ ಬೆಟ್ಟ ನುಣ್ಣಗೆ ಎನ್ನುವಂತೆ.. ಈ ಕುಟುಂಬದಲ್ಲಿ ಬಿರುಕು ಕಂಡಿದ್ದು, ಅದು ಗೃಹಿಣಿಯ ಸಾವಿನಲ್ಲಿ ಅಂತ್ಯವಾಗಿದೆ. ಹೌದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಅಶೋಕ್ ಕಳೆದ 5 ವರ್ಷಗಳ ಹಿಂದೆ ದಾವಣಗೆರೆ ನಗರದ ಅನಿತಾ ಎನ್ನುವರನ್ನು ಮದುವೆ ಯಾಗಿದ್ದರು.

ಆಲ್ಲದೆ ಒಳ್ಳೆಯ ಯುವಕ. ರೂಪವಂತ, ಶೋ ರೂಂ ಒಂದರಲ್ಲಿ ಕೆಲಸ ಮಾಡಿಕೊಂಡ ಜೀವನ ನಡೆಸುತ್ತಾನೆ. ತನ್ನ ಮಗಳನ್ನು ಸುಖವಾಗಿ ನೋಡಿಕೊಳ್ಳುತ್ತಾನೆ ಎನ್ನುವ ನಂಬಿಕೆಯಲ್ಲಿ ಅನಿತಾಳನ್ನು ಮದುವೆ ಮಾಡಿಕೊಟ್ಟಿದ್ದರು.‌ ಮದುವೆಯಾಗಿ ಐದು ವರ್ಷಾಗಿದ್ದು, ಇಬ್ಬರು ಮುದ್ದಾದ ಮಕ್ಕಳನ್ನು ಕೂಡ ಹೊಂದಿದ್ದಳು. ಆದರೆ ಗುರುವಾರ ಏಕಾಏಕಿ ಅತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ತವರು ಮನೆಯವರಿಗೆ ನಾನಾ ಅನುಮಾನಗಳಿಗೆ ಎಡೆ ಮಾಡಿಕೊಟ್ಡಿದೆ.

ಇನ್ನು ಅನಿತಾ ವಿಷ ಕುಡಿದು ಅತ್ಮಹತ್ಯೆ ಮಾಡಿಕೊಂಡಿದ್ದರೂ ಕೂಡ ತವರು ಮನೆಗೆ ತಿಳಿಸದೆ ಮುಚ್ಚಿಟ್ಟಿದ್ದರು. ಬೇರೆಯವರಿಂದ ವಿಷಯ ತಿಳಿದ ತವರು ಮನೆಯವರು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿ ಗೋಳಾಡಿ, ಗಂಡನ ಮನೆಯವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.. ಅಲ್ಲದೆ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದು, ಅನಿತಾ ಕೂಡ ಅವರ ಅಕ್ಕಂದಿರ ಜೊತೆ ಹೇಳಿಕೊಂಡಿದ್ದಳಂತೆ.‌ ಅಲ್ಲದೆ ಅಶೋಕ್‌ ಗೆ ಬೇರೆ ಯುವತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದರು. ಅದ್ದರಿಂದ ನನ್ನ ತಂಗಿಗೆ ಕಿರುಕುಳ ನೀಡಿ, ಸಾಯಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಒಟ್ಟಾರೆಯಾಗಿ ಅನಿತಾಳ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಸವಪಟ್ಟಣ ಪೊಲೀಸರು ತನಿಖೆ ಕೈಗೊಂಡಿದ್ದು, ತಮ್ಮ ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ವರದಿ: ಬಸವರಾಜ್ ದೊಡ್ಡಮ್ಮನಿ, ಟಿವಿ9, ದಾವಣಗೆರೆ

ಮತ್ತಷ್ಟು ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್